Subrahmanya ರಸ್ತೆಯಲ್ಲೇ ಸಾಗುತ್ತಿದೆ ಕಾಡುಕೋಣ ಹಿಂಡು !
Team Udayavani, Sep 17, 2023, 11:37 PM IST
ಸುಬ್ರಹ್ಮಣ್ಯ: ಬಳ್ಪದ ಕೇನ್ಯ ಗ್ರಾಮದ ವಿಷ್ಣುನಗರದ ಬಳಿ ಕಾಡುಕೋಣಗಳ ಹಿಂಡು ಪ್ರತೀ ದಿನ ದಾರಿಹೋಕರಿಗೆ ಕಾಣಸಿಗುತ್ತಿದ್ದು, ಇತ್ತೀಚೆಗಿನ ಕೆಲವು ದಿನಗಳಿಂದ ಜನರಿಗೆ ಹಾಯಲು ಬರುತ್ತಿರುವುದಾಗಿ ತಿಳಿದುಬಂದಿದೆ.
ಕೆಲವು ದಿನಗಳ ಹಿಂದೆ ಪಂಜ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಘುನಾಥ ರೈ ಕೆರೆಕ್ಕೋಡಿ ಅವರು ದ್ವಿಚಕ್ರ ವಾಹನದಲ್ಲಿ ಈ ದಾರಿಯಲ್ಲಿ ಬರುತ್ತಿರುವಾಗ 10ಕ್ಕಿಂತಲೂ ಅಧಿಕ ಕಾಡುಕೋಣಗಳಿದ್ದ ಗುಂಪು ದಾಳಿಗೆ ಮುಂದಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅವರು ಈ ಬಗ್ಗೆ ಪಂಜ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಇದೀಗ ಇಲಾಖಾ ಸಿಬಂದಿ ತಮ್ಮ ವಾಹನದಲ್ಲಿ ಬೆಳಗ್ಗೆ ಮತ್ತು ಸಂಜೆ ಶಾಲಾ ವಿದ್ಯಾರ್ಥಿಗಳು ಹೋಗುವ ಸಮಯದಲ್ಲಿ ಈ ಜಾಗದಲ್ಲಿ ಬಂದು ಮೊಕ್ಕಾಂ ಹೂಡಿದ್ದಾರೆ.
ಅರಣ್ಯ ಇಲಾಖಾ ಸಿಬಂದಿ ಹಲವು ಮನೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದೆ. ಕಾಡುಕೋಣಗಳ ಹಿಂಡನ್ನು ಈ ಭಾಗದಿಂದ ಓಡಿಸಲು ಇಲಾಖೆಯ ಮೂಲಕ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Renukaswamy Case: ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ಮುಂದೂಡಿಕೆ
BBK11: 11 ವರ್ಷದ ಬಿಗ್ಬಾಸ್ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?
ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ
Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!
Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.