Asia Cup Final; ಸಿರಾಜ್ ದಾಳಿಗೆ ಪತರುಗುಟ್ಟಿದ ಸಿಂಹಳೀಯರು; ಕೇವಲ 50 ರನ್ ಗೆ ಆಲೌಟ್
Team Udayavani, Sep 17, 2023, 5:22 PM IST
ಕೊಲಂಬೊ: ಭಾರತದ ವೇಗಿಗಳ ಬಿಗು ದಾಳಿಗೆ ಪರದಾಡಿದ ಶ್ರೀಲಂಕಾ ತಂಡವು ಏಷ್ಯಾ ಕಪ್ 2023ರ ಫೈನಲ್ ಪಂದ್ಯದಲ್ಲಿ ಕೇವಲ 50 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ. ಮೊಹಮದ್ ಸಿರಾಜ್ ಅವರ ಬೆಂಕಿ ಬೌಲಿಂಗ್ ಗೆ ಲಂಕನ್ ಬ್ಯಾಟರ್ ಗಳು ಪರದಾಡಿದರು.
ಮೊದಲ ಓವರ್ ನಿಂದಲೇ ವಿಕೆಟ್ ಕಳೆದುಕೊಳ್ಳಲಾರಂಭಿಸಿದ ಲಂಕಾ ಕೇವಲ 15.2 ಓವರ್ ನಲ್ಲಿ ಆಲೌಟಾಯಿತು.
ಲಂಕಾ ಪರ ಕೇವಲ ಇಬ್ಬರು ಮಾತ್ರ ಎರಡಂಕಿ ಮೊತ್ತ ದಾಟಿದರು. ಕುಸಲ ಮೆಂಡಿಸ್ 17 ರನ್ ಮತ್ತು ದುಶಾನ್ ಹೇಮಂತ 13 ರನ್ ಮಾಡಿದರು. ಲಂಕಾದ ಐದು ಬ್ಯಾಟರ್ ಗಳು ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.
ಏಳು ಓವರ್ ಬೌಲಿಂಗ್ ಮಾಡಿದ ಸಿರಾಜ್ 21 ರನ್ ನೀಡಿ ಆರು ವಿಕೆಟ್ ಪಡೆದರು. 2.2 ಓವರ್ ಬೌಲಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ ಮೂರು ವಿಕೆಟ್ ಕಿತ್ತರು. ಒಂದು ವಿಕೆಟ್ ಬುಮ್ರಾ ಪಾಲಾಯಿತು. ಅದರಲ್ಲೂ ಮೊಹಮ್ಮದ್ ಸಿರಾಜ್ ಒಂದೇ ಓವರ್ ನಲ್ಲಿ ನಾಲ್ಕು ವಿಕೆಟ್ ಕಿತ್ತರು. ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಸಾಧನೆಯನ್ನೂ ಮಾಡಿದರು.
ಏಕದಿನ ಕ್ರಿಕೆಟ್ ನಲ್ಲಿ ಇದು ಶ್ರೀಲಂಕಾದ ಎರಡನೇ ಅತಿ ಕಡಿಮೆ ರನ್ ಆಗಿದೆ. ಈ ಹಿಂದೆ ದ.ಆಫ್ರಿಕಾ ವಿರುದ್ಧ 43 ರನ್ ಗೆ ಆಲೌಟಾಗಿತ್ತು. ಏಕದಿನ ಫೈನಲ್ ಪಂದ್ಯವೊಂದರಲ್ಲಿ ದಾಖಲಾದ ಅತ್ಯಂತ ಕಡಿಮೆ ಮೊತ್ತ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್ ಪ್ರವೇಶಿಸಿದ ಭಾರತ ಹಾಕಿ ತಂಡ
International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು
ENGvsAUS: ಏಕದಿನ ಸರಣಿಗೂ ಬಟ್ಲರ್ ಅಲಭ್ಯ; ಎಸ್ಆರ್ಎಚ್ ಆಟಗಾರನಿಗೆ ನಾಯಕತ್ವ
B–G Trophy: ಈತನೇ ಭಾರತದ ಮುಂದಿನ ಸೂಪರ್ ಸ್ಟಾರ್ ಎಂದ ಸ್ಟೀವ್ ಸ್ಮಿತ್, ಸ್ಟಾರ್ಕ್
Asian Champions Trophy ಸೆಮಿಫೈನಲ್ : ಕೊರಿಯಾ ವಿರುದ್ಧ ಭಾರತ ಫೇವರಿಟ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.