ಏರಿದ ತಾಲೂಕು; ಇಳಿದ ಜಿಲ್ಲಾ ಪಂಚಾಯಿತಿ! ಭವಿಷ್ಯದ ಕನಸು ಹೊತ್ತವರಿಗೆ ನಿರಾಶೆ

ಟಿಕೆಟ್‌ ಹಂಚಿಕೆಯಿಂದ ಹಿಡಿದು ಅನುದಾನ ಬಳಸಿಕೊಳ್ಳಲೂ ಅಡೆತಡೆಯಾಗುವ ಸಾಧ್ಯತೆ ಇದೆ

Team Udayavani, Sep 13, 2023, 1:34 PM IST

ಏರಿದ ತಾಲೂಕು; ಇಳಿದ ಜಿಲ್ಲಾ ಪಂಚಾಯಿತಿ! ಭವಿಷ್ಯದ ಕನಸು ಹೊತ್ತವರಿಗೆ ನಿರಾಶೆ

ಬಾಗಲಕೋಟೆ: ಜಿಪಂ, ತಾಪಂ. ಕ್ಷೇತ್ರ ಪುನರ್‌ ವಿಂಗಡಣೆಯಲ್ಲಿ ಹೊಸದಾಗಿ ಸೃಷ್ಟಿಯಾಗಿದ್ದ ಕ್ಷೇತ್ರಗಳಲ್ಲಿ ತಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಬೇಕೆಂಬ ಕನಸು ಹೊತ್ತಿದ್ದ ಹಲವರಿಗೆ ನಿರಾಶೆಯಾಗಿದೆ. ಹೊಸದಾಗಿ ಕ್ಷೇತ್ರ ಪುನರ್‌ ವಿಂಗಡಣೆ ಮಾಡಲಾಗಿದ್ದು, ತಾಲೂಕು ಪಂಚಾಯಿತಿಗಳ ಸಂಖ್ಯೆ ಏರಿಕೆಯಾದರೆ, ಜಿಪಂ ಕ್ಷೇತ್ರಗಳ ಸಂಖ್ಯೆ ಇಳಿಕೆಯಾಗಿದೆ.

ಹೌದು, ಈ ಹಿಂದೆ ಜಿಲ್ಲೆಯಲ್ಲಿ ಆರು ತಾಲೂಕು ಅಸ್ತಿತ್ವದಲ್ಲಿದ್ದಾಗಲೇ ಜಿಲ್ಲೆಯಲ್ಲಿ 36 ಜಿಪಂ ಕ್ಷೇತ್ರಗಳಿದ್ದವು. ಗುಳೇದಗುಡ್ಡ,
ಇಳಕಲ್ಲ ಹಾಗೂ ರಬಕವಿ-ಬನಹಟ್ಟಿ ಸಹಿತ 9 ಹೊಸ ತಾಲೂಕು ರಚನೆಯಾದಾಗ, ಕಳೆದ 2021ರಲ್ಲಿ ಅಂದಿನ ಬಿಜೆಪಿ ಸರ್ಕಾರ,
ತಾಲೂಕು ಪಂಚಾಯಿತಿ ಸಂಖ್ಯೆ ಇಳಿಸಿ, ಜಿಪಂ ಸಂಖ್ಯೆಗಳನ್ನು 40ಕ್ಕೆ ಏರಿಸಿತ್ತು. ಆಗ ತಾಲೂಕು ಪಂಚಾಯಿತಿ ವ್ಯವಸ್ಥೆಯನ್ನೇ
ರದ್ದುಗೊಳಿಸುತ್ತಾರೆ ಎಂಬ ದೊಡ್ಡ ಚರ್ಚೆಯೂ ನಡೆದಿತ್ತು. ಕೊನೆಗೆ 2021ರ ಮಾರ್ಚ್‌ 29ರಂದು ಅಧಿಸೂಚನೆ ಹೊರಡಿಸಿ, 130 ಇದ್ದ ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು 110ಕ್ಕೆ ಇಳಿಸಿದರೆ, 36ಇದ್ದ ಜಿ.ಪಂ. ಕ್ಷೇತ್ರಗಳನ್ನು 46ಕ್ಕೆ ಏರಿಸಿ, ಹೊಸ ಕ್ಷೇತ್ರಗಳನ್ನು ವಿಂಗಡಣೆ ಮಾಡಲಾಗಿತ್ತು.

ತಾಪಂ ಏರಿಕೆ-ಜಿಪಂ ಇಳಿಕೆ: ಪ್ರಸ್ತುತ ಅಧಿಸೂಚನೆ ಪ್ರಕಾರ, ಕಳೆದ ಬಾರಿ ವಿಂಗಡಿಸಿದ ಬಹುತೇಕ ಹೊಸ ಕ್ಷೇತ್ರಗಳನ್ನು
ರದ್ದುಪಡಿಸಿ, ಈ ಹಿಂದೆ 2016ರಲ್ಲಿ ಇದ್ದ ಕ್ಷೇತ್ರಗಳನ್ನೇ ಬಹುತೇಕ ಉಳಿಸಿಕೊಳ್ಳಲಾಗಿದೆ. ಜಿಪಂ ಕ್ಷೇತ್ರಗಳಲ್ಲಿ ಒಂದನ್ನು ಕಡಿತ ಮಾಡಿದ್ದು, 35 ನಿಗದಿಯಾಗಿವೆ. ತಾಪಂ ಕ್ಷೇತ್ರಗಳಲ್ಲಿ 130 ಇದ್ದಿದ್ದು 134ಕ್ಕೆ ಏರಿಸಲಾಗಿದೆ. ಆದರೆ, 2021ರ ಅಧಿಸೂಚನೆಗೆ ಹೋಲಿಕೆ ಮಾಡಿದರೆ, 40 ಇದ್ದ ಜಿ.ಪಂ.ಗಳು 35 ಹಾಗೂ 110 ಇದ್ದ ತಾ.ಪಂ.ಗಳು 134ಕ್ಕೆ ಏರಿಸಲಾಗಿದೆ.

ಹಲವರಿಗೆ ನಿರಾಶೆ: ಹೊಸ ತಾಪಂ ಹಾಗೂ ಜಿಪಂ ಕ್ಷೇತ್ರ ಪುನರ್‌ವಿಂಗಡಣೆ ಮೂಲಕ, ತಮ್ಮೂರು ಜಿಪಂ, ತಾಪಂ ಕೇಂದ್ರ
ಸ್ಥಾನಗಳಾಗಿದ್ದು, ರಾಜಕೀಯ ಭವಿಷ್ಯ ಕಂಡುಕೊಳ್ಳಬೇಕೆಂಬ ಆಶಯ ಹೊತ್ತಿದ್ದವರಿಗೆ ಸಧ್ಯ ನಿರಾಶೆಯಾಗಿದೆ. ಅಲ್ಲದೇ ಕೆಲ
ಜಿ.ಪಂ. ಕ್ಷೇತ್ರಗಳನ್ನು, ಎರಡು ವಿಧಾನಸಭೆ ಮತಕ್ಷೇತ್ರಗಳ ವ್ಯಾಪ್ತಿಯ ಹಳ್ಳಿಗಳನ್ನು ವಿಂಗಡಿಸಿದ್ದು, ಯಾವುದೇ ರಾಜಕೀಯ ಪಕ್ಷದ ಟಿಕೆಟ್‌ ಹಂಚಿಕೆಯಿಂದ ಹಿಡಿದು ಅನುದಾನ ಬಳಸಿಕೊಳ್ಳಲೂ ಅಡೆತಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಳೆದ 2016ರಲ್ಲಿ ಜಿಲ್ಲೆಯಲ್ಲಿ ಕೇವಲ 6 ತಾಲೂಕು ಅಸ್ತಿತ್ವದಲ್ಲಿದ್ದವು. ಆಗ ಜಿ.ಪಂ-36, ತಾಪಂ 130 ಕ್ಷೇತ್ರಗಳಿದ್ದವು. ಈಗ ಜಿಲ್ಲೆಯಲ್ಲಿ ತೇರದಾಳ ಸಹಿತ ಒಟ್ಟು 10 ತಾಲೂಕು ಅಸ್ತಿತ್ವದಲ್ಲಿವೆ. ತಾಲೂಕು ಹೆಚ್ಚಾದರೂ ಕ್ಷೇತ್ರಗಳ ಸಂಖ್ಯೆ ಹೆಚ್ಚಾಗಿಲ್ಲ ಎಂದು ಹೇಳಲಾಗಿದೆ. ಒಟ್ಟಾರೆ, ಜಿಲ್ಲೆಯಲ್ಲಿ ಸದ್ಯ ಜಿಪಂ, ತಾಪಂ. ಕ್ಷೇತ್ರ ಪುನರ್‌ವಿಂಗಡೆ ಕುರಿತು ಹಲವು ಅಪಸ್ವರ ಕೇಳಿ ಬಂದಿದ್ದು, ಸೆ. 19ರವರೆಗೆ ಆಕ್ಷೇಪಣೆ ಸಲ್ಲಿಸಲು ಚುನಾವಣೆ ಆಯೋಗ ಅವಕಾಶ ನೀಡಿದೆ.

ಜಿಲ್ಲೆಯಲ್ಲಿ ಜಿಪಂ ಮತ್ತು ತಾಪಂ ಕ್ಷೇತ್ರಗಳ ಪುನರ್‌ ವಿಂಗಡಣೆಯಲ್ಲಿ ಲೋಪಗಳಾಗಿವೆ. ಸರ್ಕಾರ ತನ್ನದೇ ನಿಯಮ ಮೀರಿ
ನಡೆದುಕೊಂಡಿದೆ. ಭೌಗೋಳಿಕ ಕ್ಷೇತ್ರ ಹಾಗೂ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರಗಳ ಪುನರ್‌ವಿಂಗಡಣೆ ಆಗಬೇಕು. ಆದರೆ, ಕಾಂಗ್ರೆಸ್‌ ಸರ್ಕಾರ, ತನಗೆ ಅನುಕೂಲಕ್ಕೆ ತಕ್ಕಂತೆ ವಿಂಗಡೆ ಮಾಡಿದೆ. ಈ ಕುರಿತು ಚುನಾವಣೆ ಆಯೋಗಕ್ಕೆ ಆಕ್ಷೇಪಣೆ ಸಲ್ಲಿಸಿದ್ದೇವೆ.
ಹೂವಪ್ಪ ರಾಠೊಡ, ಜಿ.ಪಂ. ಮಾಜಿ ಅಧ್ಯಕ್ಷ

*ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.