![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 17, 2023, 10:41 PM IST
ಕೊಲಂಬೊ : ಭಾರತ ವಿರುದ್ಧದ ಏಷ್ಯಾ ಕಪ್ ಫೈನಲ್ನಲ್ಲಿ ಹೀನಾಯ ನಿರ್ವಹಣೆ ತೋರಿದುದ್ದಕ್ಕಾಗಿ ಶ್ರೀಲಂಕಾ ತಂಡದ ನಾಯಕ ದಸುನ್ ಶಣಕ ಅವರು ಶ್ರೀಲಂಕಾ ಕ್ರಿಕೆಟ್ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ.
ನೀರಸ ಪ್ರದರ್ಶನ, ತಂಡದ 10 ವಿಕೆಟ್ಗಳ ಸೋಲಿನ ನಂತರ ನಿರುತ್ಸಾಹಗೊಂಡುದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಮುಖ ಫೈನಲ್ನಲ್ಲಿ ಸೋತ ಬಳಿಕ ಶ್ರೀಲಂಕಾ ತಂಡವನ್ನು ಬೆಂಬಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಪ್ರೇಕ್ಷಕರಿಗೆ ಧನ್ಯವಾದವನ್ನೂ ಅರ್ಪಿಸಿದ್ದಾರೆ.
ಪಂದ್ಯದ ಬಳಿಕ ಪ್ರಸ್ತುತಿ ವೇಳೆ ” ಭಾರಿ ಸಂಖ್ಯೆಯಲ್ಲಿ ಬಂದ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ, ನಾವು ನಿಮ್ಮನ್ನು ನಿರಾಶೆಗೊಳಿಸಿದ್ದಕ್ಕಾಗಿ ಕ್ಷಮಿಸಿ. ಕ್ರಿಕೆಟಿಗರಾದ ನಾವು ನಿಮ್ಮನ್ನು ನಿಜವಾಗಿಯೂ ಪ್ರೀತಿಸುತ್ತೇವೆ. ಬ್ರ್ಯಾಂಡೆಡ್ ಕ್ರಿಕೆಟ್ ಆಡುತ್ತಿರುವ ಭಾರತ ತಂಡಕ್ಕೆ ಅಭಿನಂದನೆಗಳು” ಎಂದು ಹೇಳಿದ್ದಾರೆ.
ಸಿರಾಜ್ ಅವರ ಅಸಾಧಾರಣ ಪ್ರದರ್ಶನದಿಂದಾಗಿ ಏಳು ಓವರ್ಗಳಲ್ಲಿ ಆರು ವಿಕೆಟ್ಗಳನ್ನು ಪಡೆದರು. ಶ್ರೀಲಂಕಾ ಕೇವಲ 15.2 ಓವರ್ಗಳಲ್ಲಿ ಕೇವಲ 50 ರನ್ಗಳಿಗೆ ಆಲೌಟ್ ಆಯಿತು, ಉತ್ತರವಾಗಿ ಭಾರತ ಕೇವಲ 37 ಎಸೆತಗಳಲ್ಲಿ 10 ವಿಕೆಟ್ಗಳ ಅಂತರದಲ್ಲಿ ಗುರಿ ಮುಟ್ಟಿತು. ಇನಿಂಗ್ಸ್ನಲ್ಲಿ ಉಳಿದಿರುವ ಚೆಂಡುಗಳ ಸಂಖ್ಯೆಯಿಂದ ಇದು ಭಾರತಕ್ಕೆ ಅತಿದೊಡ್ಡ ಜಯವಾಗಿದೆ ಮತ್ತು ಶ್ರೀಲಂಕಾಕ್ಕೆ ಅತಿದೊಡ್ಡ ಸೋಲು ಕೂಡ ಆಗಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.