KSRTC: “ಶಕ್ತಿ” ಹೊರೆಗೆ ಸಾರಿಗೆ ನಿಗಮಗಳು “ಅಶಕ್ತ”?

ಖರ್ಚು 450 ಕೋ. ರೂ.; ಸಿಗುತ್ತಿರುವುದು 300 ಕೋ. ರೂ.- ಎಂಡ್‌ ಟು ಎಂಡ್‌ ಪ್ರಯಾಣಕ್ಕೆ ವಿತ್ತ ಇಲಾಖೆ ಆಕ್ಷೇಪ

Team Udayavani, Sep 21, 2023, 9:03 PM IST

ksrtc bus

ಬೆಂಗಳೂರು: ಶಕ್ತಿ ಯೋಜನೆ ಅಡಿ ಸರಕಾರ ನಿಯಮಿತವಾಗಿ ಅನುದಾನ ಬಿಡುಗಡೆ ಮಾಡಿದ ಬಳಿಕವೂ ಪ್ರತಿ ತಿಂಗಳು ಸಾರಿಗೆ ನಿಗಮಗಳಿಗೆ 100ರಿಂದ 150 ಕೋಟಿ ರೂ. ಕೊರತೆ ಆಗುತ್ತಿದೆ.

ಸರಕಾರವು ಉದ್ದೇಶಿತ ಯೋಜನೆಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 2,800 ಕೋ. ರೂ. ಅನುದಾನ ಮೀಸಲಿಟ್ಟಿದೆ. ಇದನ್ನು ಹಣಕಾಸು ಇಲಾಖೆ ಪ್ರತಿ ತಿಂಗಳು 293 ಕೋಟಿ ರೂ.ಯಂತೆ ನಾಲ್ಕೂ ನಿಗಮಗಳಿಗೆ ಬಿಡುಗಡೆ ಮಾಡುತ್ತಿದೆ. ಆದರೆ ಪ್ರತಿ ತಿಂಗಳು ಸರಾಸರಿ 20 ಕೋಟಿ ಪ್ರಯಾಣಿಕರು ಯೋಜನೆ ಅಡಿ ಪ್ರಯಾಣಿಸುತ್ತಿದ್ದು, 450 ಕೋ.ರೂ. ಪ್ರಯಾಣ ವೆಚ್ಚ ಆಗುತ್ತಿದೆ. ಕೊರತೆಯಾಗುತ್ತಿರುವ ಉಳಿದ ಮೊತ್ತ ಹೊಂದಾಣಿಕೆ ಮಾಡುವುದು ಕಷ್ಟವಾಗುತ್ತಿದೆ. ಇದರ ಬಿಡುಗಡೆಗಾಗಿ ನಿಗಮಗಳು ಹಣಕಾಸು ಇಲಾಖೆಗೆ ದುಂಬಾಲು ಬೀಳುತ್ತಿವೆ.

ಬಜೆಟ್‌ನಲ್ಲಿ ನೀಡಿದ ಅನುದಾನದಂತೆ ಮೂರು ತಿಂಗಳಲ್ಲಿ (ಜೂ. 11ರಿಂದ ಆ. 31ರ ವರೆಗೆ) ಸುಮಾರು 750 ಕೋಟಿ ರೂ. ವಿವಿಧ ಹಂತಗಳಲ್ಲಿ ಬಿಡುಗಡೆ ಮಾಡಲಾಗಿದೆ. ಆದರೆ ಈ ಅವಧಿಯಲ್ಲಾದ ಪ್ರಯಾಣ ವೆಚ್ಚ 1,160 ಕೋ. ರೂ. ಆಗಿದೆ. ಅಂದರೆ 350 ಕೋ. ರೂ. ಖೋತಾ ಆಗಿದೆ. ಈ ಹಿನ್ನೆಲೆಯಲ್ಲಿ “ಶಕ್ತಿ’ ಯೋಜನೆಗೆ 2,800 ಕೋ.ರೂ. ಸಾಕಾಗುವುದಿಲ್ಲ. ವಾರ್ಷಿಕ ಕನಿಷ್ಠ 4,500 ಕೋ.ರೂ. ಮೀಸಲಿಟ್ಟು, ಪೂರ್ಣಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಸಿವೆ ಎಂದು ಮೂಲಗಳು ತಿಳಿಸಿವೆ.

ನಿಯಮಗಳ ಪ್ರಕಾರ ಇದು ಕಷ್ಟಸಾಧ್ಯ. ಯಾಕೆಂದರೆ, ಬಜೆಟ್‌ನಲ್ಲಿ ಮೀಸಲಿಟ್ಟ ಅನುದಾನದಲ್ಲೇ ವಿತ್ತ ಇಲಾಖೆ ಹೊಂದಾಣಿಕೆ ಮಾಡಬೇಕಾಗುತ್ತದೆ. ಹೆಚ್ಚುವರಿ ಹಣ ಮೀಸಲಿಡಬೇಕಾದರೆ ಅದಕ್ಕೆ ಸಚಿವ ಸಂಪುಟದ ಅನುಮೋದನೆ ಪಡೆಯಬೇಕಾಗುತ್ತದೆ. ಜತೆಗೆ ಸದನದಲ್ಲೂ ಅಂಗೀಕಾರ ಪಡೆಯಬೇಕಾಗುತ್ತದೆ. ಈ ಮಧ್ಯೆ ರಾಜ್ಯದಲ್ಲಿ ಸರಕಾರಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿರುವ ಬಹುತೇಕ ಮಹಿಳೆಯರ ಪಯಣ ಒಂದೇ ರೀತಿ ಇದ್ದು, (ಒಂದು ಸ್ಥಳದಿಂದ ಆರಂಭವಾಗಿ ಅಂತಿಮ ಸ್ಥಳಕ್ಕೇ ಟಿಕೆಟ್‌ ವಿತರಣೆ ಆಗಿವೆ) ಇದಕ್ಕೆ ಹಣಕಾಸು ಇಲಾಖೆ ಅಪಸ್ವರ ಎತ್ತಿದೆ. ಇದು ಸಾರಿಗೆ ನಿಗಮಗಳನ್ನು ಅಡಕತ್ತರಿಯಲ್ಲಿ ಸಿಲುಕಿಸಿದೆ.

ಎಂಡ್‌ ಟು ಎಂಡ್‌ ಸಮಸ್ಯೆ?
ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಸಹಿತ ನಾಲ್ಕೂ ಸಾರಿಗೆ ನಿಗಮಗಳು ಮಹಿಳಾ ಪ್ರಯಾಣಿಕರಿಗೆ ವಿತರಿಸಿದ ಬಹುತೇಕ ಟಿಕೆಟ್‌ಗಳ ಆರಂಭ ಮತ್ತು ಅಂತಿಮವಾಗಿ ತಲುಪುವ ಸ್ಥಳ ಸಾಮಾನ್ಯವಾಗಿದೆ. (ಉದಾಹರಣೆಗೆ ಬೆಂಗಳೂರಿನಿಂದ ದಾವಣಗೆರೆ, ಬೆಂಗಳೂರಿನಿಂದ ಮಂಗಳೂರು) ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನು ನಿರಾಕರಿಸಿದ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ (ಪ್ರಭಾರ) ವಿ. ಅನುºಕುಮಾರ್‌, ಮುಖ್ಯವಾಗಿ ಶಕ್ತಿ ಯೋಜನೆಗೆ ನಿರೀಕ್ಷೆ ಮೀರಿ ಸ್ಪಂದನೆ ವ್ಯಕ್ತವಾಗಿದೆ. ಅದರಂತೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಸಹಜವಾಗಿ ಪ್ರಯಾಣ ವೆಚ್ಚ ಏರಿಕೆಯಾಗಿದೆ. ಅಷ್ಟಕ್ಕೂ ಇಲಾಖೆ ಕೇಳಿದ ಎಲ್ಲ ಮಾಹಿತಿಗಳನ್ನೂ ನಿಗಮಗಳಿಂದ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ತಿಂಗಳಿಗೆ 293 ಕೋಟಿ ರೂ. ಬಿಡುಗಡೆ
ಶಕ್ತಿ ಯೋಜನೆಗೆ ಪ್ರತಿ ತಿಂಗಳು ನಿಯಮಿತವಾಗಿ 293 ಕೋ. ರೂ. ಬಿಡುಗಡೆ ಆಗುತ್ತಿದೆ. ಆದರೆ ನಾವು ಈ ಅನುದಾನ ಸಾಕಾಗುವುದಿಲ್ಲ. ಇನ್ನಷ್ಟು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ನಿಗಮಗಳಿಗೆ ಹೊರೆ ಆಗುತ್ತದೆ ಎಂದು ಹಣಕಾಸು ಇಲಾಖೆಗೆ ಮನದಟ್ಟು ಮಾಡಿದ್ದೇವೆ. ಹಣಕಾಸಿನ ಸಮಸ್ಯೆ ಇಲ್ಲ. ಅಲ್ಲದೆ ಪ್ರಯಾಣಿಕರು ಎಲ್ಲಿಂದ ಎಲ್ಲಿಗೆ ಪ್ರಯಾಣಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ “ಉದಯವಾಣಿ’ಗೆ ತಿಳಿಸಿದರು.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.