Terrorism: ಉಗ್ರ ಸಂಹಾರ ವಿಷಯದಲ್ಲಿ ರಾಜಕೀಯ ಬೇಡ


Team Udayavani, Sep 16, 2023, 12:28 AM IST

TERRORISTS IMP

ಜಮ್ಮು-ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಲಷ್ಕರ್‌ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಮೂವರು ಅಧಿಕಾರಿಗಳು ಮತ್ತು ಓರ್ವ ಯೋಧ ಹುತಾತ್ಮರಾಗಿರುವುದು ದೇಶವಾಸಿಗಳಿಗೆ ತೀರಾ ನೋವಿನ ಸಂಗತಿ. ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಉಗ್ರ ಕೃತ್ಯಗಳು ಬಹುತೇಕ ಕಡಿಮೆಯಾಗಿದ್ದವು. ಆದರೆ ಏಕಾಏಕಿ ಲಷ್ಕರ್‌ ಉಗ್ರರು ಜಮ್ಮು-ಕಾಶ್ಮೀರದ ಪರ್ವತ ಪ್ರದೇ ಶಗಳಲ್ಲಿ ಅಡಗುದಾಣಗಳನ್ನು ನಿರ್ಮಿಸಿ ಭದ್ರತಾ ಪಡೆಗಳ ಮೇಲೆ ಕಳೆದ 3 ದಿನಗಳಿಂದ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಭಾರತೀಯ ಯೋಧರು ಉಗ್ರರ ವಿರುದ್ಧ ಕೈಗೆತ್ತಿಕೊಂಡಿರುವ ಕಾರ್ಯಾಚರಣೆ 3ನೇ ದಿನವಾದ ಶುಕ್ರವಾರವೂ ಮುಂದುವರಿದಿದೆ. ಯೋಧರು ಈಗಾಗಲೇ ಉಗ್ರರನ್ನು ಸುತ್ತುವರಿದಿದ್ದು ದೇಶದ ಗಡಿಯೊಳಕ್ಕೆ ನುಸುಳಿರುವ ಎಲ್ಲ ಉಗ್ರರನ್ನು ಸದೆಬಡಿಯುವ ಪಣತೊಟ್ಟು ಕಾರ್ಯಾಚರಣೆಯನ್ನು ತೀವ್ರ ಗೊಳಿಸಿದ್ದಾರೆ.

ಜಮ್ಮು-ಕಾಶ್ಮೀರದ 371ನೇ ವಿಧಿ ರದ್ದು ಬಗ್ಗೆ ಸುಪ್ರೀಂ ಕೋರ್ಟ್‌ ವಿಚಾ ರಣೆ ನಡೆ ಸು ತ್ತಿದ್ದು, ಈ ವೇಳೆ ಕೇಂದ್ರ ಸರಕಾರ ಅಲ್ಲಿನ ಸ್ಥಿತಿ ಬಗ್ಗೆ ಅಫಿ ದವಿತ್‌ ಸಲ್ಲಿ ಸಿತ್ತು. ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಬಳಿಕ ಕಾನೂನು-ಸುವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದ್ದು, ಕಣಿವೆ ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದ್ದ ಉಗ್ರಗಾಮಿ ಚಟುವಟಿಕೆಗಳಿಗೆ ಬಹುತೇಕ ಕಡಿವಾಣ ಬಿದ್ದಿದೆ ಎಂದು ಅಂಕಿಅಂಶಗಳ ಸಹಿತ ವಿವರಿಸಿತ್ತು. ಸದ್ಯ ತಾತ್ಕಾಲಿಕವಾಗಿ ಕೇಂದ್ರಾಡಳಿತದ ಸ್ಥಾನಮಾನ ನೀಡಲಾಗಿದ್ದು ಕಣಿವೆ ರಾಜ್ಯದ ಪರಿಸ್ಥಿತಿ ಸಂಪೂರ್ಣವಾಗಿ ಸುಧಾರಣೆಯಾದ ಬಳಿಕ ರಾಜ್ಯ ಸ್ಥಾನಮಾನ ನೀಡುವ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿತ್ತು. ಅಷ್ಟು ಮಾತ್ರವಲ್ಲದೆ ಜಮ್ಮು-ಕಾಶ್ಮೀರದ ಜನರು ಹಲವು ವರ್ಷಗಳ ಬಳಿಕ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಮುಕ್ತವಾಗಿ ಆಚರಿಸಿದ್ದರು. ಇತ್ತೀಚೆಗೆ ನಡೆದ ಪಾಕ್‌ ವಿರುದ್ಧದ ಕ್ರಿಕೆಟ್‌ ಪಂದ್ಯದಲ್ಲಿ ಭಾರತ ಜಯಿಸಿದ್ದಾಗ ಜನರು ಮಧ್ಯರಾತ್ರಿ ಬೀದಿಗೆ ಬಂದು ವಿಜಯೋತ್ಸವ ಆಚರಿಸಿದ್ದರು. ಇವೆಲ್ಲದರಿಂದ ಪಾಕಿಸ್ಥಾನ ಮತ್ತು ಉಗ್ರರು ಕಂಗೆಟ್ಟು ಮತ್ತೆ ತಮ್ಮ ಹಳೆ ಚಾಳಿ ಶುರುವಿಟ್ಟುಕೊಂಡಂತೆ ಕಾಣುತ್ತಿದೆ.

ಹಿಂದಿನಿಂದಲೂ ಜಮ್ಮು-ಕಾಶ್ಮೀರ ವಿಷಯವನ್ನು ಪದೇ ಪದೆ ಕೆದಕುತ್ತಲೇ ಬಂದಿರುವ ಪಾಕಿಸ್ಥಾನ ಮತ್ತೆ ಕಣಿವೆ ರಾಜ್ಯದಲ್ಲಿನ ಶಾಂತಿ ಯನ್ನು ಕದಡುವ ದುಸ್ಸಾಹಸಕ್ಕೆ ಕೈಹಾಕಿರುವುದು ಸ್ಪಷ್ಟವಾಗುತ್ತದೆ. ಇದೇ ವೇಳೆ ಪಾಕ್‌ ಉಗ್ರರಿಗೆ ಆಶ್ರಯ, ಹಣಕಾಸಿನ ನೆರವು ಸಹಿತ ಉಗ್ರಗಾಮಿ ಚಟುವಟಿಕೆಗಳಿಗೆ ಯಾವುದೇ ತೆರನಾದ ಸಹಕಾರ ನೀಡುವುದನ್ನು ನಿಲ್ಲಿಸದಿದ್ದಲ್ಲಿ ಅದರೊಂದಿಗೆ ದ್ವಿಪಕ್ಷೀಯ ಮಾತುಕತೆಯ ಪ್ರಶ್ನೆಯೇ ಇಲ್ಲ ಎಂದು ಭಾರತ ಸರಕಾರ ಸಾರಿದೆ.

ಆರ್ಥಿಕವಾಗಿ ಸಂಪೂರ್ಣವಾಗಿ ದಿವಾಳಿಯಾಗಿರುವ ಪಾಕಿಸ್ಥಾನ ಆಂತರಿಕ ಕಲಹ, ರಾಜಕೀಯ ಕಚ್ಚಾಟಗಳಿಂದ ಸಂಪೂರ್ಣ ಜರ್ಜ ರಿತವಾಗಿದ್ದರೂ ಭಾರತದ ವಿರುದ್ಧ ಉಗ್ರರನ್ನು ಛೂ ಬಿಡುವ ಕಾರ್ಯ ಮಾಡುತ್ತಿರುವುದು ತೀರಾ ನಾಚಿಕೆಗೇಡಿನ ವಿಷಯವಾಗಿದೆ. ಜಮ್ಮು- ಕಾಶ್ಮೀರದ ಶಾಂತಿಯನ್ನು ಕದಡಲು ಪ್ರಯತ್ನಿಸುತ್ತಿರುವ ಪಾಕ್‌ ಪ್ರೇರಿತ ಉಗ್ರರನ್ನು ಸದೆಬಡಿಯುವ ಜತೆಯಲ್ಲಿ ಪಾಕಿಸ್ಥಾನವನ್ನು ಜಾಗತಿಕ ಮಟ್ಟದಲ್ಲಿ ಏಕಾಂಗಿಯನ್ನಾಗಿಸಬೇ ಕು. ಈ ವಿಷಯದಲ್ಲಿ ದೇಶದಲ್ಲಿನ ಎಲ್ಲ ರಾಜಕೀಯ ಪಕ್ಷಗಳು ಸರಕಾರದ ಬೆನ್ನಿಗೆ ನಿಂತು ದೇಶದ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ರಕ್ಷಿಸಬೇಕು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.