Yakshagana; ಚರ್ಚೆಗೆ ಗುರಿಯಾಗಿದ್ದ ಹಾರಾಡಿ ರಾಮಗಾಣಿಗರ ನಾಟಕೀಯ ಹಿರಣ್ಯಕಶಿಪು

ಮರೆಯಲಾಗದ ಮಹಾನುಭಾವರು...ನೆನಪುಗಳು ಸಾವಿರಾರು...

ವಿಷ್ಣುದಾಸ್ ಪಾಟೀಲ್, Sep 14, 2023, 5:33 PM IST

1-ssad

ಆ ಕಾಲ ಸಂಪೂರ್ಣ ಸಾಂಪ್ರದಾಯಿಕ ಯಕ್ಷಗಾನಕ್ಕೆ ಮೀಸಲಾಗಿದ್ದು, ಹೊಸತನದ ಪ್ರಭಾವ ಇನ್ನೂ ನಡು ಬಡಗುತಿಟ್ಟಿನ ಯಕ್ಷಗಾನಕ್ಕೆ ಬೀರದ ಕಾಲ. ಪ್ರೇಕ್ಷಕರೆಲ್ಲರೂ ಸಿನಿಮಾ, ಇನ್ನಿತರ ಕಲೆಗಳ ಪ್ರಭಾವಕ್ಕೆ ಒಳಗಾಗದೇ ಇದ್ದ ಕಾಲ. ರಾಮಾಯಣ, ಮಹಾಭಾರತ ಮತ್ತು ಭಾಗವತದ ಕಥೆಗಳು ಮಾತ್ರ ಬಯಲಾಟದಲ್ಲಿ  ಮೇಳೈಸುತ್ತಿದ್ದವು. 1930 ರಿಂದ 1960 ರ ವರೆಗೆ ಹಾರಾಡಿ ರಾಮಗಾಣಿಗರು ವಿಜೃಂಭಿಸಿದ ಕಾಲ. ಆ ವೇಳೆ ಅವರ ಪ್ರಧಾನ ಪಾತ್ರಗಳೆಲ್ಲವೂ ಜನಮಾನಸದಲ್ಲಿ ನೆಲೆಯಾಗಿದ್ದವು. ಅದರಲ್ಲೂ ಅವರು ನಿರ್ವಹಿಸುತ್ತಿದ್ದ ನಾಟಕೀಯ ವೇಷಭೂಷಣದ ಹಿರಣ್ಯಕಶಿಪು ಪಾತ್ರ ಬಹುವಾಗಿ ಚರ್ಚೆಗೆ ಗುರಿಯಾಗಿತ್ತು.

ಇದನ್ನೂ ಓದಿ : Yakshagana; ಮರೆಯಲಾಗದ ಮಹಾನುಭಾವರು: ಗತ್ತು ಗೈರತ್ತಿನ ರಾಮ ಗಾಣಿಗರು

ಕಲಾ ಪ್ರೇಮಿಗಳು, ವಿಮರ್ಶಕರು ಪ್ರಶ್ನಿಸುವ ಅವಕಾಶವಿದ್ದ ಆ ಕಾಲದಲ್ಲಿ ಶುದ್ಧ ಯಕ್ಷಗಾನದ ಮೇರು ಕಲಾವಿದರೊಬ್ಬರು ಈ ರೀತಿ ಹೊಸ ತನವನ್ನು ತೋರಿ ಯಕ್ಷಗಾನೇತರ ಆಹಾರ್ಯವನ್ನು ರಂಗಕ್ಕೆ ತಂದುದು ಸಾಮಾನ್ಯ ಪ್ರೇಕ್ಷಕರಾದಿ ಹಲವರ ವಿರೋಧಕ್ಕೂ ಕಾರಣವಾಗಿತ್ತು.

ಖಳ ರಾಕ್ಷಸ ಹಿರಣ್ಯಕಶಿಪು ಪಾತ್ರವನ್ನು ಎರಡನೇ ವೇಷಧಾರಿ ನಿರ್ವಹಿಸುವುದು ಹಿಂದಿನಿಂದಲೂ ನಡೆದು ಬಂದ ಕ್ರಮ. ಆ ವೇಷವನ್ನೂ ಇಂದಿಗೂ ನಾಟಕೀಯ(ಯಕ್ಷಗಾನ ಭಾಷೆಯ ಪಾರ್ಟ್ ವೇಷ) ಆಹಾರ್ಯದಲ್ಲಿ ರಂಗಕ್ಕೆ ತರಲಾಗುತ್ತಿದೆ. ಕೆಲ ಯುವ ಕಲಾವಿದರು ಖಳ ರಾಜವೇಷದಲ್ಲೂ ಮಾಡಿ ಬದಲಾವಣೆ ತಂದಿದ್ದಾರೆ.

ರಾಮಗಾಣಿಗರ ಎಲ್ಲಾ ಪಾತ್ರಗಳನ್ನು ಬಹುವಾಗಿ ಮೆಚ್ಚಿಕೊಂಡ ಕಲಾಪ್ರೇಮಿಗಳು ನಾಟಕೀಯ ಶೈಲಿಯ ಪಾತ್ರವನ್ನು ತೆಗಳುತ್ತಿದ್ದರು. ಈ ವಿಚಾರವನ್ನು ಯಕ್ಷದೇಗುಲ ಸಂಸ್ಥೆ ಹೊರತಂದ ಡಿ.ರಾಮಗಾಣಿಗರ ಜನ್ಮ ಶತಾಬ್ದಿ ವಿಶೇಷ ಸಂಕಲನ ”ಯಕ್ಷರಂಗದ ಕೋಲ್ಮಿಂಚು” ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.

ಸಹಕಲಾವಿದರೂ ಇದೊಂದು ಹೊಸತನ ಬೇಕಿತ್ತಾ ಎನ್ನುವ ಪ್ರಶ್ನೆಯನ್ನು ತಮ್ಮಲ್ಲೇ ಕೇಳಿಕೊಳ್ಳುತ್ತಿದ್ದರು ಹೊರತು ಬಹಿರಂಗವಾಗಿ ವಿರೋಧಿಸಲು ಸಾಧ್ಯವಾಗಲಿಲ್ಲವಂತೆ.

ಕೃಷಿ ಧನಿಕರ ‘ವೀಳ್ಯ’ (ಹಣ)ದಲ್ಲಿ ನಡೆಯುತ್ತಿದ್ದ ಯಕ್ಷಗಾನ ಬಯಲಾಟಗಳಲ್ಲಿ ಅಂದಿನ ಜನಪ್ರಿಯ ಪ್ರಸಂಗಗಳಲ್ಲಿ ಒಂದಾದ ಪ್ರಹ್ಲಾದ ಚರಿತ್ರೆಯಲ್ಲಿ ‘ ಹಾರಾಡಿ ರಾಮ ಗಾಣಿಗರ ಪಾರ್ಟಿನ ವೇಷ ಕಾಣ್ಕ್ (ಕುಂದ ಗನ್ನಡದಲ್ಲಿ ನೋಡಬೇಕು)..ಅನ್ನುವವರ ಸಂಖ್ಯೆಯೂ ಇತ್ತು. ಅದೊಂದು ಹೊಸತನವಾಗಿ ಕಾಣುತ್ತಿದ್ದರು ಎಂದು ”ವಿಲೋಕನ” ಪುಸ್ತಕದಲ್ಲಿ ಹಿರಿಯ ಯಕ್ಷಗಾನ ವಿದ್ವಾಂಸ ಡಾ.ಕೆ.ಎಂ.ರಾಘವ ನಂಬಿಯಾರ್ ಉಲ್ಲೇಖಿಸಿದ್ದಾರೆ.

ವಿಶೇಷವೆಂದರೆ ಹಿರಣ್ಯಕಶಿಪು ವೇಷಭೂಷಣವೊಂದು ನಾಟಕೀಯ ಹೊರತುಪಡಿಸಿ ಅವರ ಪ್ರವೇಶ ಎಲ್ಲರಲ್ಲೂ ಅಚ್ಚರಿ ಮೂಡಿಸುತ್ತಿತ್ತು. ಪ್ರಹ್ಲಾದನಲ್ಲಿ”ಎಲ್ಲಿ ನಿನ್ನ ಹರಿ….”ಎಂದು ರಾಮ ಗಾಣಿಗರು ಪಾತ್ರದಲ್ಲಿ ಪರಕಾಯ ಪ್ರವೇಶಗೈದು ಘರ್ಜಿಸಿದಾಗ ಪುಟ್ಟ ಮಕ್ಕಳಂತೂ ಬೆಚ್ಚಿ ಬೀಳುತ್ತಿದ್ದರಂತೆ.

ಮುಂಬಯಿ ಮಹಾನಗರಿಗೆ ಪ್ರದರ್ಶನವೊಂದಕ್ಕೆ ತೆರಳಿದ್ದ ರಾಮಗಾಣಿಗರು ಕೆಲವರ ಒತ್ತಾಯಕ್ಕೆ ಮಣಿದು ಕಿರೀಟವಿಲ್ಲದೆ ತಲೆಬಿಟ್ಟ ಹಿರಣ್ಯಕಶಿಪು ಪಾತ್ರ ಮಾಡಿ ಮಾನಸಿಕ ಸಂಕಟಕ್ಕೆ ಗುರಿಯಾಗಿದ್ದರಂತೆ, ಆ ಬಳಿಕ ಕೆಲವು ವರ್ಷ ಮುಂಬಯಿಯಲ್ಲಿ ಪ್ರದರ್ಶನಗಳನ್ನೇ ನೀಡಿರಲಿಲ್ಲವಂತೆ.

* ರಾಮಗಾಣಿಗರು ನಿರ್ವಹಿಸಿದ ಇತರ ಕೆಲ ಪಾತ್ರಗಳ ಕೆಲ ಫೋಟೋಗಳು ಕೆಮರಾದಲ್ಲಿ ಸೆರೆಯಾಗಿದ್ದರೂ ಹಿರಣ್ಯ ಕಶಿಪುವಿನ ಪಾತ್ರ ಮಾತ್ರ ಲಭ್ಯವಾಗಿಲ್ಲ. ಇಲ್ಲಿ ಸಾಂದರ್ಭಿಕವಾದ ಭಾವಚಿತ್ರವನ್ನು ರಾಮಗಾಣಿಗರ ಫೋಟೋದೊಂದಿಗೆ ಪ್ರಕಟಿಸಲಾಗಿದೆ.

(ಈ ಸರಣಿ ಮುಂದುವರಿಯಲಿದೆ)

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.