Channapatna: ಮಹಿಳಾ ಕರಕುಶಲಕರ್ಮಿಗೆ ಪಿಎಂ ವಿಶ್ವಕರ್ಮ ಪ್ರಮಾಣಪತ್ರ
Team Udayavani, Sep 17, 2023, 11:34 PM IST
ನಮ್ಮ ದೇಶದ ಪುರಾತನ ಕುಶಲ ಕಲೆಯನ್ನು ಉತ್ತೇಜಿಸುವ ಹಾಗೂ ಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕೇಂದ್ರ ಸರಕಾರ ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಯ ಅಂಗವಾಗಿ, ಹೊಸದಿಲ್ಲಿಯಲ್ಲಿ ರವಿವಾರ ವಿಶ್ವಕರ್ಮ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚನ್ನಪಟ್ಟಣ ತಾಲೂಕಿನ ಬೊಂಬೆ ತಯಾರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆ ಶಾಲಿನಿ ಕರ್ನಾಟಕದಿಂದ ಪಿ.ಎಂ.ವಿಶ್ವಕರ್ಮ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ.
ಸಣ್ಣ ಆಟಿಕೆಗಳಿಂದ ಹಿಡಿದು ರಾಮ, ಸೀತೆ ವಿಗ್ರಹದ ವರೆಗೆ ವಿವಿಧ ಬೊಂಬೆಗಳನ್ನು ಅತ್ಯಂತ ಆಕರ್ಷಕವಾಗಿ ತಯಾರಿಸುವ ಕಲೆಯನ್ನು ಹೊಂದಿರುವ ಶಾಲಿನಿ, ಚನ್ನಪಟ್ಟಣದ ಆನಂದಪುರ ನಿವಾಸಿಯಾಗಿದ್ದು, ಇವರ ತಂದೆ, ತಾಯಿಯೂ ಕುಶಲಕರ್ಮಿಗಳಾಗಿದ್ದರು.
ನಗರದ ವಿವಿಧ ಬೊಂಬೆ ತಯಾರಿಕಾ ಘಟಕಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು, ಪ್ರಸ್ತುತ ಹಳೇ ಡೇರಾದಲ್ಲಿ ಇಶಾ ಎಂಬ ಬೊಂಬೆ ತಯಾರಿಕಾ ಘಟಕದಲ್ಲಿ ಕುಶಲ ಕರ್ಮಿಯಾಗಿ ಕೆಲಸ ಮಾಡುತ್ತಿದ್ದಾರೆ.
ಮಹಿಳೆಯನ್ನು ಗುರುತಿಸಿದ್ದು ಹೇಗೆ?
ಎಲೆ ಮರೆಕಾಯಿಯಂತಿದ್ದ ಶಾಲಿನಿ ಬೊಂಬೆ ತಯಾರಿಕಾ ಘಟಕದಲ್ಲಿ ಪರಿಣಿತ ಕುಶಲಕರ್ಮಿಯಾಗಿದ್ದು, ಇವರ ಕಾರ್ಯವನ್ನು ಗುರುತಿಸಿದ ಮೆಹದವಿಯಾ ವೆಲ್ಫೇರ್ ಟ್ರಸ್ಟ್ ಎಂಬ ಕುಶಲಕರ್ಮಿಗಳ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುವ ಸ್ವಯಂ ಸೇವಾ ಸಂಸ್ಥೆಯೊಂದು, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಮಾಣ ಪತ್ರ ಕಾರ್ಯಕ್ರಮಕ್ಕೆ ಮಹಿಳೆಯನ್ನು ಶಿಫಾರಸು ಮಾಡಿದೆ. ಕಾರ್ಯಕ್ರಮದ ಆಯೋಜಕರು ಮಹಿಳೆಯ ಎಲ್ಲ ದಾಖಲೆಗಳನ್ನು ಸಂಗ್ರಹಿಸಿ ಶಾಲಿನಿ ಅವರಿಗೆ ಪ್ರಧಾನಿ ಮೋದಿ ಅವರಿಂದ ಪ್ರಮಾಣ ಪತ್ರ ಕೊಡಿಸಿದ್ದಾರೆ.
1 ಲಕ್ಷ ರೂ. ನೆರವು
ಪ್ರಧಾನಮಂತ್ರಿಗಳಿಂದ ಪ್ರಮಾಣ ಪತ್ರ ಸ್ವೀಕರಿಸಿರುವ ಶಾಲಿನಿಗೆ ಸ್ವಂತ ಉದ್ಯೋಗ ಕೈಗೊಳ್ಳಲು ಕೇಂದ್ರ ಸರಕಾರದಿಂದ 1 ಲಕ್ಷ ರೂ. ಹಣಕಾಸಿನ ನೆರವನ್ನು ಅವರ ಖಾತೆಗೆ ನೇರನಗದು ವರ್ಗಾವಣೆ ಮೂಲಕ ನೀಡಲಾಗಿದೆ. ಇನ್ನೂ ಹೆಚ್ಚಿನ ನೆರವು ನೀಡುವ ಭರವಸೆ ಸಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.