![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 16, 2023, 6:38 PM IST
ಸುಬ್ರಹ್ಮಣ್ಯ: ಕುಕ್ಕೆಯ ಆದಿಸುಬ್ರಹ್ಮಣ್ಯದ ಸರ್ಪಸಂಸ್ಕಾರ ಯಾಗಶಾಲೆಯ ಸಮೀಪ ಶಾರ್ಟ್ ಸರ್ಕ್ಯೂಟ್ ನಿಂದ ಕ್ವಾಲಿಸ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ.
ಸರ್ಪಸಂಸ್ಕಾರ ಕಾರ್ಯಕ್ಕಾಗಿ ಬೆಂಗಳೂರಿನಿಂದ ಕಾರಿನಲ್ಲಿ ಬಂದಿದ್ದ ಕುಟುಂಬವೊಂದು ಯಾಗ ಶಾಲೆಯ ಮುಂಭಾಗ ತಮ್ಮ ಕಾರನ್ನು ನಿಲ್ಲಿಸಿದ್ದರು. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಗಮನಿಸಿದ ಸ್ಥಳೀಯರು ತತ್ಕ್ಷಣ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಘಟನೆ ನಡೆದ ವೇಳೆ ಕಾರಿನ ಆಸುಪಾಸಿನಲ್ಲಿ 30ಕ್ಕೂ ಹೆಚ್ಚು ವಾಹನಗಳಿದ್ದವು. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
You seem to have an Ad Blocker on.
To continue reading, please turn it off or whitelist Udayavani.