Karkala ಪರಶುರಾಂ ಥೀಂ ಪಾರ್ಕ್‌ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭೇಟಿ

ಮೊದಲು ರಕ್ಷಣೆ; ಮತ್ತೆ ತನಿಖೆ ಚಿಂತನೆ

Team Udayavani, Sep 23, 2023, 10:47 PM IST

Karkala ಪರಶುರಾಂ ಥೀಂ ಪಾರ್ಕ್‌ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭೇಟಿ

ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ಗೆ ಭೇಟಿ ನೀಡಿ, ಪರಿಶೀಲಿಸಿ ಅಧಿಕಾರಿಗಳ ಸಭೆ ನಡೆಸಿ ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದೇನೆ. ಅಲ್ಲಿ ಮೊದಲು ಜನರ ಸುರಕ್ಷೆ ದೃಷ್ಟಿಯಿಂದ ಕೆಲಸ ನಡೆಯಬೇಕಾಗಿದೆ. ಮೂರ್ತಿ ನಕಲಿಯೋ ಅಸಲಿಯೋ ಎಂದು ಈಗಲೇ ಹೇಳಲಾಗದು; ತನಿಖೆಯ ಬಗ್ಗೆ ಅನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಖಾತೆ ಸಚಿವೆ, ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಕಾರ್ಕಳದ ಬೈಲೂರು ಪರಶುರಾಮ ಥೀಂ ಪಾರ್ಕ್‌ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.

ಸಮಯಾವಕಾಶ ಕಡಿಮೆಯಿದ್ದ ಕಾರಣ ಅಧಿಕಾರಿಗಳ ಮೇಲೆ ಒತ್ತಡವಿತ್ತು. ಮೂರ್ತಿಯನ್ನು ತರಾತುರಿಯಲ್ಲಿ ನಿರ್ಮಿಸಲಾಗಿದೆ ಮತ್ತು ಕೆಲವೊಂದು ಬಿಡಿ ಭಾಗಗಳನ್ನು ತಾತ್ಕಾಲಿಕ ನೆಲೆಯಲ್ಲಿ ತಯಾರಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ಶಾಸಕರ ಗಮನಕ್ಕೂ ತರಲಾಗಿತ್ತು ಎನ್ನುವ ವಿಚಾರವನ್ನು ತಿಳಿದುಕೊಂಡಿದ್ದೇನೆ. ಪ್ರತಿಮೆ ಬಗೆಗಿನ ಪೂರ್ಣ ವರದಿಯನ್ನು ತರಿಸಿಕೊಳ್ಳುವೆ. ಮೂರ್ತಿ ಮಾಡಿದವರಿಗೂ ನೋಟಿಸ್‌ ಜಾರಿ ಮಾಡುತ್ತೇವೆ ಎಂದರು.

ರಾಜಕೀಯ ಇಲ್ಲ
ಇದು ರಾಜಕೀಯದ ವಿಷಯವಲ್ಲ, ಈಗ ಏನಾಗಬೇಕು ಎನ್ನುವುದು ಮುಖ್ಯ. ಥೀಂ ಪಾರ್ಕ್‌ ಪ್ರೇಕ್ಷಣೀಯ ಸ್ಥಳವಾದ್ದರಿಂದ ಮಕ್ಕಳು, ಹಿರಿಯರು ಎಲ್ಲರೂ ಬರುತ್ತಾರೆ. ಆಗ ಏನಾದರು ಅವಘಡ ಸಂಭವಿಸಿದರೇ ಯಾರು ಹೊಣೆ? ಮೂರ್ತಿ ಎತ್ತರದ ಸ್ಥಳದಲ್ಲಿ ಇರುವ ಕಾರಣ ಎಷ್ಟು ಸುರಕ್ಷಿತ ಅನ್ನುವ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದರು.

ಚುನಾವಣೆ ಸಂದರ್ಭ ಅವಸರವಾಗಿ ಅಪೂರ್ಣ ಸ್ಥಿತಿಯಲ್ಲಿ ಉದ್ಘಾಟಿಸಿ ರಾಜಕೀಯವಾಗಿ ಗೆಲುವು ಪಡೆದು ಕೊಂಡಿದ್ದಾರೆ. ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ. ರಾಜಕಾರಣ ಕ್ಕಿಂತ ಪ್ರೇಕ್ಷಣೀಯ ಸ್ಥಳದ ರಕ್ಷಣೆಯೇ ನನ್ನ ಭೇಟಿಯ ಮುಖ್ಯ ಉದ್ದೇಶ ಎಂದರು.

ಅಪರ ಜಿಲ್ಲಾಧಿಕಾರಿ ಡಾ| ಮಮತಾದೇವಿ, ಕುಂದಾಪುರ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಎಸ್‌.ಆರ್‌., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ನಿರ್ಮಿತಿ ಕೇಂದ್ರದ ಅಧಿಕಾರಿ ಸಚಿನ್‌ ಅವರಿಂದ ಸಚಿವೆ ಮಾಹಿತಿ ಪಡೆದುಕೊಂಡರು.

ಉದಯ ಶೆಟ್ಟಿ ಮುನಿಯಾಲು, ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ದೀಪಕ್‌ ಕೋಟ್ಯಾನ್‌ ಮೊದಲಾದವರಿದ್ದರು.

ಚಪ್ಪಲಿ ಧರಿಸಿ ಅಧಿಕಾರಿ ಪ್ರವೇಶ: ಸಚಿವೆ ಗರಂ
ಪರಶುರಾಮ ಮೂರ್ತಿಯ ತಳಭಾಗದಲ್ಲಿ ಸಚಿವರು ಮೂರ್ತಿ ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದ ವೇಳೆ ಅಧಿಕಾರಿಗಳು ಚಪ್ಪಲಿ ಧರಿಸಿ ಬಂದಿದ್ದಾರೆ ಎನ್ನುವ ವಿಚಾರವನ್ನು ಅಲ್ಲಿದ್ದವರು ಯಾರೋ ಪ್ರಸ್ತಾವಿಸಿದರು. ಅಧಿಕಾರಿಗಳ ಕಾಲಿನಲ್ಲಿ ಚಪ್ಪಲಿ ಇರುವುದನ್ನು ಕಂಡ ಸಚಿವೆ ಅಸಮಧಾನಗೊಂಡು ಗರಂ ಆದರು. ಅಧಿಕಾರಿಗಳ ಸಹಿತ ಇತರ ಅನೇಕ ಮಂದಿ ಚಪ್ಪಲಿ ಧರಿಸಿದ್ದರು.

 

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.