Karnataka: ಅಕ್ರಮ ಚಟುವಟಿಕೆಗಳಿಗೆ ಸ್ಥಳೀಯ ಅಧಿಕಾರಿಗಳೇ ಹೊಣೆ: ಸಿಎಂ ಎಚ್ಚರಿಕೆ


Team Udayavani, Sep 15, 2023, 11:18 PM IST

siddaramayya IMP

ಬೆಂಗಳೂರು: ಪೊಲೀಸ್‌ ಠಾಣೆ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಸ್ಥಳೀಯ ಡಿಸಿಪಿ, ಎಸ್‌.ಪಿ. ಮಟ್ಟದ ಅಧಿಕಾರಿಗಳೇ ಜವಾಬ್ದಾರರಾಗಲಿದ್ದು, ಅವರ ವಿರುದ್ಧ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪೊಲೀಸರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರಿನ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕರ್ನಾಟಕ ಪೊಲೀಸ್‌ ವರಿಷ್ಠಾಧಿಕಾರಿಗಳ ವಾರ್ಷಿಕ ಸಮ್ಮೇಳನದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದ ಎಸ್‌ಪಿ, ಐಜಿ, ಡಿಐಜಿ, ಎಡಿಜಿಪಿಗಳು ಹಾಗೂ ಪೊಲೀಸ್‌ ಮಹಾ ನಿರ್ದೇಶಕರು ಇವರನ್ನು ಭೇಟಿಯಾಗಿ ಸಭೆ ನಡೆಸಿದ್ದೇನೆ. ನಮ್ಮ ಸರಕಾರ ಕೇವಲ ಕೆಳ ಹಂತದ ಅಧಿಕಾರಿಗಳು, ಸಿಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದುಕೊಳ್ಳುವುದಿಲ್ಲ. ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ನೀವು ಪೊಲೀಸ್‌ ಠಾಣೆಗಳಿಗೆ ಭೇಟಿ ಕೊಡಬೇಕು. ಗಸ್ತು ತಿರುಗಬೇಕು. ಡಿಸಿಪಿ, ಎಸ್‌ಪಿ ವ್ಯಾಪ್ತಿಯಲ್ಲಿ ಅಪರಾಧ ನಿಯಂತ್ರಣ ಆಗದೇ ಹೋದರೆ ನಾವು ಡಿಸಿಪಿ, ಎಸ್‌ಪಿಗಳನ್ನು ಜವಾಬ್ದಾರರಾಗಿಸಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಕರ್ತವ್ಯ ಲೋಪ ಎಸಗುವ ಅಧಿಕಾರಿಗಳನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದರು.

ಸ್ವಯಂ ಪ್ರೇರಿತ ದೂರು
ಸುಳ್ಳು ಸುದ್ದಿ, ವದಂತಿ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್ಐಆರ್‌ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕುಳಿತುಕೊಳ್ಳಬಾರದು. ಅನೈತಿಕ ಪೊಲೀಸ್‌ಗಿರಿ ವಿಚಾರದಲ್ಲಿ ಸರಕಾರ ಶೂನ್ಯ ಸಹಿಷ್ಣುತೆ ಹೊಂದಿದೆ ಎಂದರು.

ಕ್ರಿಯಾಶೀಲ ಪೊಲೀಸ್‌ ಇಲಾಖೆ
ಗೃಹ ಸಚಿವ ಡಾ| ಜಿ.ಪರಮೇಶ್ವರ್‌ ಮಾತನಾಡಿ, ಮುಖ್ಯಮಂತ್ರಿಗಳು ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಉದ್ದೇಶಿಸಿ ಅನೇಕ ವಿಚಾರಗಳನ್ನು ಪ್ರಸ್ತಾವಿಸಿದ್ದಾರೆ. ಕರ್ನಾಟಕ ಪೊಲೀಸ್‌ ಇಡೀ ದೇಶದಲ್ಲೇ ಕ್ರಿಯಾಶೀಲವಾದ ಇಲಾಖೆ ಎಂದು ಹೆಸರು ಪಡೆದುಕೊಂಡಿದೆ. ಇತ್ತೀಚೆಗೆ ಐಟಿ ತಂತ್ರಜ್ಞಾನ ಬಳಸಿ ರಾಜ್ಯದ 1,116 ಪೊಲೀಸ್‌ ಠಾಣೆ ವ್ಯಾಪ್ತಿಗಳಲ್ಲೂ ನಿಗಾ ಇಡಲಾಗುತ್ತಿದೆ. ಜನ ಸಾಮಾನ್ಯರಿಗೆ ನ್ಯಾಯ ಕೊಡುವ ಬದ್ದತೆ ನಮ್ಮ ಸರಕಾರಕ್ಕಿದೆ ಎಂದರು.

ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಆಲೋಕ್‌ ಮೋಹನ್‌, ನಗರ ಪೊಲೀಸ್‌ ಆಯುಕ್ತರಾದ ದಯಾನಂದ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

ವಾಹನ ಖರೀದಿಗೆ 100 ಕೋ. ರೂ. ಮಂಜೂರು
ಪೊಲೀಸರಿಗೆ ಹೊಸ ವಾಹನ ಖರೀದಿಸಲು 100 ಕೋ. ರೂ. ಮಂಜೂರು ಮಾಡಲಾಗುತ್ತಿದೆ. ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗುವುದು. ಸಿಸಿಬಿ ಪೊಲೀಸ್‌ ವಿಭಾಗಕ್ಕೆ ಬಲ ತುಂಬುವ ನಿಟ್ಟಿನಲ್ಲಿ 230 ಹೆಚ್ಚುವರಿ ಪೊಲೀಸ್‌ ಸಿಬಂದಿ ಮಂಜೂರು ಮಾಡುತ್ತಿದ್ದೇವೆ. 60 ಕೋಟಿ ರೂ. ವೆಚ್ಚದಲ್ಲಿ ಸಿಎಆರ್‌ ಪೂರ್ವ ಘಟಕ ನಿರ್ಮಿಸಲಾಗುವುದು. ಹಿಂದೆ ಇದ್ದ ಬೆಂಗಳೂರು ಪೊಲೀಸ್‌ ಆಯುಕ್ತರ ಕಚೇರಿಗೆ 148 ವರ್ಷಗಳ ಪರಂಪರೆ ಇದೆ. ಅದನ್ನು 3 ಕೋಟಿ ರೂ. ವಚ್ಚದಲ್ಲಿ ನವೀಕರಿಸಲು ಆದೇಶ ಹೊರಡಿಸಲಾಗುವುದು ಎಂದು ಸಿಎಂ ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.