Cricket Stadium ಶೀಘ್ರ ಪುತ್ತೂರಿನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ಭರವಸೆ


Team Udayavani, Sep 12, 2023, 12:25 AM IST

Cricket Stadium ಶೀಘ್ರ ಪುತ್ತೂರಿನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ಭರವಸೆ

ಪುತ್ತೂರು: ಪುತ್ತೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆಂದು ಕಬಕ ಗ್ರಾಮದ ಸರ್ವೆ ನಂ.260/1ಪಿನಲ್ಲಿ 23.25 ಎಕ್ರೆ ಜಮೀನು ಕಾದಿರಿಸಿದರೂ, ಕ್ರೀಡಾಂಗಣ ನಿರ್ಮಾಣಕ್ಕೆ ಯಾವುದೇ ಕ್ರಮ ಕೈಗೊಳ್ಳದೇ ಇರುವ ಹಿನ್ನೆಲೆಯಲ್ಲಿ ಪುತ್ತೂರು ಕ್ರಿಕೆಟ್‌ ಯೂನಿಯನ್‌ ಪದಾಧಿಕಾರಿಗಳು ಶಾಸಕರ ಮೂಲಕ ಇಲಾಖೆಯ ಗಮನಕ್ಕೆ ತಂದಿದ್ದರು.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಎಸೋಸಿಯೇಶನ್‌ ಅಧ್ಯಕ್ಷ ರಘುರಾಮ ಭಟ್‌ ಅವರು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರನ್ನು ಭೇಟಿ ಮಾಡಿ ಅತಿ ಶೀಘ್ರದಲ್ಲಿ ಪುತ್ತೂರಿನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಭರವಸೆ ನೀಡಿದ್ದಾರೆ.

ಸ್ಥಳೀಯ ಕ್ರಿಕೆಟ್‌ ಕ್ರೀಡಾಪಟುಗಳಿಗೆ ತರಬೇತಿ ನೀಡುವುದು ಮತ್ತು ಕ್ರಿಕೆಟ್‌ ಆಟವನ್ನು ಇನ್ನಷ್ಟೂ ಅಭಿವೃದ್ಧಿ ಪಡಿಸುವುದು ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದಿರುವ ಪ್ರಮುಖ ಉದ್ದೇಶವಾಗಿದೆ. ಇದರ ಜತೆಗೆ ಜಿಲ್ಲಾ ಕೇಂದ್ರವಾಗಲು ಎಲ್ಲಾ ಅರ್ಹತೆ ಹೊಂದಿರುವ ಪುತ್ತೂರಿಗೆ ಸುಸಜ್ಜಿತ ಕ್ರಿಕೆಟ್‌ ಕ್ರೀಡಾಂಗಣದ ಅವಶ್ಯಕತೆಯೂ ಇತ್ತು.

ಈ ಕ್ರೀಡಾಂಗಣದಿಂದಾಗಿ ಪ್ರವಾಸೋದ್ಯಮ, ಸ್ಥಳೀಯರಿಗೆ ಉದ್ಯೋಗಾವಕಾಶ ಹಾಗೂ ನಗರದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕ್ರೀಡಾಂಗಣಕ್ಕೆ ಕಬಕ ಮತ್ತು ಬಲಾ°ಡು ಮೂಲಕ ರಸ್ತೆಯ ವ್ಯವಸ್ಥೆಯಿದೆ. ಈ ಹಿಂದೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದರೆ ಇದನ್ನು ಅಭಿವೃದ್ಧಿ ಪಡಿಸುವ ಕಾರ್ಯ ನಡೆಯದಿದ್ದಾಗ ಪುತ್ತೂರು ಕ್ರಿಕೆಟ್‌ ಯೂನಿಯನ್‌ ಕ್ಲಬ್‌ ಶಾಸಕರ ಗಮನಕ್ಕೆ ತಂದಿದ್ದರು.

ಈ ಸಂದರ್ಭದಲ್ಲಿ ಶಾಸಕರು ಕೆಲವು ಮಹತ್ವದ ಸಲಹೆ ಸೂಚನೆಗಳನ್ನು ನೀಡಿದರು. ಶಾಸಕರು ಜಿಲ್ಲಾಧಿಕಾರಿಗಳ ಮೂಲಕ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮತಿ ನೀಡುವಲ್ಲಿ ಸಫಲರಾಗಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಮತ್ತು ಪುತ್ತೂರು ಕ್ರಿಕೆಟ್‌ ಯೂನಿಯನ್‌ ಕ್ಲಬ್‌ನ ಉಪಾಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್‌ ಕೌಶಲ್‌ ಶೆಟ್ಟಿ, ಮಂಗಳೂರು ಝೋನ್‌ ಅಧ್ಯಕ್ಷ ಮನೋಹರ್‌ ಅಮೀನ್‌, ಪುತ್ತೂರು ಝೋನ್‌ ಅಧ್ಯಕ್ಷ ಮತ್ತು ಪುತ್ತೂರು ಯೂನಿಯನ್‌ ಕ್ರಿಕೆಟರ್ ಕ್ಲಬ್‌ ಸಂಚಾಲಕ ವಿಶ್ವನಾಥ್‌ ನಾಯಕ್‌, ಮಂಗಳೂರು ಝೋನ್‌ ಸಂಚಾಲಕ ರತನ್‌, ಬೆಂಗಳೂರಿನ ಕೆ.ಸಿ.ಎ. ಕೋಚ್‌ ಜಯರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.