BJP: ಇಂದಿನಿಂದ ಅ.2ರ ವರೆಗೆ ಸೇವಾ ಪಾಕ್ಷಿಕ


Team Udayavani, Sep 16, 2023, 11:02 PM IST

BJP FLAG 1

ಬೆಂಗಳೂರು: ದೇಶಾದ್ಯಂತ ಸೇವಾ ಪಾಕ್ಷಿಕ ಹಮ್ಮಿಕೊಂಡಿರುವ ಬಿಜೆಪಿಯು ರಾಜ್ಯದಲ್ಲೂ ಸೆ.17ರಿಂದ ಅ.2ರ ವರೆಗೆ ವಿವಿಧ ಸೇವಾ ಚಟುವಟಿಕೆಗಳನ್ನು ನಡೆಸಲಿದೆ.
ಸೆ.17ರಂದು ಪ್ರಧಾನಿ ನರೇಂದ್ರ ಮೋದಿ, ಸೆ.25ರಂದು ದೀನದಯಾಳ್‌ ಉಪಾಧ್ಯಾಯ ಹಾಗೂ ಅ.2ರಂದು ಮಹಾತ್ಮ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಅಷ್ಟೂ ದಿನಗಳ ಕಾಲ ಸೇವಾ ಚಟುವಟಿಕೆಗಳು ನಡೆಯಲಿವೆ.

ಪ್ರಮುಖವಾಗಿ ರಕ್ತದಾನ ಶಿಬಿರಗಳು, ಆರೋಗ್ಯ ಶಿಬಿರಗಳು, ವಿಶಿಷ್ಟ ಚೇತನರಿಗೆ ಅವಶ್ಯ ಸಲಕರಣೆ ವಿತರಣೆ, ಆಸ್ಪತ್ರೆಗಳಲ್ಲಿರುವ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸುವುದು, ಜತೆಗೆ ಹಣ್ಣು-ಹಂಪಲು ವಿತರಣೆ, ಪಿಎಂ ಸ್ವಾನಿಧಿ ಕಾರ್ಡ್‌ ವಿತರಣೆ, ಕೆರೆ, ಬಾವಿಗಳ ಹೂಳೆತ್ತುವುದು ಸಹಿತ ವಿವಿಧ ಚಟುವಟಿಕೆಗಳು ನಡೆಯಲಿವೆ.

ಸಾಧನಾ ಪ್ರದರ್ಶಿನಿ
ಕಳೆದ 9.5 ವರ್ಷಗಳಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮಾಡಿರುವ ಸಾಧನೆಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪ್ರದರ್ಶಿಸಲಾಗುತ್ತದೆ. ಪ್ರಮಾಣ ವಚನ ಸ್ವೀಕಾರದಿಂದ ಹಿಡಿದು ಇತ್ತೀಚಿನ ಜಿ-20 ಶೃಂಗದವರೆಗೆ ದೇಶದಲ್ಲಾಗಿರುವ ಜನಪರ ಹಾಗೂ ಅಭಿವೃದ್ಧಿಪರವಾದ ಕಾರ್ಯಕ್ರಮಗಳನ್ನು ಸಾಧನಾ ಪ್ರದರ್ಶಿನಿ ಮೂಲಕ ಜನರಿಗೆ ತಲುಪಿಸಲಾಗುತ್ತದೆ.

ಆಯುಷ್ಮಾನ್‌ ಭವ
ರವಿವಾರದಿಂದ ಸೆ.24ರ ವರೆಗೆ ಆಯುಷ್ಮಾನ್‌ ಭಾರತ್‌ ಕಾರ್ಡ್‌ ವಿತರಣೆ, ರಕ್ತದಾನ ಶಿಬಿರಗಳು, ಆರೋಗ್ಯ ಶಿಬಿರಗಳು ನಡೆಯಲಿವೆ.

ಬೂತ್‌ ಮಟ್ಟಕ್ಕೆ ಸೇವಾ ಪಾಕ್ಷಿಕ
ಸೆ.17ರಿಂದ 24ರ ವರೆಗೆ ಜಿಲ್ಲಾ ಕೇಂದ್ರಗಳವರೆಗೆ ನಡೆಯುವ ಸೇವಾ ಪಾಕ್ಷಿಕವನ್ನು ಸೆ.25ರ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ಬೂತ್‌ ಮಟ್ಟಕ್ಕೆ ಕೊಂಡೊಯ್ಯಲಾಗುತ್ತದೆ. ಸೆ.26ರಿಂದ ಅ.1ರ ವರೆಗೆ ಬೂತ್‌ ಮಟ್ಟದಿಂದ ಮನೆ-ಮನೆಗೆ ಸೇವಾ ಪಾಕ್ಷಿಕದ ಉದ್ದೇಶಗಳನ್ನು ಕೊಂಡೊಯ್ಯಲಾಗುವುದು. ಮಂಡಲ ಮಟ್ಟದಲ್ಲಿ ನನ್ನ ಮಣ್ಣು, ನನ್ನ ದೇಶ ಅಭಿಯಾನದ ಮೂಲಕ ಮಣ್ಣು ಸಂಗ್ರಹಿಸಿ, ದಿಲ್ಲಿಯಲ್ಲಿ ನಿರ್ಮಾಣಗೊಳ್ಳಲಿರುವ ಅಮೃತ ಉದ್ಯಾನವನಕ್ಕೆ ಕಳುಹಿಸಿಕೊಡಲಾಗುತ್ತದೆ.

ಕುರುಡುಮಲೆ ಗಣಪತಿಗೆ ಬಿಎಸ್‌ವೈ ಪೂಜೆ
ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಸೆ.17ರ ರವಿವಾರ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಬೆಳಗ್ಗೆ 10.30ಕ್ಕೆ ಕೋಲಾರದ ಮುಳುಬಾಗಿಲಿನಲ್ಲಿರುವ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಮಹಾಪೂಜೆ ನಡೆಸಿ, ರಾಜ್ಯ ಸರಕಾರದ ವೈಫ‌ಲ್ಯದ ವಿರುದ್ಧ ರಾಜ್ಯ ಪ್ರವಾಸವನ್ನೂ ಕೈಗೊಳ್ಳಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸಿ.ಟಿ. ರವಿ ಮುಂತಾದ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

 

ಟಾಪ್ ನ್ಯೂಸ್

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.