Chaitra Kundapur Caseಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಶಾಸಕ ಅರವಿಂದ ಬೆಲ್ಲದ್
Team Udayavani, Sep 20, 2023, 2:31 PM IST
![6-](https://www.udayavani.com/wp-content/uploads/2023/09/6--620x372.jpg)
![6-](https://www.udayavani.com/wp-content/uploads/2023/09/6--620x372.jpg)
ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿರುವ ಗಣೇಶ ಮೂರ್ತಿಯ ವಿಸರ್ಜನೆ ಗುರುವಾರ ನಡೆಯಲಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ್ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಬೆಳಿಗ್ಗೆ 11:45 ಸುಮಾರಿಗೆ ಈದ್ಗಾ ಮೈದಾನದಿಂದ ಮೆರವಣಿಗೆ ಆರಂಭವಾಗಲಿದ್ದು, ಇಂದಿರಾಗ ಗಾಜಿನ ಮನೆ ಪಕ್ಕದಲ್ಲಿರುವ ಬಾವಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುವುದು ಎಂದರು.
ಸುಮಾರು ಮೂರರಿಂದ ನಾಲ್ಕು ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕಾಂಗ್ರೆಸ್ ಸರ್ಕಾರ ಅನಗತ್ಯ ಗೊಂದಲ ಹಾಗೂ ವಿಳಂಬವನ್ನು ತೋರಿದ್ದು ಗಣೇಶ ಭಕ್ತರ ಹೋರಾಟಕ್ಕೆ ಮಣಿದು ಅಂತಿಮವಾಗಿ ಪರವಾನಿಗೆ ನೀಡಿದೆ ಎಂದರು.
ಚೈತ್ರಾ ಕುಂದಾಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ನುಡಿದರು.
ಬಿಜೆಪಿ ಕಚೇರಿಯಿಂದ ಫೋನ್ ಹೋಗಿದೆ ಎಂಬ ವಿಷಯಕ್ಕೆ ಪ್ರತಿಕ್ರಿಯಿಸಿ ಬಿಜೆಪಿ ಕಚೇರಿಗೆ ಅನೇಕರು ಬರುತ್ತಾರೆ ಯಾರು ಫೋನ್ ಮಾಡಿದ್ದಾರೆ ಎಂಬುದು ಹೇಗೆ ತಿಳಿಯುತ್ತದೆ ತನಿಖೆಯಿಂದ ಎಲ್ಲವೂ ಬಯಲಾಗಲಿ ಎಂದರು.
ಶಾಸಕ ಮಹೇಶ ತೆಂಗಿನಕಾಯಿ ಮಾತನಾಡಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಕಳೆದ ವರ್ಷದಿಂದಲೇ ಪ್ರತಿಷ್ಠಾಪಿಸುತ್ತಾ ಬಂದಿದ್ದು, ಮತ್ತೊಮ್ಮೆ ಅಂಜುಮನ್ ಸಂಸ್ಥೆಯವರು ಕೋರ್ಟಿಗೆ ಹೋಗಿದ್ದು ಯಾಕೆ ಇದರ ಹಿಂದಿನ ಪ್ರಚೋದನೆ ಯಾರದು ಎಂಬುದು ಸ್ಪಷ್ಟವಾಗಲಿ ಎಂದು ಒತ್ತಾಯಿಸಿದರು.
ಗಣೇಶ ಹಬ್ಬವನ್ನು ಎಲ್ಲರೂ ಶಾಂತಿಯುತ ಹಾಗೂ ಸೌಹಾರ್ದವಾಗಿ ಆಚರಿಸೋಣ ಎಂದು ನಾವು ಕರೆ ನೀಡಿದ್ದೇವೆ ನಾವು ಯಾರ ಬಗ್ಗೆಯೂ ದ್ವೇಷ ಭಾವನೆ ತಾಳಿಲ್ಲ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’](https://www.udayavani.com/wp-content/uploads/2025/02/TRAINaaa-150x89.jpg)
![Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’](https://www.udayavani.com/wp-content/uploads/2025/02/TRAINaaa-150x89.jpg)
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
![ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ](https://www.udayavani.com/wp-content/uploads/2025/02/aaa-1-150x69.jpg)
![ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ](https://www.udayavani.com/wp-content/uploads/2025/02/aaa-1-150x69.jpg)
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
![8](https://www.udayavani.com/wp-content/uploads/2025/02/8-15-150x80.jpg)
![8](https://www.udayavani.com/wp-content/uploads/2025/02/8-15-150x80.jpg)
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
![Hubli: Police seize Rs 89.99 lakhs being transported without documents](https://www.udayavani.com/wp-content/uploads/2025/02/money-1-150x84.jpg)
![Hubli: Police seize Rs 89.99 lakhs being transported without documents](https://www.udayavani.com/wp-content/uploads/2025/02/money-1-150x84.jpg)
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
![ED summons case: Temporary relief for Siddaramaiah’s wife Parvathi, Bairati Suresh](https://www.udayavani.com/wp-content/uploads/2025/02/dharwad-150x84.jpg)
![ED summons case: Temporary relief for Siddaramaiah’s wife Parvathi, Bairati Suresh](https://www.udayavani.com/wp-content/uploads/2025/02/dharwad-150x84.jpg)
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್