![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 17, 2023, 5:22 PM IST
ಕೊಲಂಬೊ: ಭಾರತದ ವೇಗಿಗಳ ಬಿಗು ದಾಳಿಗೆ ಪರದಾಡಿದ ಶ್ರೀಲಂಕಾ ತಂಡವು ಏಷ್ಯಾ ಕಪ್ 2023ರ ಫೈನಲ್ ಪಂದ್ಯದಲ್ಲಿ ಕೇವಲ 50 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ. ಮೊಹಮದ್ ಸಿರಾಜ್ ಅವರ ಬೆಂಕಿ ಬೌಲಿಂಗ್ ಗೆ ಲಂಕನ್ ಬ್ಯಾಟರ್ ಗಳು ಪರದಾಡಿದರು.
ಮೊದಲ ಓವರ್ ನಿಂದಲೇ ವಿಕೆಟ್ ಕಳೆದುಕೊಳ್ಳಲಾರಂಭಿಸಿದ ಲಂಕಾ ಕೇವಲ 15.2 ಓವರ್ ನಲ್ಲಿ ಆಲೌಟಾಯಿತು.
ಲಂಕಾ ಪರ ಕೇವಲ ಇಬ್ಬರು ಮಾತ್ರ ಎರಡಂಕಿ ಮೊತ್ತ ದಾಟಿದರು. ಕುಸಲ ಮೆಂಡಿಸ್ 17 ರನ್ ಮತ್ತು ದುಶಾನ್ ಹೇಮಂತ 13 ರನ್ ಮಾಡಿದರು. ಲಂಕಾದ ಐದು ಬ್ಯಾಟರ್ ಗಳು ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.
ಏಳು ಓವರ್ ಬೌಲಿಂಗ್ ಮಾಡಿದ ಸಿರಾಜ್ 21 ರನ್ ನೀಡಿ ಆರು ವಿಕೆಟ್ ಪಡೆದರು. 2.2 ಓವರ್ ಬೌಲಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ ಮೂರು ವಿಕೆಟ್ ಕಿತ್ತರು. ಒಂದು ವಿಕೆಟ್ ಬುಮ್ರಾ ಪಾಲಾಯಿತು. ಅದರಲ್ಲೂ ಮೊಹಮ್ಮದ್ ಸಿರಾಜ್ ಒಂದೇ ಓವರ್ ನಲ್ಲಿ ನಾಲ್ಕು ವಿಕೆಟ್ ಕಿತ್ತರು. ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಸಾಧನೆಯನ್ನೂ ಮಾಡಿದರು.
ಏಕದಿನ ಕ್ರಿಕೆಟ್ ನಲ್ಲಿ ಇದು ಶ್ರೀಲಂಕಾದ ಎರಡನೇ ಅತಿ ಕಡಿಮೆ ರನ್ ಆಗಿದೆ. ಈ ಹಿಂದೆ ದ.ಆಫ್ರಿಕಾ ವಿರುದ್ಧ 43 ರನ್ ಗೆ ಆಲೌಟಾಗಿತ್ತು. ಏಕದಿನ ಫೈನಲ್ ಪಂದ್ಯವೊಂದರಲ್ಲಿ ದಾಖಲಾದ ಅತ್ಯಂತ ಕಡಿಮೆ ಮೊತ್ತ ಇದಾಗಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.