Panambur ಸ್ವಚ್ಛತೆಯ ಪಾಠ ಮನೆಯಿಂದ ಪ್ರಾರಂಭವಾಗಲಿ: ಡಿಸಿ ಮುಗಿಲನ್‌

ಪಣಂಬೂರು: "ಸ್ವಚ್ಛ ಸಾಗರ್‌ ಸುರಕ್ಷಿತ್‌ ಸಾಗರ್‌' ಅಭಿಯಾನ

Team Udayavani, Sep 16, 2023, 11:42 PM IST

Panambur ಸ್ವಚ್ಛತೆಯ ಪಾಠ ಮನೆಯಿಂದ ಪ್ರಾರಂಭವಾಗಲಿ: ಡಿಸಿ ಮುಗಿಲನ್‌

ಪಂಣಬೂರು: ಮಾಲಿನ್ಯ ತಡೆಗಟ್ಟುವ ಅರಿವು ನಮ್ಮ ನಮ್ಮ ಮನಸ್ಸು, ಮನೆಯಿಂದ ಆರಂಭವಾದಾಗ ಇಂತಹ ಬೃಹತ್‌ ಸ್ವಚ್ಛತೆಯ ಅಭಿಯಾನ ನಡೆಸುವ ಉದ್ದೇಶ ಬರಲಾರದು. ಜಾಗೃತಿ ನಮ್ಮಿಂದಲೇ ಆರಂಭವಾಗಲಿ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಹೇಳಿದರು.

ಪಣಂಬೂರು ಬೀಚ್‌ನಲ್ಲಿ ಶನಿವಾರ ಕೋಸ್ಟ್‌ಗಾರ್ಡ್‌ ವತಿಯಿಂದ ಜಿಲ್ಲಾಡಳಿತ, ಎನ್‌ಎಂಪಿಎ,ಎಂಆರ್‌ಪಿಎಲ್‌ ಸಹಿತ ವಿವಿಧ ಶಾಲಾ ಕಾಲೇಜುಗಳ ಸಹಯೋಗದಲ್ಲಿ ನಡೆದ “ಸ್ವಚ್ಛ ಸಾಗರ್‌ ಸುರಕ್ಷಿತ್‌ ಸಾಗರ್‌’ ಅಭಿಯಾನದಲ್ಲಿ ಅವರು ಮಾತನಾಡಿದರು.

ಸ್ವಚ್ಛತೆಯನ್ನು ನಮ್ಮ ಜೀವನ ದಲ್ಲಿ ಅವಿಭಾಜ್ಯ ಅಂಗವಾಗಿ ರೂಢಿಸಿಕೊಂಡು ಮನೆ, ಊರು, ಗ್ರಾಮವನ್ನು ಸ್ವಚ್ಚವಾಗಿಡಲು ಕೈ ಜೋಡಿಸುವುದು ಕೂಡ ದೇಶಪ್ರೇಮವೇ ಆಗಿದೆ. ವಿದ್ಯಾ ರ್ಥಿಗಳು ಇದನ್ನು ಇಂದಿನಿಂದಲೇ ರೂಢಿಸಿಕೊಳ್ಳುವಂತಾಗಬೇಕು ಎಂದರು.

ಪಿಒಪಿ ಮುಕ್ತ ಗಣಪ:
ಕರಾವಳಿ ಮಾದರಿ
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಮೂಲಕ ರಾಸಾಯನಿಕ ಬಣ್ಣ ಬಳಿಸಿ ಗಣಪತಿ ಮೂರ್ತಿ ಮಾಡುವುದಾಗಲಿ, ಗಣೇಶೋತ್ಸವ ಆಚರಿಸುವುದಾಗಿ ಇಲ್ಲ. ಸಾಂಪ್ರದಾಯಿಕವಾಗಿ ಇಲ್ಲಿ ಆಚರಣೆಗೇ ಇಲ್ಲಿ ಮಣೆ. ಈ ಬಗ್ಗೆ ಸಚಿವರಿಗೆ ತಿಳಿಸಿದಾಗ ಅಚ್ಚರಿ ವ್ಯಕ್ತಪಡಿಸಿದ್ದಾರೆ ಮಾತ್ರವಲ್ಲ ಇಲ್ಲಿನ ಪರಿಸರ ಸಹ್ಯ ಆಚರಣೆ ರಾಜ್ಯಕ್ಕೆ ಮಾದರಿ ಎಂದು ಶ್ಲಾಘಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಎಂಆರ್‌ಪಿಎಲ್‌ನ ಆಡಳಿತ ನಿರ್ದೇಶಕ ಸಂಜಯ್‌ ವರ್ಮ ಮಾತನಾಡಿ, ಪರಿಸರ ಸಹ್ಯ, ಸುಸ್ಥಿರ ಅಭಿವೃದ್ಧಿಗೆ ನಾವೆಲ್ಲ ಬದ್ಧರಾಗಿರಬೇಕು ಎಂದರು.

ಪಾಲಿಕೆ ಆಯುಕ್ತ ಆನಂದ್‌ ಮಾತನಾಡಿ, ಕೋಸ್ಟ್‌ ಗಾರ್ಡ್‌ ನಮ್ಮ ಕರಾವಳಿ ತೀರ ರಕ್ಷಿಸುವ ಜತೆಗೆ, ಸಮುದ್ರದಲ್ಲಿನ ಜಲಚರಗಳನ್ನು ರಕ್ಷಿಸಲು, ಸಮುದ್ರ ಮಾಲಿನ್ಯವಾಗದಂತೆ ಕ್ರಮ ಕೈಗೊಳ್ಳುತ್ತಿದೆ ಇದಕ್ಕೆ ನಾವೆಲ್ಲಾ ಪರಿಸರ ಸಹ್ಯ ಜೀವನ ನಡೆಸುವ ಮೂಲಕ ಕೈ ಜೋಡಿಸೋಣ ಎಂದರು.

ಎನ್‌ಎಂಪಿಎ ಉಪಾಧ್ಯಕ್ಷ ಕೆ.ಜಿ. ನಾಥ್‌, ಕೋಸ್ಟ್‌ಗಾರ್ಡ್‌ ಡಿಐಜಿ ಪ್ರವೀಣ್‌ ಕುಮಾರ್‌ ಮಿಶ್ರ, ಪೊಲೀಸ್‌ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ ಕಾಲೇಜು, ಸಂಘ ಸಂಸ್ಥೆಯ 1,500ಕ್ಕೂ ಮಿಕ್ಕಿ ವಿದ್ಯಾರ್ಥಿಗಳು, ಕಾರ್ಯಕರ್ತರು ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದರು.

ಸ್ವಚ್ಛತೆಯ ಜತೆಗೆ ಮರಳು ಶಿಲ್ಪ, ವಿದ್ಯಾರ್ಥಿಗಳಿಗಾಗಿ ವಿವಿಧ ಕ್ರೀಡಾ ಕೂಟ, ಮಾಹಿತಿ ಅರಿವು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.