Karnataka ಇಬ್ಬರು ಸಚಿವರನ್ನು ಕೈ ಬಿಡಲು ಬಿಜೆಪಿ ಆಗ್ರಹ
Team Udayavani, Sep 11, 2023, 8:45 PM IST
ಬೆಂಗಳೂರು: ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯದ ಇಬ್ಬರು ಸಚಿವರನ್ನು ತಕ್ಷಣ ಸಂಪುಟದಿಂದ ಕೈ ಬಿಡುವಂತೆ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಚಿವ ಡಿ.ಸುಧಾಕರ್ ವಿರುದ್ಧ ದಲಿತ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಎಫ್ಐಆರ್ ದಾಖಲಾದ ತಕ್ಷಣ ಅವರನ್ನು ಬಂಧಿಸಬೇಕಿತ್ತು. ಆದರೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಜಾತಿ ನಿಂದನೆ ಮಾಡಿದ ಚಿತ್ರನಟ ಉಪೇಂದ್ರ ವಿರುದ್ಧ ತೀಕ್ಷ್ಣ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಹಳ್ಳಿಗಳನ್ನು ಹೊಲಗೇರಿ ಮಾಡಬೇಡಿ ಎಂದಿದ್ದರು. ಆ ವಿಡಿಯೋ ಓಡಾಡುತ್ತಿದ್ದರೂ ದೂರು ದಾಖಲಿಸಿ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ದೌರ್ಜನ್ಯ ಕಾಯಿದೆಯಡಿ ಕೇಸು ಬಂದಾಗ ತಕ್ಷಣ ಕ್ರಮಕ್ಕೆ ಸಿಎಂ ಸೂಚಿಸಿದ್ದಾರೆ. ಡಿಸಿಪಿ ಸಂಬರಗಿ ಎಂಬವರು ದಲಿತರ ನಿಂದನೆ ಮಾಡಿದರೂ ಇಲಾಖೆ ಮತ್ತು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ದಲಿತರ ಹಕ್ಕು ರಕ್ಷಿಸುವುದಾಗಿ, ಅವರ ಪರ ಇರುವುದಾಗಿ ಸಿಎಂ ಹೇಳುತ್ತಾರೆ. ಇದೆಲ್ಲ ಗೋಸುಂಬೆ ರಾಜಕಾರಣ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಬಾಯಲ್ಲಿ ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬಂತಾಗಿದೆ. ಈ ಸರ್ಕಾರದ್ದು ಇಬ್ಬಗೆಯ ನೀತಿ. ಮುಖ್ಯಮಂತ್ರಿಗಳು ದಲಿತ ವಿರೋಧಿ ಎಂಬುದಕ್ಕೆ ಇವೇ ನಿದರ್ಶನ. ಸುಧಾಕರ್, ಮಲ್ಲಿಕಾರ್ಜುನ್ ಅವರನ್ನು ಮಂತ್ರಿಮಂಡಲದಿಂದ ಕಿತ್ತೆಸೆಯಬೇಕಿತ್ತು. ಈ ಇಬ್ಬರನ್ನು ಸಚಿವ ಸಂಪುಟದಿಂದ ಕೈಬಿಡದಿದ್ದರೆ ಇಡೀ ರಾಜ್ಯದಲ್ಲಿ ದಲಿತರು ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.