Karnataka: ಮೂವರು ಡಿಸಿಎಂ ಅಗತ್ಯವಿಲ್ಲ: ಪ್ರಿಯಾಂಕ್‌

- ಹೈಕಮಾಂಡ್‌ ಮುಂದೆ ಅಂತಹ ಪ್ರಸ್ತಾವನೆ ಇಲ್ಲ - ಹರಿಪ್ರಸಾದ್‌ಗೆ ಕಾರಣ ಕೇಳಿ ನೋಟಿಸ್‌ ಜಾರಿ

Team Udayavani, Sep 16, 2023, 9:43 PM IST

PRIYANK KHARGE IMP

ಕಲಬುರಗಿ: ರಾಜ್ಯದಲ್ಲಿ ಮೂವರು ಡಿಸಿಎಂ ಅಗತ್ಯ ಇಲ್ಲ. ಅಂತಹ ಪ್ರಸ್ತಾವನೆ ಹೈಕಮಾಂಡ್‌ ಮುಂದಿಲ್ಲ. ಸಚಿವ ರಾಜಣ್ಣ ಹೇಳಿರುವುದು ಅವರ ವೈಯಕ್ತಿಕ ವಿಚಾರ. ಈ ಕುರಿತು ಹೆಚ್ಚು ಗಮನ ಹರಿಸಬೇಕಾದ ಅಗತ್ಯವೇನೂ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸದ್ಯಕ್ಕೆ ಮೂವರು ಡಿಸಿಎಂ ವಿಚಾರವಿಲ್ಲ. ಬಿ.ಕೆ.ಹರಿಪ್ರಸಾದ್‌ಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಆ ವಿಚಾರ ಅಲ್ಲಿಗೆ ನಿಂತಿದೆ. ಯತ್ನಾಳರಂತೆ ಬಿ.ಕೆ.ಹರಿಪ್ರಸಾದ ಮಾತಾಡಿಲ್ಲ. ಯತ್ನಾಳ್‌ ಮಾತಿಗೂ ಮತ್ತು ಹರಿಪ್ರಸಾದ್‌ ಮಾತಿಗೂ ವ್ಯತ್ಯಾಸವಿದೆ. ಜೆಡಿಎಸ್‌, ಬಿಜೆಪಿ ಮೈತ್ರಿ ಬಗ್ಗೆ ನಮಗೇನೂ ಹೆಚ್ಚು ಆಸಕ್ತಿಯಿಲ್ಲ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಅದರಿಂದ ನಮ್ಮ ಪಕ್ಷದ ಮೇಲೇನೂ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ ಎಂದರು.

ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಮೊದಲು ಕಾಂಗ್ರೆಸ್‌ನಲ್ಲಿದ್ದರು. ಟಿಕೆಟ್‌ ಕೇಳಿದ್ದರೂ ಅದು ಸಿಕ್ಕಿಲ್ಲ. ಬಳಿಕ ಬಿಜೆಪಿಗೆ ಹೋಗಿದ್ದಾರೆ. ನಾವು ಎಲ್ಲಿಯೂ ಹೊಸ ಕಾಯಿದೆ ಜಾರಿಗೆ ತರತೀವಿ ಅಂದಿಲ್ಲ. ಐಟಿ ಕಾಯ್ದೆಯನ್ನು ಜಾರಿಗೆ ತಂದಿದ್ದು ನಾವಲ್ಲ, ಬಿಜೆಪಿಯ ಅಮಿತ್‌ ಶಾ. ಮೊದಲು ಅದನ್ನು ತಿಳಿದು ಭಾಸ್ಕರ್‌ರಾವ್‌ ಮಾತನಾಡಬೇಕು. ಅವರ ಪೂರ್ತಿ ಪತ್ರಿಕಾಗೋಷ್ಠಿ ವಿಷಯ ತಿಳಿದಿಲ್ಲ ಎಂದರು.

ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಾವು ಕೆಲ ಮಾಧ್ಯಮಗಳ ಪ್ರತಿನಿಧಿಗಳೊಂದಿಗೆ ಮಾತನಾಡುವುದಿಲ್ಲ ಎಂದು ಹೇಳಿದ್ದೇವೆ. ಅದನ್ನು ಮಾಧ್ಯಮದವರು ಸ್ವಾಗತಿಸಿದ್ದಾರೆ. ಆದರೆ, ಬಿಜೆಪಿಯವರಿಗೆ ಮಾತ್ರ ಅದು ಹಿಡಿಸಿಲ್ಲ. ಅವರ್ಯಾಕೆ ಇದನ್ನು ವಿರೋಧಿಸುತ್ತಿದ್ದಾರೆ ಗೊತ್ತಾಗುತ್ತಿಲ್ಲ. ಬಿಜೆಪಿಯವರು ಏನಾದರೂ ಸುಳ್ಳು ಸುದ್ದಿಯ ಫಾಕ್ಟರಿ ಹೊಂದಿದ್ದಾರಾ? ಬಿಜೆಪಿಯವರಿಗೆ ಏಕೆ ಆತಂಕ ನನಗೆ ಗೊತ್ತಾಗುತ್ತಿಲ್ಲ ಎಂದರು.

ಸಿಯುಕೆ ಕ್ಯಾಂಪಸ್‌ ಕೇಸರೀಕರಣ ಮಾಡಬೇಡಿ
ಕಳೆದ ಹಲವು ಅವಧಿಗಳಿಂದ ಕಲಬುರಗಿಯ ಸಿಯುಕೆ(ಕರ್ನಾಟಕ ಕೇಂದ್ರ ವಿಶ್ವವಿದ್ಯಾನಿಲಯ) ಕ್ಯಾಂಪಸ್‌ ವಿವಿಧ ವಿಷಯಗಳಲ್ಲಿ ದೊಡ್ಡ ಸುದ್ದಿಯಾಗುತ್ತಿದೆ. ಶುಕ್ರವಾರವಂತೂ ವಿಸಿ ಕಾರಿಗೆ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ್ದಾರೆ. ಇನ್ನೊಂದೆಡೆ ವಿದ್ಯಾರ್ಥಿ ವಿರುದ್ಧ ಆಡಳಿತ ಮಂಡಳಿ ಪ್ರಕರಣ ದಾಖಲು ಮಾಡಿದೆ. ಇದು ಸರಿಯಲ್ಲ. ಕ್ಯಾಂಪಸ್‌ ಕೇಸರೀಕರಣ ಮಾಡ್ಬೇಡಿ. ಘಟನೆ ಕುರಿತು ಸಮಗ್ರ ಮಾಹಿತಿ ಪಡೆದಿದ್ದೇನೆ. ಸಿಯುಕೆ ಆಡಳಿತಾಧಿಕಾರಿಗಳಿಗೆ, ಕುಲಪತಿಗಳಿಗೆ ಸಂಘ ಪರಿವಾರದ ಬಗ್ಗೆ ಆಸಕ್ತಿಯಿದ್ದರೆ ಅದನ್ನು ವೈಯಕ್ತಿಕವಾಗಿ, ಖಾಸಗಿಯಾಗಿ ಮಾಡಿಕೊಳ್ಳಲಿ.

ಅದನ್ನು ಬಿಟ್ಟು ವಿದ್ಯಾರ್ಥಿಗಳನ್ನು ಬಳಸಿಕೊಂಡು ಅಂತಹ ವಾತಾವರಣ ಸೃಷ್ಟಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಂಧನಕ್ಕೆ ಒಳಗಾಗಿರುವ ಚೈತ್ರಾಳನ್ನು ಹಿಂದೆ ಬೊಮ್ಮಾಯಿ ಗೃಹ ಮಂತ್ರಿಯಾಗಿದ್ದಾಗ ಬೆಳೆಸಿರಲಿಲ್ಲವೇ? ಆರಗ ಜ್ಞಾನೇಂದ್ರ ಕ್ಷೇತ್ರದಲ್ಲಿ ಅಬ್ಬರ ಪ್ರಚಾರ ಮಾಡಿದ್ದು ಗೊತ್ತಿಲ್ಲೇನ್ರಿ? ಚುನಾವಣೆಯಲ್ಲಿ ಸ್ಟಾರ್‌ ಕ್ಯಾಂಪೇನರ್‌ ಕೂಡ ಆಗಿರಲಿಲ್ಲವೇ. ಇವರೇ ಬೆಳೆಸಿದ್ದು ಇವರಿಗೆ ಕುಕ್ಕುತ್ತಿದೆ. ಸಂಘ-ಪರಿವಾರದ ವಿರುದ್ಧ ಮಾತನಾಡಲಿಕ್ಕೆ ನಮಗೇನೂ ಭಯವಿಲ್ಲ. ಅವರು ಮಾಡಿದ್ದನ್ನು ನಾವು ಆಡುತ್ತಿದ್ದೇವಷ್ಟೇ ಎಂದು ಪ್ರಿಯಾಂಕ್‌ ಹೇಳಿದರು.

 

ಟಾಪ್ ನ್ಯೂಸ್

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.