Dharwad: ಮರಳಿ ಒಂದಾದ 19 ದಂಪತಿ; 30 ವರ್ಷಗಳ ಸುದೀರ್ಘ‌ ವ್ಯಾಜ್ಯ ಅಂತ್ಯ


Team Udayavani, Sep 18, 2023, 4:24 PM IST

Dharwad: ಮರಳಿ ಒಂದಾದ 19 ದಂಪತಿ; 30 ವರ್ಷಗಳ ಸುದೀರ್ಘ‌ ವ್ಯಾಜ್ಯ ಅಂತ್ಯ

ಧಾರವಾಡ: ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ವಿವಾಹ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದ ಒಟ್ಟು 19 ದಂಪತಿಗಳಲ್ಲಿ ರಾಜಿ ಮಾಡಿಸಿ, ಮತ್ತೆ ಒಂದುಗೂಡಿಸುವಲ್ಲಿ ಸೆ.9ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ ಯಶಸ್ವಿಯಾಗಿದೆ. ಇದರ ಜತೆಗೆ ಒಟ್ಟು 70,599 ಪ್ರಕರಣಗಳಲ್ಲಿ ರಾಜಿ ಸಂಧಾನ ಕೈಗೊಂಡು 60,87,357 ರೂ. ಮೊತ್ತ ವಸೂಲು ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಕೆ.ಜಿ. ಶಾಂತಿ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡದಲ್ಲಿ-15 ಪೀಠಗಳನ್ನು, ಹುಬ್ಬಳ್ಳಿಯಲ್ಲಿ-18 ಪೀಠಗಳನ್ನು, ಕುಂದಗೋಳ-2, ನವಲಗುಂದ-2 ಮತ್ತು ಕಲಘಟಗಿಯಲ್ಲಿ-2 ಸೇರಿ ಒಟ್ಟು 39 ಪೀಠಗಳನ್ನು ಲೋಕ ಅದಾಲತ್‌ಗಾಗಿ ಸ್ಥಾಪಿಸಲಾಗಿತ್ತು.

ಈ ಪೀಠಗಳಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ರಾಜಿ ಆಗಬಹುದಾದಂತಹ 18,864 ಪ್ರಕರಣಗಳನ್ನು
ತೆಗೆದುಕೊಂಡು ಅವುಗಳ ಪೈಕಿ 13,589 ಪ್ರಕರಣಗಳನ್ನು ಹಾಗೂ 65,600 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು
ಅವುಗಳ ಪೈಕಿ 57,010 ಪ್ರಕರಣಗಳನ್ನು ಸೇರಿ ಒಟ್ಟು 70,599 ರಾಜಿ ಸಂಧಾನ ಮಾಡಿಸಿ ಒಟ್ಟು 60,87,39,357 ಮೊತ್ತವನ್ನು ವಸೂಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಧಾರವಾಡದ ಪ್ರಧಾನ ಹಿರಿಯ ಸಿವಿಲ್‌ ಮತ್ತು ಸಿಜೆಎಂ ನ್ಯಾಯಾಧೀಶರಾದ ಸಂಜಯ ಪಿ. ಗುಡಗುಡಿ ಮತ್ತು ಸಂಧಾನಕಾರರಾದ ಬಿ.ಡಿ. ನರಸಗೌಡ ಅವರನ್ನೊಳಗೊಂಡ ಲೋಕ ಅದಾಲತ್‌ ಪೀಠದಲ್ಲಿ 96 ವರ್ಷದ ಹಿರಿಯ ನಾಗರಿಕ ಬಸನಗೌಡ ಯಲ್ಲಪ್ಪಗೌಡ ಮರಿಯಪ್ಪಗೌಡ ಅವರು ವಿಭಾಗದ ದಾವೆಯಲ್ಲಿ ತಮ್ಮ ಆಸ್ತಿಯನ್ನು ಸಂತೋಷದಿಂದ ತಮ್ಮ ಮಗನಿಗೆ ಬಿಟ್ಟು ಕೊಡುವ ಮೂಲಕ ತಮ್ಮ ದೊಡ್ಡತನ ಮೆರೆದು ಕುಟುಂಬದವರೆಲ್ಲರ ಗೌರವಕ್ಕೆ ಪಾತ್ರರಾಗಿದ್ದಾರೆ.

ಧಾರವಾಡದ 1ನೇ ಅಧಿಕ ಹಿರಿಯ ಸಿವಿಲ್‌ ನ್ಯಾಯಾ ಧೀಶರಾದ ವಿಜಯಲಕ್ಷ್ಮೀ ಗಣಾಪುರ ಮತ್ತು ಸಂಧಾನಕಾರರಾದ ಕಸ್ತೂರಿ ಗಡಾದ ಅವರನ್ನೊಳಗೊಂಡ ಲೋಕ ಅದಾಲತ್‌ ಪೀಠದಲ್ಲಿ 30 ಜನ ಪಕ್ಷಗಾರರಿದ್ದ ಆಸ್ತಿ ವಿಭಾಗದ ದಾವೆಯು ಸಹ ರಾಜಿ
ಆಗಿದ್ದು, ಅದರಲ್ಲಿ ಹಿರಿಯ ನಾಗರಿಕರು ಸಹ ಭಾಗಿಯಾಗಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

30 ವರ್ಷಗಳ ಸುದೀರ್ಘ‌ ವ್ಯಾಜ್ಯ ಅಂತ್ಯ
ಧಾರವಾಡದ 3ನೇ ಅಧಿಕ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಮಹೇಶ ಚಂದ್ರಕಾಂತ ಅವರು ಮತ್ತು ಸಂಧಾನಕಾರರಾದ ಗಿರೀಶ್‌ಕುಮಾರ ಕನಸೋಗಿ ಅವರನ್ನೊಳಗೊಂಡ ಲೋಕ ಅದಾಲತ್‌ ಪೀಠದಲ್ಲಿ 1980ರ ಕ್ರಯದ ಕರಾರು ಪತ್ರದ ಆಧಾರದ ಮೇಲೆ ನೋಂದಣಿ ಕ್ರಯಪತ್ರ ಬರೆದುಕೊಡಲು ಆದೇಶಿಸುವಂತೆ 1994ರಲ್ಲಿ ಸಲ್ಲಿಸಿದ್ದ ದಾವೆ ಯಶಸ್ವಿಯಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡ ಕಕ್ಷಿದಾರರು ತಮ್ಮ 30 ವರ್ಷಗಳ ಸುದೀರ್ಘ‌ ವ್ಯಾಜ್ಯಕ್ಕೆ ಮಂಗಳ ಹಾಡಿದ್ದಾರೆ.

ಇದೇ ನ್ಯಾಯಾಲಯದಲ್ಲಿ ಧಾರವಾಡ ಲೈನ್‌ ಬಜಾರದ ಹನುಮಂತ ದೇವಸ್ಥಾನದ ವ್ಯಾಜ್ಯವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡ ಕಕ್ಷಿದಾರರು ಪಾಳೆ ಪ್ರಕಾರ ದೇವಸ್ಥಾನದ ಪೂಜೆ ಮಾಡಲು ಸಂತೋಷದಿಂದ ಒಪ್ಪಿಕೊಂಡಿದ್ದಾರೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.