Women’s Quota Bill: ಲೋಕಸಭೆಯಲ್ಲಿ “ನಾರಿ ಶಕ್ತಿ ವಂದನ್‌ ಅಧಿನಿಯಮ’ ಮಸೂದೆ ಅಂಗೀಕಾರ

ಇಂದು ರಾಜ್ಯಸಭೆಯಲ್ಲಿ ಮಂಡನೆ

Team Udayavani, Sep 21, 2023, 8:40 AM IST

Women’s Quota Bill: ಲೋಕಸಭೆಯಲ್ಲಿ “ನಾರಿ ಶಕ್ತಿ ವಂದನ್‌ ಅಧಿನಿಯಮ’ ಮಸೂದೆ ಅಂಗೀಕಾರ

ಹೊಸದಿಲ್ಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಒದಗಿಸುವ ಐತಿಹಾಸಿಕ ಮಸೂದೆಯು ಬುಧವಾರ ಲೋಕಸಭೆಯಲ್ಲಿ ಅಂಗಿಕಾರ ಗೊಂಡಿದೆ. ಈ ಮೂಲಕ 27 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ “ಮಹಿಳಾ ಮೀಸಲಾತಿ’ಯ ಕನಸು ಕೊನೆಗೂ ಸಾಕಾರಗೊಳ್ಳುವತ್ತ ಸಾಗಿದೆ.

ಮಸೂದೆ ಅಂಗೀಕಾರಕ್ಕೆ ನೂತನ ಸಂಸತ್‌ ಭವನ ಸಾಕ್ಷಿಯಾಗಿದ್ದಲ್ಲದೆ, ಪಕ್ಷ ಭೇದ ಮರೆತು ಸಂಸದರೆಲ್ಲರೂ ಒಗ್ಗಟ್ಟಾಗಿ ಮಹಿಳಾ ಸಬಲೀಕರಣಕ್ಕೆ ಜೈಕಾರ ಹಾಕಿ ದರು. ಲೋಕ ಸಭೆಯ ಅಂಕಿತ ಪಡೆದ “ನಾರಿ ಶಕ್ತಿ ವಂದನ್‌ ಅಧಿನಿಯಮ’ ಮಸೂದೆಯು ಗುರುವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ.

ಲೋಕಸಭೆ ಹಾಗೂ ರಾಜ್ಯ ವಿಧಾನ ಸಭೆಗಳಲ್ಲಿ ಸ್ತ್ರೀಯರಿಗೆ ಮೂರನೇ ಒಂದರಷ್ಟು ಮೀಸ ಲಾತಿ ಕಲ್ಪಿಸುವ ಮಸೂದೆ ಕುರಿತಾಗಿ ಬುಧ ವಾರ ಸತತ 7 ಗಂಟೆ ಚರ್ಚೆ ನಡೆದ ಬಳಿಕ ಧ್ವನಿಮತದ ಮೂಲಕ ಮಸೂದೆಗೆ ಅಂಗೀಕಾರ ಪಡೆಯಲಾಯಿತು. 27 ಮಂದಿ ಮಹಿಳಾ ಸಂಸದರು ಚರ್ಚೆಯಲ್ಲಿ ಪಾಲ್ಗೊಂಡರು. 454 ಸಂಸದರು ಮಹಿಳಾ ಮೀಸಲಾತಿ ಪರ ಹಾಗೂ ಎಐಎಂಐಎಂ ಪಕ್ಷದ ಅಸಾದುದ್ದೀನ್‌ ಒವೈಸಿ ಹಾಗೂ ಅದೇ ಪಕ್ಷದ ಇಮಿ¤ಯಾಜ್‌ ಜಲೀಲ್‌ ಮಸೂದೆ ವಿರುದ್ಧ ಮತ ಚಲಾಯಿಸಿದವರು. ಇತರ ಸದಸ್ಯರು ಗೈರಾಗಿದ್ದರು. “ಸವರ್ಣೀಯ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸುವುದಷ್ಟೇ ಈ ಸರಕಾರದ ಉದ್ದೇಶ’ ಎಂದು ಆರೋಪಿಸಿದ ಈ ಇಬ್ಬರು ಸಂಸದರು, ಒಬಿಸಿ ಮತ್ತು ಮುಸ್ಲಿಂ ಮಹಿಳೆಯರಿಗೂ ಮೀಸಲಾತಿ ನೀಡಲು ಆಗ್ರಹಿಸಿದರು.

1996ರಲ್ಲಿ ಮೊತ್ತ ಮೊದಲ ಬಾರಿಗೆ ಮಂಡನೆಯಾಗಿದ್ದ ಈ ಮಸೂದೆ ಇದುವರೆಗೆ 6 ಬಾರಿ ಪರೀಕ್ಷೆ ಎದುರಿಸಿತ್ತು. 2008ರಲ್ಲಿ ಯುಪಿಎ ಸರ ಕಾರ ಸಿದ್ಧಪಡಿಸಿದ್ದ ಈ ಮಸೂದೆಯು ರಾಜ್ಯಸಭೆಯಲ್ಲಿ ಅಂಗೀಕಾರ ಗೊಂಡಿತ್ತು. ಆದರೆ ಒಬಿಸಿಗೂ ಮೀಸಲಾತಿ ಗಾಗಿ ಹಲವು ಪಕ್ಷಗಳು ಒತ್ತಾಯಿಸಿದ್ದ ಕಾರಣ ಲೋಕಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ.

ಬಿಸಿ ಬಿಸಿ ಚರ್ಚೆ
ಬುಧವಾರ ಲೋಕಸಭೆಯಲ್ಲಿ ನಡೆದ ಚರ್ಚೆ ಯಲ್ಲಿ ಸಂಸದರು ಸಕ್ರಿಯವಾಗಿ ಪಾಲ್ಗೊಂಡರು. ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಯವರು, ಇತರ ಹಿಂದುಳಿದ ವರ್ಗಗಳ(ಒಬಿಸಿ) ಮಹಿಳೆಯ ರಿಗೂ ಮೀಸಲಾತಿಯನ್ನು ಒದಗಿ ಸುವ ನಿಬಂಧನೆಯನ್ನು ಸೇರಿಸಬೇಕು ಮತ್ತು ಮಸೂದೆಯನ್ನು ಆದಷ್ಟು ಬೇಗ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ದರು. ಮಹಿಳೆಯರಿಗೆ ಮೀಸಲಾತಿ ಜಾರಿ ಮಾಡುವ ಮೊದಲು ಜನಗಣತಿ ಮತ್ತು ಕ್ಷೇತ್ರಗಳ ಪುನರ್‌ವಿಂಗಡಣೆ ಪ್ರಕ್ರಿಯೆ ನಡೆಯ ಬೇಕು ಎಂಬ ಸರಕಾರದ ನಿರ್ಧಾರವನ್ನು ವಿಪಕ್ಷಗಳ ಹಲವು ನಾಯಕರು ವಿರೋಧಿಸಿ ದರು. ಮಹಿಳಾ ಮೀಸಲಾತಿ ಜಾರಿ ಪ್ರಕ್ರಿಯೆ ಇದರಿಂದಾಗಿಯೇ ವಿಳಂಬವಾಗಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿ, “ವಿಳಂಬ ಆಗುವುದಿಲ್ಲ. ಲೋಕಸಭೆ ಚುನಾವಣೆ ಮುಗಿದ ಕೂಡಲೇ ಮುಂದಿನ ಸರಕಾರ ಗಣತಿ ಹಾಗೂ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆ ಆರಂಭಿಸಲಿದೆ’ ಎಂದು ಹೇಳಿದರು.

ಮಹಿಳಾ ಮಸೂದೆ ಅಂಗೀಕಾರವಾಗಿರುವುದಕ್ಕೆ ಸಂತಸವಾಗಿದೆ. ಬೆಂಬಲ ನೀಡಿದ ಎಲ್ಲ ಪಕ್ಷಗಳ ಸಂಸದರಿಗೂ ಧನ್ಯವಾದಗಳು.
– ನರೇಂದ್ರ ಮೋದಿ, ಪ್ರಧಾನಿ

ಇದು ನನ್ನ ಬದುಕಿನ ಅತ್ಯಂತ ಹೃದಯಸ್ಪರ್ಶಿ ಕ್ಷಣ. ಈ ಮಸೂದೆ ಅಂಗೀಕಾರಗೊಂಡರೆ ರಾಜೀವ್‌ ಗಾಂಧಿಯವರ ಕನಸು ಈಡೇರಿದಂತೆ. ಒಬಿಸಿ ಮಹಿಳೆ ಯರಿಗೂ ಮೀಸಲಾತಿ ಸಿಗು ವಂತಾಗಬೇಕು. ಕಾಂಗ್ರೆಸ್‌ ಈ ಮಸೂದೆಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ.
– ಸೋನಿಯಾ ಗಾಂಧಿ, ಕಾಂಗ್ರೆಸ್‌ ನಾಯಕಿ

ಮಹಿಳಾ ಸುರಕ್ಷೆ, ಗೌರವ, ಸಮಾನ ಭಾಗೀದಾರಿಕೆಯು ಪ್ರಧಾನಿ ಮೋದಿ ನೇತೃತ್ವದ ಸರಕಾರದ ಸಂಕಲ್ಪವಾಗಿದೆ. ಮಹಿಳಾ ಮೀಸಲಾತಿ ಮಸೂದೆಯು ಹೊಸ ಯುಗಾರಂಭಕ್ಕೆ ನಾಂದಿ ಹಾಡಿದೆ.
– ಅಮಿತ್‌ ಶಾ, ಕೇಂದ್ರ ಗೃಹ ಸಚಿವ

ಇದನ್ನೂ ಓದಿ: ‘Donald Trump: ಡೊನಾಲ್ಡ್ ಟ್ರಂಪ್ ನಿಧನ… ಟ್ರಂಪ್ ಮಗನ X ಖಾತೆ ಹ್ಯಾಕ್ ಮಾಡಿ ಟ್ವೀಟ್

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.