Ganesh Chaturthi: ಗಣೇಶ ಚತುರ್ಥಿಗೆ ಹೂ ಹಣ್ಣು ದುಬಾರಿ ಅಲ್ಲ,”ಆಭಾರಿ’


Team Udayavani, Sep 17, 2023, 1:50 PM IST

Ganesh Chaturthi: ಗಣೇಶ ಚತುರ್ಥಿಗೆ ಹೂ ಹಣ್ಣು ದುಬಾರಿ ಅಲ್ಲ,”ಆಭಾರಿ’

ಬೆಂಗಳೂರು: ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಗೌರಿ ಹಾಗೂ ಗಣೇಶ ಚತುರ್ಥಿಯನ್ನು ನಗರದಲ್ಲಿ ಅದ್ಧೂರಿಯಾಗಿ ಆಚರಿಸಲು ನಾಗರಿಕರು, ಗಣೇಶ ಮೂರ್ತಿ ಪ್ರತಿಷ್ಠಾಪಕರು ಸಿದ್ಧತೆ ನಡೆಸಿದ್ದು, ಹಬ್ಬದ ಸಂಭ್ರಮಕ್ಕೆ ಮಾರು ಕಟ್ಟೆ ಈ ಬಾರಿ ದುಬಾರಿ ಆಗುವುದಕ್ಕಿಂತ “ಆಭಾರಿ’ ಆಗಿರುವುದು ವಿಶೇಷ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹೂವು, ಹಣ್ಣು ಹಾಗೂ ತರಕಾರಿ ಬೆಲೆ ನಿಯಂತ್ರಣದಲ್ಲೇ ಇದ್ದು, ಶನಿವಾರ ಕೆ.ಆರ್‌.ಮಾರುಕಟ್ಟೆಯಲ್ಲಿ ಗ್ರಾಹಕರು ಕೆ.ಜಿ.ಗಟ್ಟಲೆ ಹೂ-ಹಣ್ಣುಗಳನ್ನು ಖರೀದಿಸುತ್ತಿದ್ದ ದೃಶ್ಯಗಳು ಕಂಡು ಬಂದವು. ಹಬ್ಬದ ನಿಮಿತ್ತ ನಗರದ ಮಲ್ಲೇಶ್ವರ, ಬಸವನಗುಡಿ, ಇತರೆ ಮಾರುಕಟ್ಟೆಯಲ್ಲಿ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಜನದಟ್ಟಣೆ ಕಂಡು ಬಂತು. ಗೌರಿ, ಗಣೇಶನ ಮೂರ್ತಿಗಳ ಖರೀದಿ ಜತೆಗೆ ಹಬ್ಬಕ್ಕೆ ಬೇಕಾದ ಪದಾರ್ಥಗಳನ್ನು ಜನ ಖರೀದಿಸಿದರು.

ಸಾಮಾನ್ಯವಾಗಿ ಹಬ್ಬದ ಸಂದರ್ಭ ಗಳಲ್ಲಿ ಎಲ್ಲೆಡೆ ಹೂವು-ಹಣ್ಣುಗಳ ಬೆಲೆ ಗಗನಕ್ಕೇರುತ್ತಿತ್ತು. ಆದರೆ, ಈ ಬಾರಿ ಸರಿಯಾದ ಸಮಯಕ್ಕೆ ಮಳೆ ಬರದೆ, ಫ‌ಸಲು ತಡವಾಗಿ ಬಂದ ಕಾರಣ ದರದಲ್ಲಿ ಭಾರೀ ಕುಸಿತ ಕಂಡಿದೆ. ಒಂದು ಕೆ.ಜಿ. ಸೇವಂತಿಗೆಯನ್ನು ನೂರಾರು ರೂ.ಗೆ ಮಾರಾಟ ಮಾಡಲಾಗುತ್ತಿತ್ತು. ಆದರೆ, ಈಗ ಕೇವಲ 40ರಿಂದ 50 ರೂ.ಗೆ ಸಿಗುತ್ತಿದೆ.

ಮಾರುಕಟ್ಟೆಯಲ್ಲಿ ಮಲ್ಲಿಗೆ ಹೂವು ಹೆಚ್ಚು ಇಲ್ಲದ ಕಾರಣ ಅದರ ಬೆಲೆ ತುಸು ಜಾಸ್ತಿ ಇದೆ. ಕೆ.ಜಿ. ಮಲ್ಲಿಗೆಗೆ 600ರಿಂದ 800ರೂ.ಗಳು ಇದ್ದು, ಹಬ್ಬದ ಹಿಂದಿನ ದಿನವಾದ ಭಾನುವಾರದಂದು 1,400ರಿಂದ 1,500ರೂ.ಗೆ ಏರುವ ಸಾಧ್ಯತೆ ಇದೆ ಎಂದು ಕೆ.ಆರ್‌. ಮಾರುಕಟ್ಟೆ ಸಗಟು ಹೂವು ಮಾರಾಟಗಾರರ ಸಂಘ ಅಧ್ಯಕ್ಷ ಜಿ.ಎಂ.ದಿವಾಕರ್‌ ತಿಳಿಸುತ್ತಾರೆ.

ಹೂವು ದರ (ಕೆ.ಜಿ.ಗೆ)

ಸೇವಂತಿ           40-50 ರೂ.

ಚೆಂಡು ಹೂ     25 ರೂ.

ಮಲ್ಲಿಗೆ 600-800 ರೂ.

ಸುಗಂಧರಾಜ   250 ರೂ.

ಕನಕಾಂಬರ     600 ರೂ.

ಹಣ್ಣು ಬೆಲೆ(ಕೆ.ಜಿ.ಗೆ)

ಏಲಕ್ಕಿ ಬಾಳೆ    90-110 ರೂ.

ಮೂಸಂಬಿ       70 ರೂ.

ದಾಳಿಂಬೆ         150 ರೂ.

ಸೇಬು   120-150 ರೂ.

ಸೀಬೆ ಹಣ್ಣು     50 ರೂ.

ರೈ ತರು ವರಮಹಾ ಲಕ್ಷ್ಮೀ ಹಬ್ಬದ ದೃಷ್ಟಿ ಇಟ್ಟುಕೊಂಡು ಹೂ ಬೆಳೆದಿ ದ್ದರು. ಮಳೆ ಇಲ್ಲದ ಕಾರಣ ಸರಿಯಾದ ಫ‌ಸಲು ಬರಲಿಲ್ಲ. ವಾರದಿಂದಲೂ ಎಲ್ಲೆಡೆ ಮಳೆ ಯಾದ ಕಾರಣ ನಿರೀಕ್ಷೆಗೂ ಮೀರಿ ಹೂ ಮಾರುಕಟ್ಟೆಗೆ ಬರುತ್ತಿದೆ. ಇದರಿಂದ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಹಬ್ಬದಲ್ಲಿ ಹೂ ಇಷ್ಟು ಕಡಿಮೆ ಬೆಲೆಗೆ ಮಾರಾಟವಾಗುತ್ತಿರುವುದು ಗ್ರಾಹಕರಲ್ಲಿ ಖುಷಿ ತಂದಿದೆ.-ದಿವಾಕರ್‌, ಅಧ್ಯಕ್ಷ, ಕೆ.ಆರ್‌. ಮಾರುಕಟ್ಟೆ ಸಗಟು ಹೂ ಮಾರಾಟಗಾರರ ಸಂಘ.

ಭಾರತಿ ಸಜ್ಜನ್‌

 

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.