Mangaluru University: ಗಣೇಶ ಹಬ್ಬಕ್ಕೆ ಬಂದ “ವಿಘ್ನ’ ನಿವಾರಣೆ
Team Udayavani, Sep 13, 2023, 12:42 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿಯೇ ಗಣೇಶ ಚತುರ್ಥಿ ಆಚರಿಸುವ ಮಹತ್ವದ ತೀರ್ಮಾನವನ್ನು ವಿ.ವಿ. ಕೈಗೊಂಡಿದ್ದು, “ವಿವಾದ’ಕ್ಕೆ ಸದ್ಯ ತೆರೆಬಿದ್ದಿದೆ.
ಕುಲಪತಿ ಪ್ರೊ| ಜಯರಾಜ್ ಅಮೀನ್ “ಉದಯವಾಣಿ’ಗೆ ಪ್ರತಿಕ್ರಿ ಯಿಸಿ, ವಿ.ವಿ. ಆವರಣದಲ್ಲಿ ಗಣೇಶ ಚತುರ್ಥಿ ಆಚರಣೆಗೆ ನಮ್ಮ ವಿರೋಧ ಇರಲಿಲ್ಲ. ಪ್ರತೀ ವರ್ಷದಂತೆ ಮಂಗಳಾ ಸಭಾಂಗಣದಲ್ಲಿಯೇ ಈ ಬಾರಿಯೂ ಆಯೋಜಿಸಲಿದ್ದೇವೆ. ವಿ.ವಿ.ಯ ಹೊರಗಿನ ಭಕ್ತರೂ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಎಂದರು.
ಏನಿದು ವಿವಾದ?: ಈ ಹಿಂದೆ ವಿ.ವಿ.ಯ ಹಾಸ್ಟೆಲ್ನಲ್ಲಿ ಆಚರಿಸ ಲಾಗುತ್ತಿದ್ದ ಚೌತಿ ಹಬ್ಬವನ್ನು ಕೊರೊನಾ ಬಳಿಕ 2 ವರ್ಷಗಳಿಂದ ಮಂಗಳಾ ಸಭಾಂಗಣದಲ್ಲಿ ಆಚರಿಸ ಲಾಗುತ್ತಿದೆ. ಇದರ ವೆಚ್ಚವನ್ನು ವಿ.ವಿ. ಭರಿಸಿರುವುದಕ್ಕೆ ಲೆಕ್ಕಪತ್ರ ಪರಿಶೋಧನೆಯಲ್ಲಿ ಸರಕಾರದಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಬಾರಿ ಮಂಗಳಾ ಸಭಾಂಗಣದಲ್ಲಿ ಆಚರಣೆ ಕುರಿತಂತೆ ಸೂಕ್ತ ನಿರ್ದೇಶನ ಕೋರಿ ಕುಲಪತಿಯವರು ಉನ್ನತ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದರು. ಆ ಪತ್ರ ವೈರಲ್ ಆಗಿದ್ದರಿಂದ ಗಣೇಶ ಚತುರ್ಥಿಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಪರ-ವಿರೋಧ ಚರ್ಚೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.