Chaitra Kundapur ಪ್ರಕರಣ; ಸಾಲುಮರದ ತಿಮ್ಮಕ್ಕನ ಸರಕಾರಿ ಕಾರು ದುರ್ಬಳಕೆ?


Team Udayavani, Sep 18, 2023, 6:35 AM IST

1—–wwqewq

ಬೆಂಗಳೂರು/ ಬೇಲೂರು: ಉದ್ಯಮಿಗೆ 5 ಕೋಟಿ ರೂ. ವಂಚಿಸಿದ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ, ಸಾಲುಮರದ ತಿಮ್ಮಕ್ಕರಿಗೆ ನೀಡಿದ ಸಚಿವ ದರ್ಜೆ ಸ್ಥಾನಮಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಬಿಜೆಪಿ ಕೇಂದ್ರ ಚುನಾವಣ ಸಮಿತಿ ಸದಸ್ಯನ ಪಾತ್ರ ಮಾಡಿದ್ದ ಚನ್ನಾ ನಾಯ್ಕ ಬಳಸಿದ್ದ ಕಾರು ಸಾಲುಮರದ ತಿಮ್ಮಕ್ಕನಿಗೆ ಸೇರಿದ್ದು ಎಂದು ಹೇಳಲಾಗಿದೆ. ಕುಮಾರಕೃಪಾ ಗೆಸ್ಟ್‌ ಹೌಸ್‌ಗೆ ಪ್ರವೇಶಿಸಲು ತಿಮ್ಮಕ್ಕ ಅವರ ಕಾರು ಬಳಸಲಾಗಿದೆ ಹಾಗೂ ದೂರುದಾರ ಗೋವಿಂದ ಬಾಬು ಪೂಜಾರಿಯನ್ನು ನಂಬಿಸಲೂ ಈ ಕೆಲಸ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಆರೋಪಿ ಗಗನ್‌ ಕಡೂರು ಹಾಗೂ ಸಾಲುಮರದ ತಿಮ್ಮಕ್ಕನ ಪುತ್ರ ಉಮೇಶ್‌ ಆತ್ಮೀಯರಾಗಿದ್ದರು. ಉಮೇಶ್‌ ಸಾಲುಮರದ ತಿಮ್ಮಕ್ಕನ ಜತೆ ಗಗನ್‌ ಕಡೂರು ಮದುವೆಗೆ ಹೋಗಿದ್ದರು. ಹೀಗಾಗಿ ಉಮೇಶ್‌ ಜತೆಗಿನ ಸ್ನೇಹವನ್ನು ಗಗನ್‌ ದುರ್ಬಳಕೆ ಮಾಡಿಕೊಂಡಿದ್ದಾನೆ. ವಿಧಾನಸೌಧದಲ್ಲಿ ತಿಮ್ಮಕ್ಕರಿಗೆ ನೀಡಿರುವ ಕೊಠಡಿಯ ನವೀಕರಣದ ಜವಾಬ್ದಾರಿಯನ್ನು ಗಗನ್‌ ಕಡೂರು ಹೊತ್ತುಕೊಂಡಿದ್ದ ಎಂದೂ ಹೇಳಲಾಗುತ್ತಿದೆ. ಆದರೆ ಅದನ್ನು ತಿಮ್ಮಕ್ಕರ ದತ್ತುಪುತ್ರ ಉಮೇಶ್‌ ಅವರು ತಳ್ಳಿ ಹಾಕಿದ್ದಾರೆ.

ನಮಗೆ ಸಂಬಂಧ ಇಲ್ಲ: ತಿಮ್ಮಕ್ಕ
ಈ ಬೆನ್ನಲ್ಲೇ ಸಾಲುಮರದ ತಿಮ್ಮಕ್ಕ ಹಾಸನದ ಬೇಲೂರಿನ ಬಳ್ಳೂರಿನಲ್ಲಿ ದತ್ತುಪುತ್ರ ಉಮೇಶ್‌ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ, ಗೋವಿಂದ ಬಾಬು ಪೂಜಾರಿ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಗಗನ್‌ ಕಡೂರು ಮತ್ತು ನಮಗೆ ಯಾವುದೇ ಸಂಬಂಧವಿಲ್ಲ. ಟೀವಿಯಲ್ಲಿ ನಮ್ಮ ಬಗ್ಗೆ ಏನೇನೋ ಬರುತ್ತಿದೆ. ನಾವು ಗಿಡ ನೆಡುತ್ತಾ, ಹೇಗೋ ಜೀವನ ನಡೆಸುತ್ತಿದ್ದೇವೆ. ಸರಕಾರಕ್ಕೆ ಹೆದರಿ ಬದುಕುವ ಜನ ಎಂದು ಹೇಳಿದರು.
ಉಮೇಶ್‌ ಮಾತನಾಡಿ, ನಾವು ಗಗನ್‌ ಕಡೂರು ಮದುವೆಗೆ ಹೋಗಿದ್ದು ನಿಜ. ಅವರು ಭಾರತೀಯ ಅಯ್ಯಪ್ಪ ಸೇವಾ ಸಮಿತಿ ಸದಸ್ಯರಾಗಿದ್ದು, ನಾನು ಅದರ ಅಧ್ಯಕ್ಷ. ಗಗನ್‌, ತಿಮ್ಮಕ್ಕ ಅವರ ಕಾರು ದುರ್ಬಳಕೆ ಮಾಡಿಕೊಂಡಿರುವ, ವಿಧಾನಸೌಧದ ಕೊಠಡಿಯನ್ನು ನವೀಕರಿಸಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಪರಿಶೀಲಿಸಿ ಸುದ್ದಿ ಮಾಡಬೇಕು. ಅದು ಸತ್ಯಕ್ಕೆ ದೂರವಾಗಿದೆ ಎಂದರು.

ದೇಶದಲ್ಲಿ ತಿಮ್ಮಕ್ಕ ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ಹೀಗಾಗಿ ಅವರೊಂದಿಗೆ ಫೋಟೋ ತೆಗೆಸಿಕೊಳ್ಳುತ್ತಾರೆ, ಮದುವೆಗೆ ಕರೆಯುತ್ತಾರೆ. ಪ್ರೀತಿಯಿಂದ ಕರೆದಾಗ ಹೋಗ ಬೇಕಾಗುತ್ತದೆ. ಅದೇ ರೀತಿ ಗಗನ್‌ ಮದುವೆಗೂ ಹೋಗಿದ್ದೇವೆ ಅಷ್ಟೆ. ಅವರು ತಪ್ಪು ಮಾಡಿದ್ದರೆ ಶಿಕ್ಷೆ ಯಾಗಲಿ. ಅದರಲ್ಲಿ ನಮ್ಮ ಹೆಸರು ಪ್ರಸ್ತಾವಿಸಿರುವುದು ಬಹಳ ತಪ್ಪು ಎಂದು ಹೇಳಿದರು.

ಇನ್ನು ತಿಮ್ಮಕ್ಕ ಅವರ ಕೊಠಡಿಯನ್ನು ನವೀಕರಣ ಮಾಡಲು ಗಗನ್‌ ಯಾರು? ಕೊಠಡಿಯನ್ನು ಸರಕಾರ ನವೀಕರಿಸಿ ಕೊಡುತ್ತದೆ. ಗಗನ್‌ ತಿಮ್ಮಕ್ಕ ಅವರ ಕಾರನ್ನು ಬಳಸಿದ್ದರೆ ಅದಕ್ಕೆ ದಾಖಲೆ ಕೊಡಿ. ನಾವು ಸಮಾಜಕ್ಕಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದೇವೆ ಹೊರತು ಸಮಾಜಕ್ಕೆ ದ್ರೋಹ, ಅಘಾತವಾಗುವಂತಹ ಕೆಲಸ ಮಾಡುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.