Chikkaballapur: ಮಳೆ ಕೊರತೆ; ಜಿಲ್ಲೆಯಲ್ಲಿ ಕಡಲೆ ಬಿತ್ತನೆಗೆ ಸಿದ್ಧತೆ


Team Udayavani, Sep 13, 2023, 1:53 PM IST

tdy-12

ಚಿಕ್ಕಬಳ್ಳಾಪುರ: ಮುಂಗಾರು ಹಂಗಾಮಿ ನಲ್ಲಿ ಬಿತ್ತನೆ ಸಮಯಕ್ಕೆ ಸರಿಯಗಿ ಮಳೆ ಕೈ ಕೊಟ್ಟಿದ್ದರಿಂದ ಕಂಗಾಲಾಗಿರುವ ರೈತರಿಗೆ ಕೃಷಿ ಇಲಾಖೆ ಹೊಸ ಬೆಳೆ ಪರಿಚಯಿಸುವ ಮಹತ್ವಕಾಂಕ್ಷಿ ಯೋಜನೆ ರೂಪಿಸಿದ್ದು, ಹಿಂಗಾರು ಮಳೆ ಆಗುವ ಆಶಾಕಿರಣದೊಂದಿಗೆ ಜಿಲ್ಲೆಯಲ್ಲಿ ಹೊಸ ದಾಗಿ ಕಡಲೇ ಕಾಳು ಬಿತ್ತನೆಗೆ ಸದ್ದಿಲ್ಲದೇ ಸಜ್ಜಾಗುತ್ತಿದೆ.

ಹೌದು, ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ಬರ ಖಾಯಂ ಆಗಿದ್ದು, ಇಲ್ಲಿವರೆಗೂ ಜಿಲ್ಲೆಯಲ್ಲಿ ಶೇ.52 ರಷ್ಟು ಮಾತ್ರ ಬಿತ್ತನೆ ಗುರಿ ಸಾಧಿಸಿದ್ದು ಇನ್ನೂ ಶೇ.48 ರಷ್ಟು ಬಿತ್ತನೆ ಕಾರ್ಯ ಜಿಲ್ಲೆಯಲ್ಲಿ ಮಳೆರಾಯನ ಕೃಪೆ ತೋರದ ಕಾರಣ ಆಗಿಲ್ಲ. ಹೀಗಾಗಿ ರೈತರಿಗೆ ಹಿಂಗಾರು ಮಳೆಯಾದರೂ ಕೈ ಹಿಡಿಯಬಹುದೆಂಬ ಲೆಕ್ಕಾಚಾರದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಕಡಲೆ ಕಾಳು ಬಿತ್ತನೆಗೆ ಕೃಷಿ ಇಲಾಖೆ ಮುಂದಾಗಿದೆ.

200 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ: ಈ ವರ್ಷ ಪ್ರಾಯೋಗಿಕವಾಗಿ ಕಡಲೆ ಕಾಳು ಬೆಳೆಯಲು ರೈತರಿಗೆ ಪ್ರೋತ್ಸಾಹಿಸಲು ಮುಂದಾಗಿರುವ ಕೃಷಿ ಇಲಾಖೆ ಬರೋಬ್ಬರಿ 200 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಈ ವರ್ಷ ಕಡಲೆ ಕಾಳು ಬಿತ್ತನೆಗೆ ಯೋಜನೆ ರೂಪಿಸಿದೆ. ಕೃಷಿ ಇಲಾಖೆಯಿಂದ ಆಸಕ್ತ ರೈತರಿಗೆ ಉಚಿತವಾಗಿ ಕಡಲೆ ಕಾಳ ಬಿತ್ತನೆ ಬೀಜ ವಿತರಣೆಗೂ ಮುಂದಾಗಿದ್ದು, ಶೇ.100 ರಷ್ಟು ಸಬ್ಸಿಡಿ ದರದಲ್ಲಿ ರೈತರಿಗೆ ಕಡಲೇ ಕಾಳ ಬಿತ್ತನೆ ಬೀಜ ಉಚಿತವಾಗಿ ಸಿಗಲಿದೆ. ಕಪ್ಪು ಮಿಶ್ರಿತ ಮಣ್ಣಿನಲ್ಲಿ ಮಾತ್ರ ಈ ಬೆಳೆ ಬರುವ ಹಿನ್ನಲೆಯಲ್ಲಿ ಈ ವರ್ಷ 200 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆ ಮಾಡಲು ನಿರ್ಧರಿಸಿದ್ದು, ಸೆಪ್ಪೆಂಬರ್‌ ಅಂತ್ಯಕ್ಕೆ ಅಥವಾ ಅಕ್ಟೋಬರ್‌ ಮೊದಲ ವಾರದಲ್ಲಿ ಬಿತ್ತನೆ ಕಾರ್ಯಕ್ಕೆ ಕೃಷಿ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಹುರುಳಿಗೂ ಆದ್ಯತೆ: ಜಿಲ್ಲೆಯಲ್ಲಿ ಅರ್ಧಕ್ಕರ್ಧ ಬಿತ್ತನೆ ಕುಸಿದಿರುವ ಪರಿಣಾಮ ಜಿಲ್ಲೆಯ ರೈತರು ಈಗಾಗಲೇ ಪರ್ಯಾಯ ಬೆಳೆಯಾಗಿ ಹುರುಳಿ ಬಿತ್ತನೆಗೆ ಸಜ್ಜಾಗುತ್ತಿದ್ದಾರೆ. ಆದರೆ ಕೃಷಿ ಇಲಾಖೆ ಕಡಲೇ ಕಾಳು ಬೆಳೆಯನ್ನು ಪರ್ಯಾಯ ಬೆಳೆಯಾಗಿ ರೈತರಿಗೆ ಪ್ರೋತ್ಸಾಹಿಸಲು ವಿಶೇಷ ಆಸಕ್ತಿ ವಹಿಸಿದ್ದು, ಈಗಾಗಲೇ ಜಿಲ್ಲೆಗೆ ಅವಶ್ಯಕವಾಗಿ ಬೇಕಾದ ಕಡಲೆ ಕಾಳು ಬಿತ್ತನೆ ಬೀಜ ಸೇರಿದಂತೆ ಪೋಷಕಾಂಶಗಳನ್ನು ತರಿಸಿಕೊಳ್ಳುತ್ತಿದೆ. ಇದಕ್ಕಾಗಿ ಕೃಷಿ ಇಲಾಖೆ ಅಧಿಕಾರಿಗಳಿಗೂ ಕೂಡ ಒಂದು ಹಂತದಲ್ಲಿ ತಾಂತ್ರಿಕ ತರಬೇತಿಗಳನ್ನು ನೀಡುವ ಮೂಲಕ ರೈತರ ಹೊಲಗಳಲ್ಲಿ ಕಡಲೇ ಕಾಳು ಬಿತ್ತನೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ತರಬೇತಿ ನೀಡಲಾಗಿದೆ. ಸೆಪ್ಟೆಂಬರ್‌ ಅಂತ್ಯದ ವೇಳೆ ಜಿಲ್ಲೆಯಲ್ಲಿ ಕಡಲೇ ಕಾಳು ಬಿತ್ತನೆ ಕಾರ್ಯ ಶುರುವಾಗಲಿದೆ.

ಪರ್ಯಾಯ ಬೆಳೆ ಬಗ್ಗೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಹೇಳಿದ್ದೇನು?: ಕಳೆದ ಬಾರಿ ಕೆಲವೊಂದು ಕಡೆ ಕಡಲೆ ಕಾಳು ಬಿತ್ತನೆ ಆಗಿದ್ದು ಉತ್ತಮ ಫ‌ಸಲು ಬಂದಿತ್ತು. ಆದರೆ ಈ ವರ್ಷ ತೀವ್ರ ಮಳೆ ಕೊರತೆಯಿಂದಾಗಿ ಬಿತ್ತನೆ ಪ್ರದೇಶ ಹಾಗೆ ಉಳಿದುಕೊಂಡಿದೆ. ರೈತರಿಗೆ ಈ ವರ್ಷ ಪರ್ಯಾಯ ಬೆಳೆಯಾಗಿ ಹುರುಳಿ ಜತೆಗೆ ಕಡಲೇ ಕಾಳು ಬಿತ್ತನೆಗೆ ಪ್ರೋತ್ಸಾಹಿಸಲು ಕೃಷಿ ಇಲಾಖೆ ನಿರ್ಧರಿಸಿದ್ದು, ಸುಮಾರು 200 ಹೆಕ್ಟೇರ್‌ ಪ್ರದೇಶದಲ್ಲಿ ಈ ವರ್ಷ ಬಿತ್ತನೆ ಗುರಿ ಹೊಂದಲಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಶೇ.100 ರಷ್ಟು ಸಬ್ಸಿಡಿ ದರದಲ್ಲಿ ಕಡಲೇ ಕಾಳು ಬಿತ್ತನೆ ಬೀಜಗಳನ್ನು ಆಸಕ್ತ ರೈತರಿಗೆ ವಿತರಿಸಲಾಗುವುದು. ಪ್ರಾತ್ಯಕ್ಷಿಕೆಯಡಿ ಕಡಲೇ ಕಾಳು ಬೆಳೆಯಲು ರೈತರಿಗೆ ಪ್ರೋತ್ಸಾಹಿಸಲಾಗುವುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ಮಂಗಳವಾರ ಉದಯವಾಣಿಗೆ ಮಾಹಿತಿ ನೀಡಿದರು.

ಕಡಲೆ ಕಾಳಿನಲ್ಲಿ ಉತ್ತಮ ಪ್ರೋಟೀನ್‌: ಕಡಲೇ ಕಾಳು ಕೂಡ ಪೌಷ್ಟಿಕ ಆಹಾರದಲ್ಲಿ ಇದು ಸಹ ಒಂದು. ಅದರಲ್ಲೂ ಹೆಚ್ಚು ಪ್ರೋಟೀನ್‌ ಅಂಶ ಇರುವ ಕಾಳುಗೆ ಜಾಗತಿಕವಾಗಿ ಕೂಡ ಬೇಡಿಕೆ. ಇದರ ಬಳಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೃಷಿ ಇಲಾಖೆ ರೈತರಿಗೆ ಒಂದು ರೀತಿ ಕಡಲೇ ಕಾಳುನ್ನು ವಾಣಿಜ್ಯ ಬೆಳೆಯಾಗಿ ಹಾಗೂ ಸ್ವಂತಕ್ಕೆ ಬಳಸಿಕೊಳ್ಳುವ ನಿಟ್ಟಿನಲ್ಲಿ ಪ್ರೋತ್ಸಾಹಿಸಲು ಈಗ ಮುಂದಾಗಿದ್ದು ಪರ್ಯಾಯ ಬೆಳೆಯಾಗಿ ಜಿಲ್ಲೆಗೆ ಪರಿಚಯಿಸುತ್ತಿರುವ ಕೃಷಿ ಇಲಾಖೆ ಕಾರ್ಯಕ್ಕೆ ರೈತರ ಸ್ಪಂದನೆ ಹೇಗೆ ಇರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.