Custard Apple: ಬರದ ತೀವ್ರತೆಗೆ ಕಣ್ಮರೆಯಾದ ಸೀತಾಫ‌ಲ!


Team Udayavani, Sep 21, 2023, 5:40 PM IST

tdy-17

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯ ಪರಿಣಾಮ ರೈತರಿಗೆ ನೈಸರ್ಗಿಕವಾಗಿ ಬೆಟ್ಟ, ಗುಡ್ಡಗಳಲ್ಲಿ ಕೈಗೆಟುಕುತ್ತಿದ್ದ ಸೀತಾಫ‌ಲ ಹಣ್ಣುಗಳು ಈ ಬಾರಿ ಅಪರೂವಾಗಿದ್ದು, ಮಳೆ ಇಲ್ಲದ ಕಾರಣ ಸೀತಾಫ‌ಲ ಹಣ್ಣುಗಳ ಗಿಡಗಳು ಒಣಗಿ ರೈತರಿಗೆ ತೀವ್ರ ನಿರಾಸೆ ಮೂಡಿಸುತ್ತಿವೆ.

ಹೌದು, ಜಿಲ್ಲೆಯಲ್ಲಿ ಸತತ ಎರಡು, ಮೂರು ವರ್ಷಗಳಿಂದ ನಿರೀಕ್ಷೆಗೂ ಮೀರಿ ಮಳೆ ಸುರಿದಿದ್ದ ಪರಿಣಾಮ ನಿಸರ್ಗದತ್ತವಾಗಿ ಸಿಗುವ ಸೀತಾಫ‌ಲ ಹಣ್ಣುಗಳ ಭರ್ಜರಿ ಫ‌ಸಲು ಸಿಕ್ಕಿದರೆ, ಈ ಬಾರಿ ಬರಗಾಲಕ್ಕೆ ಸೀತಾಫ‌ಲ ಹಣ್ಣುಗಳನ್ನು ಕಣ್ಮರೆ ಆಗುವಂತೆ ಮಾಡಿದೆ.

ಮಳೆಗಾಲದ ವಿಶೇಷ ಅತಿಥಿ ಎಂದೇ ಕರೆಯುವ ಸೀತಾಫ‌ಲ ಹಣ್ಣಿಗೆ ರೈತಾಪಿ ವಲಯದಲ್ಲಿ ವಿಶೇಷ ಸ್ಥಾನ ಇದೆ. ಕಾಡಂಚಿನಲ್ಲಿ ಅದರಲ್ಲೂ ಬೆಟ್ಟ, ಗುಡ್ಡಗಳಲ್ಲಿ ಮರಗಳ ಪೊದೆಗಳಲ್ಲಿ ಅಪರೂಪಕ್ಕೆ ಕಂಡು ಬರುವ ಈ ಸೀತಾಫ‌ಲ ಹಣ್ಣುಗಳು ರುಚಿಯಲ್ಲಿ ಅಂತೂ ಯಾವ ಹಣ್ಣುಗಳಗಿಂತ ಕಡಿಮೆ ಇಲ್ಲ. ಎರಡು, ಮೂರು ವರ್ಷದಿಂದ ಉತ್ತಮ ಮಳೆಯಾಗಿ ನಿರೀಕ್ಷೆಗೂ ಮೀರಿ ಗಿಡಗಳಲ್ಲಿ ಸೀತಾಫ‌ಸಲು ಭರ್ಜರಿ ಫ‌ಸಲು ಬಿಟ್ಟು ಮಾರುಕಟ್ಟೆಗೆ ಪ್ರವೇಶ ಮಾಡಿ ಗ್ರಾಹಕರನ್ನು ಕೈಬಿಸಿ ಕರೆದಿದ್ದವು. ಅಲ್ಲದೇ ಸೆಪ್ಪೆಂಬರ್‌ ತಿಂಗಳ ಆರಂಭದಲ್ಲಿಯೆ ಎಲ್ಲಿ ನೋಡಿದರೂ ಮಾರಾಟಕ್ಕೆ ಗ್ರಾಮೀಣ ಮಹಿಳೆಯರು ಬುಟ್ಟಿಗಳಲ್ಲಿ ಸೀತಾಫ‌ಲ ಹಣ್ಣುಗಳ ಜೋಡಿಸಿಟ್ಟಿದ್ದ ದೃಶ್ಯಗಳು ಕಂಡು ಬಂದ್ದಿದವು. ಆದರೆ, ಈ ವರ್ಷ ಜಿಲ್ಲೆಯಲ್ಲಿ ವಾಡಿಕೆ ಮಳೆ ಆಗದೇ ಬರಗಾಲ ಆವರಿಸಿದ್ದು, ರೈತರು ಸಾಲ ಮಾಡಿ ನೆಟ್ಟಿರುವ ಕೃಷಿ ಬೆಳೆಗಳು ತೇವಾಂಶ ಇಲ್ಲದ ಒಣಗುತ್ತಿದ್ದು, ಇದೀಗ ಇವುಗಳ ಸಾಲಿಗೆ ಜಿಲ್ಲೆಯ ಕಾಡುಗಳಲ್ಲಿ ಸಿಗುವ ಸೀತಾಫ‌ಲ ಹಣ್ಣುಗಳಿಗೂ ಬರ ಆವರಿಸಿದೆ.

ಗ್ರಾಮೀಣರಲ್ಲಿ ಬೇಸರ: ಮುಂಗಾರು ಹಂಗಾಮಿ ನಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುತ್ತಿದ್ದ ರೈತರಿಂದ ಅದರಲ್ಲೂ ಗ್ರಾಮೀಣ ಭಾಗದದಲ್ಲಿ ಕುರಿ, ಮೇಕೆ, ದನ ಕಾಯುವ ಹುಡುಗರಿಗೆ ಹಾಗೂ ಹೊಲ, ಗದ್ದೆಗಳಲ್ಲಿ ಕೆಲಸ ಮಾಡುವ ರೈತರಿಗೆ ಕೃಷಿ ಕೂಲಿ ಕಾರ್ಮಿಕರಿಗೆ ಸೀತಾಫ‌ಲ ಹಣ್ಣುಗಳು ಕಾಶ್ಮೀರ ಸೇಬುನಷ್ಟೆ ರುಚಿ ನೀಡುವ ಮೂಲಕ ಮಳೆಗಾದಲ್ಲಿ ಸೀತಾಫ‌ಲ ಹಣ್ಣುಗಳು ಗ್ರಾಮೀಣ ಜನರಿಗೆ ಖಾಯಂ ಅತಿಥಿಯಾಗಿದ್ದವು. ಆದರೆ, ಈ ಬಾರಿ ಮಳೆ ಕೈ ಕೊಟ್ಟಿರುವ ಪರಿಣಾಮ ಜಿಲ್ಲಾದ್ಯಂತ ಆವರಿಸಿರುವ ಬರದ ಛಾಯೆಗೆ ಈ ಅಪರೂಪದ ಸೀತಾಫ‌ಲ ಹಣ್ಣುಗಳು ಕಣ್ಮರೆಯಾಗಿ ಗ್ರಾಮೀಣ ಜನರಲ್ಲಿ ಬೇಸರ ಮೂಡಿಸಿದೆ.

ರೈತರ ಪಾಲಿಗೆ ವಾಣಿಜ್ಯ ಬೆಳೆ ಆಗಲಿಲ್ಲ : ಜಿಲ್ಲೆಯಲ್ಲಿ ಇಂದಿಗೂ ಕೂಡ ಸೀತಾಫ‌ಲ ಗಿಡಗಳನ್ನು ರೈತರು ಒಂದು ವಾಣಿಜ್ಯ ಬೆಳೆಯಾಗಿ ಬೆಳೆಯುವುದಕ್ಕೆ ಸೂಕ್ತ ಮಾರ್ಗದರ್ಶನ, ಪ್ರೋತ್ಸಾಹ ರೈತರಿಗೆ ಸಿಗದಿರುವುದು ಎದ್ದು ಕಾಣುತ್ತಿದೆ. ಮಳೆಗಾಲದಲ್ಲಿ ಅಷ್ಟೇ ಸೀತಾಫ‌ಲ ಹಣ್ಣಿನ ರುಚಿಯನ್ನು ಸವಿಯಬೇಕಿದೆ. ಆದರೆ, ಈ ಬಾರಿ ಮಳೆ ಕೊರತೆಯಿಂದ ಸೀತಾಫ‌ಲ ಹಣ್ಣುಗಳು ಕಾಣುವುದೇ ಅಪರೂಪವಾಗಿದೆ.

ಸ್ವಾವಲಂಬಿ ಬದುಕಿಗೆ ಕೈ ಹಿಡಿಯುತ್ತಿದ್ದ ಸೀತಾಫ‌ಲ!: ಜಿಲ್ಲಾದ್ಯಂತ ಮಳೆಗಾಲದಲ್ಲಿ ಎಲ್ಲಿ ನೋಡಿದರೂ ಸೀತಾಫ‌ಲ ಹಣ್ಣುಗಳ ಘಮಲು ಕಂಡು ಬರುತ್ತಿದ್ದವು.. ವಯೋ ವೃದ್ಧರು, ರೈತರು, ಅದರಲ್ಲೂ ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಗ್ರಾಮೀಣ ಭಾಗದ ಬೆಟ್ಟಗುಡ್ಡಗಳಲ್ಲಿ ಸಿಗುತ್ತಿದ್ದ ಸೀತಾಫ‌ಲ ಹಣ್ಣುಗಳನ್ನು ಹುಡಕಿ ಕಿತ್ತು ತಂದು ನಗರದ ಶಾಲಾ, ಕಾಲೇಜು, ಸರ್ಕಾರಿ ಕಚೇರಿ ಸಮೀಪ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ಸ್ವಾವಲಂಬಿ ಬದುಕು ಸಾಗಿಸುತ್ತಿದ್ದರು. ಆದರೆ, ಮಳೆಯ ಅವಕೃಪೆ ಪರಿಣಾಮ ಈ ಬಾರಿ ಸೀತಾಫ‌ಲ ಹಣ್ಣುಗಳ ಫ‌ಸಲು ಕ್ಷೀಣಿಸಿದ್ದು ಅಪರೂಪಕ್ಕೆ ಅಲ್ಲೊಬ್ಬರು ಇಲ್ಲೋಬ್ಬರು ಸೀತಾಫ‌ಲ ಹಣ್ಣುಗಳನ್ನು ಮಾರಾಟ ಮಾಡುವಂತಾಗಿದೆ.

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12

Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!

suicide (2)

Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.