Udupi ಒತ್ತಡರಹಿತ ಶಿಕ್ಷಣ: ಡಾ| ಸುದರ್ಶನ್‌ ಬಲ್ಲಾಳ್‌ ಕರೆ

ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ ಸಂಭ್ರಮಕ್ಕೆ ಚಾಲನೆ

Team Udayavani, Sep 24, 2023, 12:06 AM IST

Udupi ಒತ್ತಡರಹಿತ ಶಿಕ್ಷಣ: ಡಾ| ಸುದರ್ಶನ್‌ ಬಲ್ಲಾಳ್‌ ಕರೆ

ಉಡುಪಿ: ಒತ್ತಡದಿಂದಲೇ ಶಿಕ್ಷಣವನ್ನು ಪಡೆಯಬೇಕಾದ ಸ್ಥಿತಿ ಇದೆ. ಇದರಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಒತ್ತಡರಹಿತ ಶಿಕ್ಷಣ ಕ್ರಮ ರೂಪಿಸಲು ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ತಜ್ಞರು ಗಂಭೀರ ಚಿಂತನೆ ನಡೆಸಬೇಕು ಎಂದು ಎಂಜಿಎಂ ಕಾಲೇಜಿನ ಹಳೆಯ ವಿದ್ಯಾರ್ಥಿಯೂ ಆಗಿರುವ ಬೆಂಗಳೂರಿನ ಮಣಿಪಾಲ್‌ ಹೆಲ್ತ್‌ ಎಂಟರ್‌ಪ್ರೈಸಸ್‌ ಪ್ರೈ.ಲಿ. ಅಧ್ಯಕ್ಷ ಡಾ| ಎಚ್‌. ಸುದರ್ಶನ್‌ ಬಲ್ಲಾಳ್‌ ಆಶಯ ವ್ಯಕ್ತಪಡಿಸಿದ್ದಾರೆ.

ಶನಿವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆದ ಕಾಲೇಜಿನ ಅಮೃತ ಮಹೋತ್ಸವದ ಉದ್ಘಾಟನ ಸಮಾರಂ ಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಎಂಜಿಎಂ ಕಾಲೇಜು ಟ್ರಸ್ಟ್‌ ಅಧ್ಯಕ್ಷ ಟಿ. ಸತೀಶ್‌ ಯು. ಪೈ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಣ ವ್ಯವಸ್ಥೆಯಲ್ಲಿ ಉಂಟಾಗಿರುವ ಧಾವಂತದಿಂದ ವಿಪರೀತ ಸ್ಪರ್ಧೆಗಳು ಏರ್ಪಡುತ್ತಿವೆ. ಮಗು ಜನಿಸುವ ಮೊದಲೇ ಶಾಲೆಗೆ ಸೇರಿಸಲು ಬೇಕಾದ ತಯಾರಿ ಮಾಡಿಕೊಳ್ಳಬೇಕಾಗಿದೆ. ಪುಟ್ಟ ಮಕ್ಕಳಿಗೂ ಸಂದರ್ಶನವಿರುತ್ತದೆ. ಉನ್ನತ ಶಿಕ್ಷಣದಲ್ಲಿಯೂ ಈ ಸ್ಪರ್ಧೆಗಳು ಮುಂದುವರಿಯುತ್ತಲೇ ಒತ್ತಡದ ವಾತಾವರಣದೊಂದಿಗೇ ಬದುಕನ್ನು ನಡೆಸಬೇಕಾಗಿದೆ. ಯುವ ಪೀಳಿಗೆಯ ಆತ್ಮಹತ್ಯೆಗಳು ದೇಶದ ಅಭಿವೃದ್ಧಿಗೆ ತಡೆಯುಂಟು ಮಾಡುತ್ತವೆ. ಶಿಕ್ಷಣ ವು ಒತ್ತಡರಹಿತವಾಗಿರಬೇಕು, ಸಮಾಜ ಮುಖೀಯಾಗಿರಬೇಕು ಮತ್ತು ಮಾನವಿ àಯ ಮುಖೀಯಾಗಿರಬೇಕು ಎಂದು ಡಾ| ಬಲ್ಲಾಳ್‌ ಕರೆ ನೀಡಿದರು.

ಶಿಕ್ಷಣವು ದೊಡ್ಡ ದೊಡ್ಡ ಕಟ್ಟಡಗಳಲ್ಲಿ ಇಲ್ಲ. ಯುವ ಪೀಳಿಗೆಯ ಮನಸ್ಸುಗಳನ್ನು ಬಲಗೊಳಿಸುವುದು, ಸ್ವಾವಲಂಬಿಯಾಗಿಸುವುದರಲ್ಲಿಯೇ ಶಿಕ್ಷಣ ಕ್ಷೇತ್ರದ ಸಾಧನೆ ಇದೆ. ನನ್ನ ಜೀವನದ ಭವಿಷ್ಯವನ್ನೂ ಇದೇ ಕಾಲೇಜಿನ ಪ್ರಾಧ್ಯಾಪಕರು ರೂಪಿಸಿದ್ದಾರೆ. ಸಿಬಂದಿಯ ಕಠಿನ ಪರಿಶ್ರಮವೇ ಸಂಸ್ಥೆಯ ಬೆನ್ನೆಲುಬು. ಕಾಲೇಜಿನ ಆತ್ಮವೇ ವಿದ್ಯಾರ್ಥಿವೃಂದ. ಅವರು ಬದುಕಿನ ಸವಾಲನ್ನು ಎದುರಿಸುವ ಬಗೆಗೆ ಉಪನ್ಯಾಸಕರು ಬೋಧಿಸಬೇಕಾಗಿದೆ ಎಂದು ಡಾ| ಬಲ್ಲಾಳ್‌ ಹೇಳಿದರು.

ಕಾಲೇಜಿಗೆ ಬೇಕಾದ ಎಲ್ಲ ಸಹಕಾರವನ್ನು ಮಾಹೆ ವಿ.ವಿ.ಯಿಂದ ನೀಡಲಾಗುವುದು ಎಂದು ಮಾಹೆ ಕುಲಪತಿ ಲೆ|ಜ| ಡಾ| ಎಂ.ಡಿ. ವೆಂಕಟೇಶ್‌ ತಿಳಿಸಿದರು. ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ ಅಧ್ಯಕ್ಷ ಡಾ| ಎಚ್‌.ಎಸ್‌. ಬಲ್ಲಾಳ್‌, ಕಾರ್ಯ ದರ್ಶಿ ಬಿ.ಪಿ. ವರದರಾಯ ಪೈ ಶುಭ ಕೋರಿದರು.

ಲಾಂಛನ ಅನಾವರಣ
ಉಪನ್ಯಾಸಕ ಮನೋಷ್‌ ವಿನ್ಯಾಸ ಗೊಳಿಸಿದ ಲಾಂಛನವನ್ನು ಅನಾವರಣ ಗೊಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಲಕ್ಷ್ಮೀನಾರಾಯಣ ಕಾರಂತ ಸ್ವಾಗತಿಸಿ, ಮಾಲತಿ ದೇವಿ ವಂದಿಸಿದರು. ಐಕ್ಯೂಎಸಿ ಸಂಚಾಲಕ ಪ್ರೊ| ಅರುಣ್‌ ಕುಮಾರ್‌ ಅತಿಥಿಗಳನ್ನು ಪರಿಚಯಿಸಿ ದರು. ಉಪನ್ಯಾಸಕ ಸುಚಿತ್‌ ಕೋಟ್ಯಾನ್‌ ಕಾರ್ಯಕ್ರಮ ನಿರ್ವಹಿಸಿದರು. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ್‌ ನಾಯ್ಕ ಉಪಸ್ಥಿತರಿದ್ದರು.

ಮನೆ ಅಡವಿಟ್ಟು ಶುಲ್ಕ ಪಾವತಿ!
ಮದ್ರಾಸ್‌ ವಿ.ವಿ.ಯಲ್ಲಿ ಕಾಲೇಜು ಸಂಯೋಜನೆ ಶುಲ್ಕ 3 ಲ.ರೂ. ಪಾವತಿಸಲು ಡಾ| ಟಿ.ಎಂ.ಎ. ಪೈಯವರು ಮನೆಯನ್ನು ಅಡವಿಟ್ಟರು. 1949ರಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮದ್ರಾಸ್‌ ಸರಕಾರದಿಂದಲೇ ಆಕ್ಷೇಪಣೆ ಬಂದಿತ್ತು. ಇದನ್ನು ಎದುರಿಸಲು ವಿದ್ಯಾರ್ಥಿನಿಯೊಬ್ಬಳು ಮದ್ರಾಸ್‌ ಉಚ್ಚ ನ್ಯಾಯಾಲಯಕ್ಕೆ ಹೋಗ
ಬೇಕಾಯಿತು. ಈಗ ನಾವು ಶೇ. 33 ಮಹಿಳಾ ಮೀಸಲಾತಿ ಮಸೂದೆಯ ಕಾಲದಲ್ಲಿದ್ದೇವೆ ಎಂದು ಡಾ| ಪೈ ಅವರ ಪುತ್ರ, ಎಂಜಿಎಂ ಕಾಲೇಜು ಟ್ರಸ್ಟ್‌ನ ಟ್ರಸ್ಟಿ ಟಿ. ಅಶೋಕ್‌ ಪೈ ಅವರು ಬೆಟ್ಟು ಮಾಡಿದರು.

ಆಗ ವಿರೋಧ-ಕ್ರಮೇಣ ಅರ್ಥ
ಸಂಪಾದನೆಯಲ್ಲಿ ಉಳಿತಾಯ ಮಾಡಲು ಡಾ| ಟಿಎಂಎ ಪೈಯವರು ಪ್ರಚೋದಿಸಿದ್ದರು. ಆರೋಗ್ಯಕ್ಕಾಗಿ ಯೋಜನೆಯನ್ನು ಜಾರಿಗೊಳಿಸಿದರು. ಆಗ ನಾವೆಲ್ಲ ಇದಕ್ಕೆ ವಿರೋಧಿಸಿದ್ದೆವು. “ಹಾಗಲ್ಲ ಮಾಸ್ಟ್ರೆ’ ಎಂದು ಡಾ| ಪೈಯವರು ಹಿತವಚನ ಹೇಳಿದ್ದರು. ಆದರೆ ವಯಸ್ಸಾದ ಬಳಿಕ ಈಗ ಅದರ ಮೌಲ್ಯ ಅರ್ಥವಾಗುತ್ತಿದೆ ಎಂದು ವಿಶ್ರಾಂತ ಪ್ರಾಂಶುಪಾಲರಲ್ಲಿ ಹಿರಿಯರಾದ ಪ್ರೊ| ಶ್ರೀಶ ಆಚಾರ್ಯ ಹೇಳಿದರು.

ಟಾಪ್ ನ್ಯೂಸ್

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.