Hubli; ಸರಕಾರ ಮಾಡಿರುವ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಹೆಚ್ಚಳ ಸರಿಯಾಗಿದೆ; ಕೃಷ್ಣ ಬೈರೇಗೌಡ


Team Udayavani, Sep 14, 2023, 2:02 PM IST

Hubli; ಸರಕಾರ ಮಾಡಿರುವ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಹೆಚ್ಚಳ ಸರಿಯಾಗಿದೆ; ಕೃಷ್ಣ ಬೈರೇಗೌಡ

ಹುಬ್ಬಳ್ಳಿ: ಸರಕಾರ ಮಾಡಿರುವ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಹೆಚ್ಚಳ ಸರಿಯಾಗಿದ್ದು, ಮಾರುಕಟ್ಟೆ ಮೌಲ್ಯಕ್ಕೆ ಹೋಲಿಸಿದರೆ ಶೇ.1000 ದಿಂದ 2000 ವ್ಯತ್ಯಾಸವಿದೆ‌. ಸರಕಾರ ಕೈಗೊಂಡಿರುವ ಕ್ರಮದಿಂದ ಬ್ಲಾಕ್ ಮನಿ ತಪ್ಪಲಿದೆ. ಮಾರಾಟ ಮಾಡುವವರಿಗೆ ಅನ್ಯಾಯವಾಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಇದು ಹೆಚ್ಚಳವಾಗಿರಲಿಲ್ಲ. ಹೆಚ್ಚಳದಿಂದ ಸರಕಾರಕ್ಕೆ ಆದಾಯ ಎನ್ನುವುದಕ್ಕಿಂತ ಮಿಗಿಲಾಗಿ ಆಗುತ್ತಿದ್ದ ಶೋಷಣೆ ತಡೆಯುವುದಾಗಿದೆ. ಮಾರುಕಟ್ಟೆ ದರ ಮೌಲ್ಯಕ್ಕೆ ಹೋಲಿಸಿದರೆ ಸರಕಾರದ ಮಾರ್ಗಸೂಚಿದರ ಸಾಕಷ್ಟು ಕಡಿಮೆಯಿತ್ತು. ಕಡಿಮೆಯಿದ್ದರೆ ಕೊಳ್ಳುವವರಿಗೆ ಅನುಕೂಲವಾಗಲಿದೆ ಎಂಬುದು ಸರಿಯಾದರೂ ಮಾರುಕಟ್ಟೆ ದರಕ್ಕೆ ಮಾರಾಟ ಮಾಡಿ ಉಳಿದ ಹಣವನ್ನು ನಗದು ರೀತಿಯಲ್ಲಿ ಪಡೆಯುತ್ತಿದ್ದಾರೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.

ರೈತರ ಭೂಮಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸ್ವಾಧಿನಪಡಿಸಿಕೊಂಡಾಗ ಅವರಿಗೆ ಪರಿಹಾರ ನಿಗದಿ ಮಾಡುವುದು ಸರಕಾರದ ಮಾರ್ಗಸೂಚಿ ದರದ ಪ್ರಕಾರ. ಆಗ ರೈತರಿಗೆ ಅನ್ಯಾಯವಾಗುತ್ತದೆ‌. ಇನ್ನೂ ಕೆಲವರು ಇದೇ ಮಾರ್ಗ ಸೂಚಿದರದಂತೆ ಆಸ್ತಿ ಖರೀದಿಸಿ ಮಾರುಕಟ್ಟೆ ದರಕ್ಕೆ ಮಾರಾಟ ಮಾಡುತ್ತಾರೆ. ಇದರಿಂದ ಮಾರಾಟ ಮಾಡುವವರಿಗೆ ಅನ್ಯಾವಾಗುತ್ತದೆ. ಈಗಿರುವ ಮಾರುಕಟ್ಟೆ ದರಕ್ಕೆ ಮಾರ್ಗಸೂಚಿ ದರ ಸಾಧ್ಯವಿಲ್ಲ. ಕನಿಷ್ಠ ಪಕ್ಷ ಒಂದಿಷ್ಟು ವ್ಯತ್ಯಾಸ ಕಡಿಮೆ ಮಾಡಬಹುದಾಗಿದೆ‌. ಈ ಎಲ್ಲಾ ಅಂಶಗಳನ್ನು ನೋಡಿದಾಗ ಸರಕಾರ ಕೈಗೊಂಡಿರುವ ನಿರ್ಧಾರ ಸರಿಯಿದೆ. ಒಂದು ವೇಳೆ ಮಾರುಕಟ್ಟೆ ದರಕ್ಕಿಂತ ಹೆಚ್ಚಾಗಿದ್ದರೆ ಕಡಿಮೆ ಮಾಡಲು ಸೂಚಿಸಿದ್ದೇನೆ ಎಂದರು.

ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ರಾಜ್ಯದಲ್ಲಿ ಬರಗಾಲ ಘೋಷಣೆ ಅಸಾಧ್ಯವಾಗಿದೆ. ಆದರಿಂದ ಮಾನದಂಡಗಳ ಬದಲಾಯಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಒಂದು ತಿಂಗಳ ಹಿಂದೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅಷ್ಟಾದರೂ ರಾಜ್ಯದಲ್ಲಿ 195 ತಾಲೂಕುಗಳ ಸಮೀಕ್ಷೆ ಮಾಡಿ ಬರ ಘೋಷಿಸಬಹುದು. ಅದರಲ್ಲಿ 162 ತೀವ್ರ ಬರಗಾಲ ತಾಲೂಕು, 34 ಸಾಧಾರಣ ಬರ ಪೀಡಿತ ತಾಲೂಕುಗಳಾಗಿದ್ದು, ಕೇಂದ್ರ ಸರ್ಕಾರದ ಮಾನದಂಡ ಪ್ರಕಾರ ಘೋಷಣೆ ಅಸಾಧ್ಯವಾದರೂ ಸಹ ವರದಿ ನೀಡಲಾಗಿದೆ. ಕೇಂದ್ರ ಸರ್ಕಾರ ಇವುಗಳನ್ನು ಮಾಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಅಷ್ಟೇ ಅಲ್ಲದೆ ತಿಂಗಳ ಕೊನೆಯಲ್ಲಿ ಮತ್ತೆ ಸರ್ವೇ ಪ್ರಕ್ರಿಯೆ ಮತ್ತೆ ಆರಂಭಿಸಿ ಉಳಿದ ತಾಲೂಕುಗಳನ್ನು ಸೇರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.