![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 16, 2023, 6:19 PM IST
ಹೊಸದಿಲ್ಲಿ: ಲೈನ್ ಆಫ್ ಕಂಟ್ರೋಲ್ ನಲ್ಲಿ ಉಗ್ರರ ಒಳನುಸುಳುವಿಕೆ ತಪ್ಪಿಸಲು ಯತ್ನಿಸುತ್ತಿದ್ದ ವೇಳೆ ಪಾಕಿಸ್ತಾನ ಸೇನೆಯು ಉಗ್ರರಿಗೆ ಕಾವಲು ನಿಂತು, ನಮ್ಮ ಮೇಲೆ ಗುಂಡಿನ ದಾಳಿ ನಡೆಸುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ.
ಉರಿ ಸೆಕ್ಟರ್ ನಲ್ಲಿ ಮೂರ್ನಾಲ್ಕು ಭಯೋತ್ಪಾದಕರು ಒಳನುಸುಳಲು ಯತ್ನಿಸಿದ ನಂತರ ಗುಂಡಿನ ಚಕಮಕಿಯು ಎರಡು ಗಂಟೆಗಳ ಕಾಲ ನಡೆಯಿತು ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಳನುಸುಳುವ ಭಯೋತ್ಪಾದಕರನ್ನು ತಟಸ್ಥಗೊಳಿಸಲು ಸೇನೆಯು ರಾಕೆಟ್ ಲಾಂಚರ್ ಗಳು ಮತ್ತು ಇತರ ಭಾರೀ ಶಸ್ತ್ರಾಸ್ತ್ರಗಳನ್ನು ಬಳಸಿತು ಎಂದು ಅವರು ಹೇಳಿದರು.
ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲು ಗುಪ್ತಚರ ಮಾಹಿತಿ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಪೀರ್ ಪಂಜಾಲ್ ಬ್ರಿಗೇಡ್ ನ ಕಮಾಂಡರ್ ಬ್ರಿಗೇಡಿಯರ್ ಪಿಎಂಎಸ್ ಧಿಲ್ಲೋನ್ ಹೇಳಿದ್ದಾರೆ.
ಇದನ್ನೂ ಓದಿ:Keerthy Suresh: ಅನಿರುದ್ಧ್ ಜೊತೆ ʼಮಹಾನಟಿʼ ಕೀರ್ತಿ ಮದುವೆ? ಮೌನ ಮುರಿದ ನಟಿಯ ತಂದೆ
“ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅದೇ ವೇಳೆ ಒಬ್ಬ ಉಗ್ರ ಗಾಯಗೊಂಡಿದ್ದು, ಪಾಕಿಸ್ತಾನ ಸೇನೆಯ ಸಹಾಯದಿಂದ ಆತ ತಪ್ಪಿಸಿಕೊಂಡಿದ್ದಾನೆ” ಎಂದು ಹೇಳಿದ್ದಾರೆ.
“ಪಾಕಿಸ್ತಾನ ಸೇನೆಯು ಗಾಯಗೊಂಡ ಭಯೋತ್ಪಾದಕನಿಗೆ ಗುಂಡಿನ ಬೆಂಬಲವನ್ನು ನೀಡಿತು. ಅಲ್ಲದೆ ನಮ್ಮ ಮೇಲೂ ಗುಂಡು ಹಾರಿಸಿರುತು. ಪಾಕಿಸ್ತಾನದ ಸೇನೆಯು ನಮ್ಮ ಕ್ವಾಡ್ ಕ್ಯಾಪ್ಟರ್ ಗಳ ಮೇಲೂ ಗುಂಡು ಹಾರಿಸಿತು” ಎಂದು ಬ್ರಿಗೇಡಿಯರ್ ಧಿಲ್ಲೋನ್ ಹೇಳಿದ್ದಾರೆ.
ಇಬ್ಬರು ಭಯೋತ್ಪಾದಕರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆಯು ತಿಳಿಸಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.