Karwar Tunnel ; ಸತಾಯಿಸುವುದು ಒಳ್ಳೆಯದಲ್ಲ: ವಿಧಾನ ಪರಿಷತ್ ಸದಸ್ಯ ಉಳ್ವೇಕರ್

ಪುಣೆಯ ಟೆಕ್ನಾಲಜಿಕಲ್ ಯುನಿವರ್ಸಿಟಿ ಯಿಂದ ಫಿಟ್ ನೆಸ್ ವರದಿ ಬಂತು...

Team Udayavani, Sep 23, 2023, 7:36 PM IST

1-aadas

ಕಾರವಾರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸುರಂಗ ಮಾರ್ಗ ಸಂಚಾರ ಮುಕ್ತ ಮಾಡಲು ಇದೇ ವರ್ಷದ 21 ಜುಲೈ ನಲ್ಲೇ ಪತ್ರ ಬರೆದರೂ ಸುರಂಗ ತೆರೆಯದೇ ಸತಾಯಿಸುವುದು ಒಳ್ಳೆಯದಲ್ಲ ಎಂದು ವಿಧಾನ ಪ‌ರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹೇಳಿದರು‌.

ಕಾರವಾರದ ಪತ್ರಿಕಾಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾಡಳಿತ ಇಂಥ ವಿಷಯದಲ್ಲಿ ಜನರ ಹಿತ, ವಾಹನಸವಾರರ ಹಿತ ನೋಡಬೇಕು. ಹಾಲಿ ಶಾಸಕ ಮತ್ತು ಉಸ್ತುವಾರಿ ಸಚಿವರಿಗೆ ಜನರ ಅಭಿಪ್ರಾಯ ಹಾಗೂ ಪುಣೆಯ ಸಿಒಇಪಿ ಟೆಕ್ನಾಲಾಜಿಕಲ್ ಯುನಿವರ್ಸಿಟಿ ತಜ್ಞರು ಕಾರವಾರ ಸುರಂಗ ಮಾರ್ಗ ವಾಹನ ಸಂಚಾರಕ್ಕೆ ಯೋಗ್ಯವಾಗಿದೆ ಎಂದು ಎನ್ ಎಚ್ ಎ ಐ ಗೆ ನೀಡಿರುವ ವರದಿಯನ್ನು ಮನವರಿಕೆ ಮಾಡಬೇಕಿತ್ತು ಎಂದರು‌ .‌ ಪುಣೆ ಟೆಕ್ನಾಲಜಿಕಲ್ ಯುನಿವರ್ಸಿಟಿ ನೀಡಿದ ವರದಿಯನ್ನು ಎನ್ ಎಚ್ ಎಐ ಅಂಗೀಕರಿಸಿ, ಅದನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರಿಗೆ 21 ಜುಲೈ 2023 ರಂದು ಕಳುಹಿಸಿದೆ. ಅಲ್ಲದೆ ಟನಲ್ ವಾಹನ ಸಂಚಾರಕ್ಕೆ ಮುಕ್ತ ಮಾಡಲು ವಿನಂತಿಸಿದೆ. ಸಂಸದರು ಈ ಬಗ್ಗೆ ಜಿಲ್ಲಾಧಿಕಾರಿ ಜೊತೆ ಮಾತಾಡಿದ್ದಾರೆ. ಆದರೂ ಜಿಲ್ಲಾ ಉಸ್ತುವಾರಿ ಹಾಗೂ ಸ್ಥಳೀಯ ಶಾಸಕ ಈ ಸಂಗತಿಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡದ್ದು ಸರಿಯಲ್ಲ ಎಂದರು.

ಕಾರವಾರ ಬಳಿಯ ಲಂಡನ್ ಬ್ರಿಜ್ ಬಳಿಯ ಸುರಂಗ ಮಾರ್ಗ ಮುಚ್ಚುವುದರಿಂದ ಜನರಿಗೆ ಕಷ್ಟವಾಗಿದೆ. ‌ಸುರಂಗದ ಮಾರ್ಗದಲ್ಲಿದ್ದ ಬಾಕಿ ಕಾಮಗಾರಿ ಮುಗಿದಿವೆ. ಆದರೂ ಸುರಂಗ ಮಾರ್ಗ ಮುಚ್ಚಿ ನಾಲ್ಕು ಕಿಮೀ ಘಟ್ಟದಲ್ಲಿ ವಾಹನ ಸವಾರರು ಸುತ್ತುವಂತೆ ಮಾಡಿರುವುದು ಸರಿಯಲ್ಲ. ಇದರಿಂದ ನಾಲ್ಕು ಅಪಘಾತ ಗಳಾಗಿವೆ. ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದಾನೆ. ಆ ಯುವಕನ ಕುಟುಂಬಕ್ಕೆ ಪರಿಹಾರ ನೀಡುವರಾರು ಎಂದು ಉಳ್ವೇಕರ್ ಪ್ರಶ್ನಿಸಿದರು‌ .

ಸೆ.29 ರೊಳಗೆ ಟನಲ್ ( ಸುರಂಗ) ಮಾರ್ಗ ವಾಹನ ಸವಾರರಿಗೆ ಮುಕ್ತವಾಗಬೇಕು. ಇಲ್ಲದಿದ್ದರೆ ಸೆ. 29 ರಂದು ಪಕ್ಷಾತೀತವಾಗಿ ಹೋರಾಟ ಮಾಡಲಾಗುವುದು ಎಂದರು. ಜನರ ರೊಚ್ಚಿನ ಎದುರು ಕಾನೂನು ನಿಲ್ಲುವುದಿಲ್ಲ. ಮೇಲಾಗಿ ಬಿಣಗಾ ಸಾರ್ವಜನಿಕರು ಟನಲ್ ಓಪನ್ ಮಾಡಲು ಶಾಸಕ ಸೈಲ್ ಅವರಿಗೆ ವಿನಂತಿಸಿದಾಗ, ನೀವು ಟನಲ್ ಓಪನ್ ಮಾಡಿ, ನಾನು ಬಂದ್ ಮಾಡಿಸುವೆ ಎಂದಿದ್ದಾರೆ. ಇದು ಅವರ ವಯಕ್ತಿಕ ಪ್ರತಿಷ್ಠೆಗಾಗಿ ಟನಲ್ ಬಂದ್ ಮಾಡಿದ್ದು ಎಂಬುದು ಸ್ಪಷ್ಟ. ಹಾಗಾಗಿ ಈ ಹೋರಾಟವನ್ನು ನಾವು ಜನರ ಹಿತಕ್ಕಾಗಿ ಕೈಗೆತ್ತಿಕೊಂಡಿದ್ದೇವೆ. ರಾಷ್ಟ್ರೀಯ ಹೆದ್ದಾರಿ ಟನಲನ್ನು ಜನರಿಗೆ, ವಾಹನಸವಬರೆದರೂ ಮುಕ್ತ ಮಾಡುವೆವು ಎಂದು ವಿಧಾನ ಪರಿಷತ್ ಸದಸ್ಯ ಉಳ್ವೇಕರ್ ಹೇಳಿದರು. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿಯದೆ ಜನರ ಹಿತಕ್ಕೆ ಕೆಲಸ ಮಾಡಬೇಕೆಂದು ನಗರಸಭೆಯ ಮಾಜಿ‌ ಅಧ್ಯಕ್ಷ ನಿತಿನ್ ಪಿಕಳೆ ಹೇಳಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.