BJP ಯ “ಪುಕ್ಕಲುತನ”ದಿಂದಲೇ ಅನ್ಯಾಯ: ಡಿಕೆಶಿ

ಪ್ರಧಾನಿ ಮೋದಿ ಎದುರು ನಿಂತು ಮಾತನಾಡೋ ಧೈರ್ಯ ಬಿಜೆಪಿ ನಾಯಕರಿಗಿಲ್ಲ

Team Udayavani, Sep 15, 2023, 11:23 PM IST

D K SHI

ಬೆಂಗಳೂರು: ಕಾವೇರಿ ವಿಚಾರ ಸಹಿತ ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಿಗೆ ಬಿಜೆಪಿ ರಾಜ್ಯ ನಾಯಕರ ಪುಕ್ಕಲುತನದಿಂದಲೇ ಕರ್ನಾಟಕಕ್ಕೆ ತೊಂದರೆ ಆಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

ಕುಮಾರಕೃಪಾ ಅತಿಥಿಗೃಹದ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಎದುರು ನಿಂತು ಮಾತನಾಡುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗಿಲ್ಲ. ಕರ್ನಾಟಕಕ್ಕೆ ತೊಂದರೆ ಆಗಿರುವುದೇ ಇಂತಹ ನಾಯಕರಿಂದ ಎಂದು ದೂರಿದರು.

ಕೇಂದ್ರ ಪರಿಸರ ಇಲಾಖೆಯಿಂದ ಅನೇಕ ಕಾಮಗಾರಿಗೆ ನಿರಾಕ್ಷೇಪಣ ಪತ್ರ ತರಲೂ ಬಿಜೆಪಿ ನಾಯಕರಿಂದ ಆಗಿಲ್ಲ. ರಾಜ್ಯದ ಅಭಿವೃದ್ಧಿಗೆ ಅವರಿಂದಲೇ ತೊಂದರೆ ಆಗುತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದ ಅವರು, ನೀರಿನ ವಿಚಾರದಲ್ಲಿ ನಮಗೆ ರಾಜಕಾರಣ ಬೇಕಿಲ್ಲ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎನ್ನುವುದು ನನ್ನ ಧೋರಣೆ. ಬಿಜೆಪಿಯವರು ನನಗೆ ಬಯ್ಯಲಿ, ಉಗಿಯಲಿ, ಏನು ಬೇಕಾದರೂ ಹೇಳಲಿ, ನಾನು ರಾಜ್ಯದ ಹಿತಾಸಕ್ತಿಗೆ ಕೆಲಸ ಮಾಡುತ್ತೇನೆ. ಅದೇ ರೀತಿ, ಬಿಜೆಪಿ ರಾಜ್ಯ ನಾಯಕರು ಕೂಡ ರಾಜ್ಯದ ಹಿತಾಸಕ್ತಿಯ ವಿಚಾರಗಳ ಬಗ್ಗೆ ತಮ್ಮ ಪಕ್ಷದ ರಾಷ್ಟ್ರೀಯ ನಾಯಕರ ಎದುರು ಮಾತನಾಡುವ ಧೈರ್ಯ ಮಾಡಬೇಕು ಎಂದರು.

ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರಿಗೆ ವಸ್ತುಸ್ಥಿತಿ ವಿವರಿಸಿದ್ದೇವೆ. ಮುಂದೆ ನಾವು ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎನ್ನುವುದನ್ನೂ ತಿಳಿಸಿದ್ದೇವೆ. ದಿಲ್ಲಿಯಲ್ಲಿ ಸಚಿವರ ಬಳಿ ಚರ್ಚೆ ಏನಾಯಿತು ಎಂದು ಸಂದರ್ಭ ಬಂದಾಗ ವಿವರಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಪರಿಹಾರ ಹುಡುಕಲಿ: ಎಚ್ಕೆ
ಗದಗ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ವಿಚಾರವಾಗಿ ಕೇಂದ್ರ ಸರಕಾರ ಕೂಡಲೇ ಎರಡೂ ರಾಜ್ಯಗಳ ಮುಖ್ಯಮಂತ್ರಿ ಗಳನ್ನು ಕರೆದು ಕಾನೂನು, ತಾಂತ್ರಿಕತೆಯ ಬದಲು ರಾಜಕೀಯ ಪರಿಹಾರ ಹುಡುಕಿಕೊಳ್ಳಬೇಕೆಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮಳೆಯಿಲ್ಲದೆ ಬರದ ಸಂಕಷ್ಟ ಎದುರಿಸುತ್ತಿದೆ. ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌, ಕಾವೇರಿ ನೀರು ನಿರ್ವಹಣ ಪ್ರಾಧಿಕಾರದಲ್ಲಿ ಕಾನೂನು ಹೋರಾಟ ಮಾಡಿ ಎಂಬ ಹಾರಿಕೆ ಉತ್ತರ ನೀಡದೆ ರಾಜಕೀಯವಾಗಿ ಪರಿಹಾರ ಒದಗಿಸಬೇಕು. ಮುಂದಿನ ಮುಂಗಾರುವರೆಗೆ ಕೃಷಿ ಹಾಗೂ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಕನಿಷ್ಠ 106 ಟಿಎಂಸಿ ನೀರು ಬೇಕು. ಆದರೆ, ಕಬಿನಿ, ಹಾರಂಗಿ, ಹೇಮಾವತಿ, ಕೆಆರ್‌ಎಸ್‌ ಜಲಾಶಯದಲ್ಲಿ ಕೇವಲ 53 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ. ಸದ್ಯ ಮಳೆಯಿಲ್ಲ ಮತ್ತು ಮುಂದಿನ 15 ದಿನಗಳ ಕಾಲ ಮಳೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ಜಲಾಶಯಗಳಿಗೆ ಒಳಹರಿವಿಲ್ಲ. ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ತೆರಳಿ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ನಮ್ಮ ಪರಿಸ್ಥಿತಿಯನ್ನು ವಿವರಿಸಿದ್ದಾರೆ ಎಂದರು.

ಟಾಪ್ ನ್ಯೂಸ್

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.