Parliament ‘ಅಸ್ಪೃಶ್ಯ’ ಎಂಬ ಕಾರಣಕ್ಕೆ ಕೋವಿಂದ್ ಅವರಿಗೆ ಆಹ್ವಾನ ನೀಡಿರಲಿಲ್ಲ: ಖರ್ಗೆ
ಅದನ್ನು ಗಂಗಾಜಲದಿಂದ ತೊಳೆಯಬೇಕಾಗಿತ್ತು...
Team Udayavani, Sep 23, 2023, 8:33 PM IST
ಹೊಸದಿಲ್ಲಿ: ನೂತನ ಸಂಸತ್ ಭವನದ ಶಂಕುಸ್ಥಾಪನೆಗೆ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು “ಅಸ್ಪೃಶ್ಯ” ಎಂಬ ಕಾರಣಕ್ಕೆ ಆಹ್ವಾನಿಸಲಾಗಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ.
ಜೈಪುರದಲ್ಲಿ ಕಾಂಗ್ರೆಸ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, “ಅಸ್ಪೃಶ್ಯರು ಅಡಿಪಾಯ ಹಾಕಿದರೆ, ಸ್ವಾಭಾವಿಕವಾಗಿ ಅದನ್ನು ಗಂಗಾಜಲದಿಂದ ತೊಳೆಯಬೇಕಾಗಿತ್ತು” ಎಂದು ಅವರು ಮಾಜಿ ರಾಷ್ಟ್ರಪತಿಗಳ ಜಾತಿಯನ್ನು ಉಲ್ಲೇಖಿಸಿ ಹೇಳಿದರು.
ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗಿಲ್ಲ ಮತ್ತು ನಟರು ಸೇರಿದಂತೆ ಅನೇಕರನ್ನು ಆಹ್ವಾನಿಸಲಾಗಿತ್ತು. ಇದು ರಾಷ್ಟ್ರಪತಿಗೆ ಮಾಡಿದ ಅವಮಾನವಾಗಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ತರುವುದರ ಹಿಂದೆ ನರೇಂದ್ರ ಮೋದಿ ಸರ್ಕಾರದ ಉದ್ದೇಶವನ್ನು ಪ್ರಶ್ನಿಸಿ, ಮಹಿಳೆಯರಿಗೆ ಮೀಸಲಾತಿ ನೀಡಲು ಬಿಜೆಪಿ ಬಯಸುವುದಿಲ್ಲ ಎಂದರು.
ಹಲವಾರು ವಿರೋಧ ಪಕ್ಷಗಳು ಇಂಡಿಯಾ ಮೈತ್ರಿಕೂಟ ರಚಿಸಿರುವುದರಿಂದ ಬಿಜೆಪಿಯು ಚುನಾವಣೆಗೆ ಮುಂಚೆಯೇ ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ಯೋಚಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.