Karnataka: ಕಾವೇರಿ ಕುಲುಮೆಯಲ್ಲಿ ಬೆಂದ ಕಾಂಗ್ರೆಸ್‌ ಸರಕಾರದ ಮುಖ್ಯಮಂತ್ರಿಗಳಿವರು…


Team Udayavani, Sep 21, 2023, 11:01 PM IST

river…

ಎಸ್‌.ಬಂಗಾರಪ್ಪ
1991ರ ಜೂ.25ರಂದು ತಮಿಳುನಾಡಿಗೆ ವಾರ್ಷಿಕ ಇಂತಿಷ್ಟು ನೀರು ಬಿಡಬೇಕೆಂದು ಕಾವೇರಿ ನ್ಯಾಯಾಧಿಕರಣ ಆದೇಶಿಸಿತ್ತು. ಇದನ್ನು ವಿರೋಧಿಸಿ ಅಂದಿನ ಸಿಎಂ ಎಸ್‌. ಬಂಗಾರಪ್ಪ ನೇತೃತ್ವದ ಸರಕಾರ ಅಧ್ಯಾದೇಶ ಮೂಲಕ ಕರ್ನಾಟಕದ ರಕ್ಷಣೆಗೆ ನಿಂತರು. ಕರ್ನಾಟಕ ಮೂಲದವರೇ ಆದ ಅಂದಿನ ತಮಿಳುನಾಡು ಸಿಎಂ ಜಯಲಲಿತಾ ನೇತೃತ್ವದ ಸರಕಾರ ಇದರ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದಾಗ ಕರ್ನಾಟಕಕ್ಕೆ ಹಿನ್ನಡೆ ಆಗಿತ್ತು. ನ್ಯಾಯಾಧಿಕರಣ ಕೊಟ್ಟ ತೀರ್ಪನ್ನು 1991 ಡಿ.11ರಂದು ಕೇಂದ್ರ ಸರಕಾರ ಅಧಿಸೂಚಿಸಿದ್ದರಿಂದ ಹೋರಾಟಗಾರರು ಕೆರಳಿ ಕೆಂಡವಾಗಿದ್ದರು. ಬೆಂಗಳೂರಿನಲ್ಲಂತೂ ಹೋರಾಟದ ಕಿಚ್ಚು ಹೆಚ್ಚಿತ್ತಲ್ಲದೆ, ಕನ್ನಡಿಗರು ಹಾಗೂ ತಮಿಳಿಗರ ನಡುವಿನ ಸಂಘರ್ಷಕ್ಕೆ ಕಾರಣವಾಗಿ ಕರ್ನಾಟಕ ಬಂದ್‌ ಆಗಿತ್ತು.

ಎಸ್‌.ಎಂ. ಕೃಷ್ಣ
2002ರಲ್ಲಿ ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲವೂ ಇತ್ತು. ಕಾವೇರಿ ಸಂಘರ್ಷವೂ ಜೋರಾಗಿತ್ತು. 2002ರ ಆ.27 ರಂದು ನಡೆದಿದ್ದ ಕಾವೇರಿ ನದಿ ಪ್ರಾಧಿಕಾರದ ಸಭೆಯಿಂದ ತಮಿಳುನಾಡಿನ ಅಂದಿನ ಸಿಎಂ ಜಯಲಲಿತಾ ಹೊರನಡೆದಿದ್ದರಿಂದ ಪ್ರಕರಣ ಸುಪ್ರೀಂ ಕೋರ್ಟ್‌ ಮುಂದೆ ಬಂದಿತ್ತು. ನಿತ್ಯ 1.25 ಟಿಎಂಸಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. 9 ಸಾವಿರ ಕ್ಯುಸೆಕ್‌ ನೀರು ತಮಿಳುನಾಡಿಗೆ ಹರಿದಿತ್ತು. ಇದರ ವಿರುದ್ಧವೂ ಹೋರಾಟ ನಡೆದಿತ್ತಲ್ಲದೆ, ಮೈಸೂರು ಜಿಲ್ಲೆ ಬೋಚನಹಳ್ಳಿ ಗ್ರಾ.ಪಂ. ಸದಸ್ಯ ಗುರುಸ್ವಾಮಿ ಅವರು ಕಬಿನಿ ನದಿಗೆ ಹಾರಿ ಪ್ರಾಣತ್ಯಾಗ ಮಾಡಿದ್ದರು. ಹೋರಾಟಗಾರರು ಪಾದಯಾತ್ರೆ ನಡೆಸುವ ವೇಳೆ ಕಲ್ಲು ತೂರಾಟವಾಗಿ ಹಿಂಸೆಯ ರೂಪ ಪಡೆದಿತ್ತು.

ಸಿದ್ದರಾಮಯ್ಯ
ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಸಿಎಂ ಆಗಿದ್ದಾಗಲೂ ಇಂತ ಹುದೇ ಸವಾಲು ಎದುರಾಗಿತ್ತು. 2016ರ ಆಗಸ್ಟ್‌ನಲ್ಲಿ ನೀರಿಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ತಮಿಳು
ನಾಡು ಸಲ್ಲಿಸಿದ್ದ ಅರ್ಜಿ ಪುರಸ್ಕೃತ ಗೊಂಡು ನಿತ್ಯ 15 ಸಾವಿರ ಕ್ಯುಸೆಕ್‌ ನೀರು ಬಿಡಲು ಆದೇಶವಾಗಿತ್ತು. ರಾತೋರಾತ್ರಿ ನೀರು ಹರಿದಿದ್ದರಿಂದ ಹೋರಾಟ ಹಿಂಸೆಗೆ ತಿರುಗಿತ್ತು. ಕೆಆರ್‌ಎಸ್‌ ಬಳಿ ಹಾಕಿದ್ದ ಬ್ಯಾರಿಕೇಡ್‌ಗಳನ್ನು ಜಲಾಶಯ, ನದಿಗೆ ಎಸೆದು ಪ್ರತಿಭಟಿಸಿದ್ದರು. ಕಂಡಕಂಡಲ್ಲಿ ತಮಿಳುನಾಡಿನ ವಾಹನಗಳಿಗೆ ಕಲ್ಲೆಸೆಯಲಾಗಿತ್ತು. ತಮಿಳುನಾಡಿನಲ್ಲೂ ಕರ್ನಾಟಕದ ವಾಹನಗಳಿಗೆ ತೊಂದರೆಯಾಗಿತ್ತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.