ʼKerala Storyʼ ʼಕಾಶ್ಮೀರ್‌ ಫೈಲ್ಸ್‌ʼ.. ನಂತಹ ಸಿನಿಮಾಗಳ ಜನಪ್ರಿಯತೆ ಸಮಾಜಕ್ಕೆ ಅಪಾಯಕಾರಿ


Team Udayavani, Sep 12, 2023, 1:30 PM IST

TDY-10

ಮುಂಬಯಿ: ತನ್ನ ನಟನೆ ಮೂಲಕ ಬಾಲಿವುಡ್‌ ಮಾತ್ರವಲ್ಲದೆ ಹಾಲಿವುಡ್‌ ನಲ್ಲೂ ಮಿಂಚಿರುವ ನಸೀರುದ್ದೀನ್ ಶಾ ಅವರು ತನ್ನ ಹೇಳಿಕೆಗಳಿಂದಲೂ ಅನೇಕ ಬಾರಿ ಸುದ್ದಿಯಾಗಿದ್ದಾರೆ. ಇದೀಗ ಬಾಲಿವುಡ್‌ ಸಿನಿಮಾಗಳನ್ನು ಟೀಕಿಸಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

2006 ರಲ್ಲಿʼ ಯು ಹೋತಾ ತೋ ಕ್ಯಾ ಹೋತಾʼ ಸಿನಿಮಾವನ್ನು ನಸೀರುದ್ದೀನ್ ಶಾ ನಿರ್ದೇಶನ ಮಾಡಿದ್ದರು. ಇದೀಗ 17 ವರ್ಷಗಳ ಬಳಿಕ ಮತ್ತೆ “ಮೆನ್‌ ವುಮನ್‌ ಮೆನ್‌ ವುಮನ್‌” ಸಿನಿಮಾದ ಮೂಲಕ ಮತ್ತೆ ನಿರ್ದೇಶನಕ್ಕಿಳಿಯಲಿದ್ದಾರೆ.

ಇತ್ತೀಚೆಗೆ ಅವರು ಸಂದರ್ಶನವೊಂದರಲ್ಲಿ ಬಾಲಿವುಡ್‌ ಸಿನಿಮಾಗಳಾದ ʼಗದರ್-2‌ʼ, ಕಾಶ್ಮೀರ್‌ ಫೈಲ್ಸ್‌ʼ ಹಾಗೂ ʼಕೇರಳ ಸ್ಟೋರಿʼ ಸಿನಿಮಾಗಳು ಸಮಾಜಕ್ಕೆ ಹಾನಿಕಾರವೆಂದು ಹೇಳಿ ಸುದ್ದಿಯಾಗಿದ್ದಾರೆ.

“ನೀವು ತೀವ್ರ ರಾಷ್ಟ್ರೀಯವಾದಿಯಾಗಿದ್ದರೆ  ಹೆಚ್ಚು ಜನಪ್ರಿಯರಾಗುತ್ತೀರಿ. ಯಾಕೆಂದರೆ ದೇಶವನ್ನೀಗ ಇದೇ(ರಾಷ್ಟ್ರೀಯವಾದ) ಆಳುತ್ತಿದೆ. ದೇಶದ ಮೇಲೆ ಪ್ರೀತಿ ತೋರಿಸಿದರೆ ಸಾಕಾಗದು ಅದನ್ನು ನಾವು ಡಂಗುರ ಸಾರಿದಂತೆ ಹೇಳಬೇಕು. ಅಷ್ಟೇ ಅಲ್ಲ ಕಾಲ್ಪನಿಕ ಶತ್ರುಗಳನ್ನು ಸೃಷ್ಟಿಸಿಕೊಳ್ಳಬೇಕು. ಜನರಿಗೆ ಇದು ತುಂಬಾ ಅಪಾಯಕಾರಿ ಎಂದು ತಿಳಿದಿಲ್ಲ. ‘ಕೇರಳ ಸ್ಟೋರಿ’ ಮತ್ತು ‘ಗದರ್ 2’ ನಂತಹ ಚಲನಚಿತ್ರಗಳನ್ನು ನಾನು ನೋಡಿಲ್ಲ ಆದರೆ ಅವುಗಳು ಏನನ್ನು ಹೇಳುತ್ತವೆ ಎನ್ನುವುದು ನನಗೆ ತಿಳಿದಿದೆ” ಎಂದಿದ್ದಾರೆ.

ಇದನ್ನೂ ಓದಿ: Morocco Earthquake: ಮೃತರ ಸಂಖ್ಯೆ 2,900 ಕ್ಕೆ ಏರಿಕೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ

ʼಕಾಶ್ಮೀರ್‌ ಫೈಲ್ಸ್‌ʼ ನಂತಹ ಸಿನಿಮಾಗಳು ಬಹಳ ಜನಪ್ರಿಯತೆ ಆಗಿರುವುದು ಹಾನಿಕಾರ. ಸತ್ಯವನ್ನು ಬಿಂಬಿಸುವ ಸಿನಿಮಾಗಳನ್ನು ನೀಡುವ ಸುಧೀರ್ ಮಿಶ್ರಾ, ಅನುಭವ್ ಸಿನ್ಹಾ ಮತ್ತು ಹನ್ಸಲ್ ಮೆಹ್ತಾ ಅವರ ಚಿತ್ರಗಳನ್ನು ಜನ ನೋಡಲ್ಲ. ಆದರೆ ಅವರು ಸೋಲದೆ ಕಥೆಯನ್ನು ಹೇಳುತ್ತಾ ಹೋಗುತ್ತಿರುವುದು ಬಹಳ ಮುಖ್ಯ” ಎಂದು ಅವರು ಹೇಳಿದ್ದಾರೆ.

“100 ವರ್ಷದ ಬಳಿಕ ಜನ “ಭೀಡ್”‌ ಹಾಗೂ ʼಗದರ್-2‌ʼ ಸಿನಿಮಾವನ್ನು ನೋಡುತ್ತಾರೆ. ಇದರಲ್ಲಿ ನಮ್ಮ ಕಾಲದ ಸತ್ಯವನ್ನು ಬಿಂಬಿಸುವ ಸಿನಿಮಾ ಯಾವುದೆಂದು ಗೊತ್ತಾಗುತ್ತದೆ. ಏಕೆಂದರೆ ಚಲನಚಿತ್ರವು ಮಾಧ್ಯಮ ಈ ರೀತಿ ಮಾಡಬಲ್ಲದು” ಎಂದು ನಟ ಹೇಳಿದ್ದಾರೆ.

“ತಪ್ಪು ವಿಷಯಗಳನ್ನು ಹೊಗಳುವ ಮತ್ತು ಯಾವುದೇ ಕಾರಣವಿಲ್ಲದೆ ಇತರ ಸಮುದಾಯಗಳತ್ತ  ಗುರಿಯಾಗಿಸಿ ಬರುವ ಸಿನಿಮಾಗಳನ್ನು ಮಾಡಲು ನಿರ್ದೇಶಕರು ಸಹಕಾರ ನೀಡುತ್ತಿರುವುದು ನಿಜಕ್ಕೂ ಅಪಾಯಕಾರಿ ಪ್ರವೃತ್ತಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.