Tragic: 13ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

ಆತ್ಮಹತ್ಯೆಗೂ ಮುನ್ನಧರ್ಮಸ್ಥಳ ಪ್ರವಾಸ

Team Udayavani, Sep 23, 2023, 10:19 AM IST

tdy-3

ಬೆಂಗಳೂರು: ಅಪಾರ್ಟ್‌ಮೆಂಟ್‌ವೊಂದರ 13ನೇ ಮಹಡಿಯಿಂದ ಜಿಗಿದು ಪಿಯುಸಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿಜಯಲಕ್ಷ್ಮೀ (17) ಮೃತ ಯುವತಿ. ಜ್ಞಾನಜ್ಯೋತಿನಗರ ನಿವಾಸಿಯಾಗಿರುವ ವಿಜಯಲಕ್ಷ್ಮೀ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಪಿಯುಸಿ ಓದುತ್ತಿದ್ದಳು.

ಸೆ.20ರಂದು ಸಂಜೆ 6.15ರ ಸುಮಾರಿಗೆ ನಾಯಂಡಹಳ್ಳಿ ರಸ್ತೆಯ ಬಿಎಚ್‌ಇಎಲ್‌ ಬಳಿಯ ಅಪಾರ್ಟ್‌ಮೆಂಟ್‌ವೊಂದಕ್ಕೆ ಹೋಗಿದ್ದಾಳೆ. ಗೇಟ್‌ ಬಳಿಯೇ ಸೆಕ್ಯೂರಿಟಿ ಗಾರ್ಡ್‌ ತಡೆದು ವಿಚಾರಿಸಿದ್ದಾರೆ. ಆಗ 13 ಮಹಡಿಗೆ ಹೋಗಬೇಕೆಂದು ಹೇಳಿದ್ದಾಳೆ. ಹೀಗಾಗಿ 13ನೇ ಮಹಡಿಯಲ್ಲಿ ವಾಸವಾಗಿದ್ದವರಿಗೆ ಕರೆ ಮಾಡಿ ವಿಷಯ ತಿಳಿಸಿದ ಸೆಕ್ಯೂರಿಟಿ ಗಾರ್ಡ್‌ಗೆ, ಫ್ಲ್ಯಾಟ್‌ ನಿವಾಸಿಗಳು ಪರಿಚಯಸ್ಥರು ಇರಬಹುದು ಎಂದು ಭಾವಿಸಿ, ಕಳುಹಿಸಿ ಎಂದಿದ್ದಾರೆ.

ಈ ನೆಪದಲ್ಲಿ 13 ಮಹಡಿಗೆ ಹೋಗಿ ಜಿಗಿದಿದ್ದಾಳೆ. ಆದರೆ, ಮೃತದೇಹ ಕಿರಿದಾದ ಖಾಲಿ ಜಾಗದಲ್ಲಿ ಬಿದ್ದಿದ್ದರಿಂದ ಸೆ.21ರ ಬೆಳಗ್ಗೆವರೆಗೂ ಯಾರು ಗಮನಕ್ಕೆ ಬಂದಿಲ್ಲ. ಆ ನಂತರ ಸ್ಥಳೀಯರು ವಾಯುವಿಹಾರ ಮಾಡುವಾಗ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾನಸಿಕ ಖಿನ್ನತೆ ಕಾರಣ?: ಕೌಟುಂಬಿಕ ಕಾರಣಕ್ಕೆ ವಿಜಯಲಕ್ಷ್ಮೀ ತಂದೆ-ತಾಯಿ ದೂರವಾಗಿದ್ದು, ಪ್ರತ್ಯೇಕವಾಗಿ ವಾಸವಾಗಿದ್ದಾರೆ. ತಾಯಿ ಜತೆ ವಿಜಯಲಕ್ಷ್ಮೀ ವಾಸವಾಗಿದ್ದಳು. ಮನೆ ಮತ್ತು ಕಾಲೇಜಿನಲ್ಲಿ ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಸೆ.19ರಂದು ಬೆಳಗ್ಗೆ ಕಾಲೇಜಿಗೆ ಹೋದ ವಿಜಯಲಕ್ಷ್ಮೀ ಮನೆಗೆ ಬಂದಿರಲಿಲ್ಲ. ಹೀಗಾಗಿ ಆಕೆಯ ತಾಯಿ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಹುಡುಕಾಟ ಆರಂಭಿಸಿದ್ದರು. ಆದರೆ, ವಿಜಯಲಕ್ಷ್ಮೀ ಮೊಬೈಲ್‌ ಬಳಸುತ್ತಿರಲಿಲ್ಲ. ಹೀಗಾಗಿ ಆಕೆಯ ಸುಳಿವು ಸಿಕ್ಕಿರಲಿಲ್ಲ. ಮಾನಸಿಕ ಖನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದರು.

ಆತ್ಮಹತ್ಯೆಗೂ ಮುನ್ನಧರ್ಮಸ್ಥಳ ಪ್ರವಾಸ: ಸ್ಥಳಕ್ಕೆ ಬಂದ ಪೊಲೀಸರು ವಿಜಯಲಕ್ಷ್ಮೀ ಬ್ಯಾಗ್‌ನಲ್ಲಿದ್ದ ಗುರುತಿನ ಚೀಟಿ ಪರಿಶೀಲಿಸಿದಾಗ ಆಕೆಯ ಹೆಸರು ಗೊತ್ತಾಗಿದೆ. ಬ್ಯಾಗ್‌ನಲ್ಲಿದ್ದ ಮತ್ತೂಂದು ಬಳಿ ಚೀಟಿಯಲ್ಲಿದ್ದ ಮೊಬೈಲ್‌ ನಂಬರ್‌ಗೆ ಕರೆ ಮಾಡಿದಾಗ ಧರ್ಮಸ್ಥಳದ ಹರೀಶ್‌ ಎಂಬುವರು ಕರೆ ಸ್ವೀಕರಿಸಿದ್ದಾರೆ. ಸೆ.20ರಂದು ಮುಂಜಾನೆ 4 ಗಂಟೆ ಸುಮಾರಿಗೆ ವಿಜಯಲಕ್ಷ್ಮೀ ಒಬ್ಬರೇ ಧರ್ಮಸ್ಥಳದ ಬಸ್‌ ನಿಲ್ದಾಣದಲ್ಲಿ ನಿಂತಿದ್ದರು. ಅದನ್ನು ಗಮನಿಸಿದ ಹರೀಶ್‌ ಎಂಬುವರು ತಮ್ಮ ಸಹೋದರಿಯ ಜತೆ ವಿಚಾರಿಸಿ ಆಕೆಗೆ ಬೆಂಗಳೂರಿನ ಬಸ್‌ ಹತ್ತಿಸಿ ಕಳುಹಿಸಿದ್ದಾರೆ. ಅಲ್ಲದೆ, ಏನಾದರೂ ಸಮಸ್ಯೆಯಾದರೆ ಕರೆ ಮಾಡುವಂತೆ ತಮ್ಮ ಮೊಬೈಲ್‌ ನಂಬರ್‌ ಅನ್ನು ಚೀಟಿಯಲ್ಲಿ ಬರೆದು ಕಳುಹಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.