IMEC ಗೆ ಟರ್ಕಿಯಿಂದ ಪ್ರತ್ಯಸ್ತ್ರ


Team Udayavani, Sep 24, 2023, 12:17 AM IST

IMEC MAP

ಹೊಸದಿಲ್ಲಿಯಲ್ಲಿ ನಡೆದ ಜಿ20 ಶೃಂಗಸಭೆಯ ವೇಳೆ ಚೀನದ ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆಗೆ ಪ್ರತಿಯಾಗಿ ಭಾರತ- ಮಧ್ಯಪ್ರಾಚ್ಯ- ಯುರೋಪ್‌ ಕಾರಿಡಾರ್‌(ಐಎಂಇಸಿ) ನಿರ್ಮಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಭಾರತ, ಯುಎಇ, ಸೌದಿ ಅರೇಬಿಯಾ, ಅಮೆರಿಕ, ಜಪಾನ್‌, ಐರೋಪ್ಯ ಒಕ್ಕೂಟ, ಫ್ರಾನ್ಸ್‌, ಇಟಲಿ, ದೇಶಗಳು ಸೇರಿ ಹೊಸದಾಗಿ ಭಾರ ತ-ಮಧ್ಯ ಪ್ರಾಚ್ಯ-ಐರೋಪ್ಯ ರಾಷ್ಟ್ರಗಳೊಂದಿಗೆ ಸಂಪರ್ಕ ಕೊಂಡಿ ಯಾಗಿ ಈ ಆರ್ಥಿಕ ಕಾರಿಡಾರ್‌ ರಚಿ ಸುವ ತೀರ್ಮಾನಕ್ಕೆ ಬರಲಾಗಿದೆ. ಆದರೆ ಈ ಬಗ್ಗೆ ಟರ್ಕಿ ಅಸಮಾಧಾನಗೊಂಡಿದೆ. ಸದ್ಯ ಟರ್ಕಿಯು ತನ್ನ ಮಿತ್ರರಾಷ್ಟ್ರಗಳನ್ನು ಒಗ್ಗೂಡಿಸಿಕೊಂಡು ಪರ್ಯಾಯವಾಗಿ ಹೊಸ ಕಾರಿಡಾರ್‌ ರಚನೆಯ ಕಾರ್ಯದಲ್ಲಿ ತೊಡಗಿ ಕೊಂಡಿದೆ. ಟರ್ಕಿಯ ಅಸಮಾಧಾನಕ್ಕೆ ಕಾರಣವೇನು?, ಟರ್ಕಿಯ ಯೋಜನೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಟರ್ಕಿ ಅಸಮಾಧಾನಕ್ಕೆ ಕಾರಣ?
ಜಿ20 ಶೃಂಗಸಭೆಯ ವೇಳೆ ಕೈಗೊಂಡ ನಿರ್ಣಯದಲ್ಲಿ ಹೊಸ ಆರ್ಥಿಕ ಕಾರಿಡಾರ್‌ನಲ್ಲಿ ಚೀನದ ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆಗೆ ಬೆಂಬಲವಾಗಿದ್ದ ಟರ್ಕಿಯನ್ನು ಹೊರಗಿಡಲಾಗಿತ್ತು. ಈ ಬಗ್ಗೆ ಶೃಂಗಸಭೆಯ ಬಳಿಕ ಪ್ರತಿಕ್ರಿಯೆ ನೀಡಿದ್ದ ಟರ್ಕಿಯ ಅಧ್ಯಕ್ಷ ರಿಸೆಪ್‌ ತಯಿಪ್‌ ಎಡ್ರೊಗೆನ್‌ ಅವರು, ಟರ್ಕಿಯನ್ನು ಹೊರತುಪಡಿಸಿ ಯಾವುದೇ ಕಾರಿಡಾರ್‌ ರಚಿಸಲು ಸಾಧ್ಯವಿಲ್ಲ. ಪೂರ್ವದಿಂದ ಪಶ್ಚಿಮಕ್ಕೆ ವ್ಯಾಪಾರಕ್ಕೆ ತೆರಳಲು ಸೂಕ್ತವಾದ ಮಾರ್ಗವೆಂದರೆ ಟರ್ಕಿ ಮೂಲಕ ತೆರಳುವುದು ಎಂದಿದ್ದರು. ಹಿಂದಿನಿಂದಲೂ ಪೂರ್ವ ಮತ್ತು ಪಶ್ವಿ‌ಮ ರಾಷ್ಟ್ರಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಟರ್ಕಿಗೆ ಹೊಸ ಕಾರಿಡಾರ್‌ ರಚನೆಯ ನಿರ್ಧಾರ ಆಘಾತ ನೀಡಿತ್ತು.

ಟರ್ಕಿಯಿಂದ ಹೊಸ ಯೋಜನೆ
ಭಾರತ- ಮಧ್ಯಪ್ರಾಚ್ಯ- ಯುರೋಪ್‌ ಕಾರಿಡಾರ್‌ಗೆ ಪರ್ಯಾಯವಾಗಿ ಸುಮಾರು 17 ಬಿಲಿಯನ್‌ ಡಾಲರ್‌ ಮೊತ್ತದ ಹೊಸ ಮಾರ್ಗದ ಬಗ್ಗೆ ಇರಾಕ್‌ ಡೆವಲಪ್‌ಮೆಂಟ್‌ ರೋಡ್‌ ಇನಿಶಿಯೇಟಿವ್‌ ಯೋಜನೆ ರೂಪಿಸಿದೆ. ಕತಾರ್‌, ಯುಎಇ ಮತ್ತು ಇರಾಕ್‌ ರಾಷ್ಟ್ರಗಳ ಮಧ್ಯೆ ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ಟರ್ಕಿಯ ವಿದೇಶಾಂಗ ಸಚಿವ ಹ್ಯಾಕನ್‌ ಪೈಢನ್‌ ಹೇಳಿದ್ದಾರೆ.

ದಕ್ಷಿಣ ಇರಾಕ್‌ನ ಗ್ರ್ಯಾಂಡ್‌ ಫಾ ಬಂದರಿನಿಂದ ಹೊರಟು ಇರಾಕ್‌ನ 10 ಪ್ರಾಂತಗಳನ್ನು ದಾಟಿ ಟರ್ಕಿಯನ್ನು ತಲುಪುವ ಬಗ್ಗೆ ಬಾಗ್ಧಾದ್‌ ಸರಕಾರ ಬಿಡುಗಡೆ ಮಾಡಿದ ನೀಲನಕ್ಷೆಯಲ್ಲಿ ತಿಳಿಸಿದೆ. ಮೂರು ಹಂತದಲ್ಲಿ ಈ ಯೋಜನೆ ನಿರ್ಮಾಣವಾಗಲಿದ್ದು, 2028ರಲ್ಲಿ ಮೊದಲ ಹಂತ ಪೂರ್ಣಗೊಂಡರೆ, ಕೊನೆಯ ಹಂತ 2050ರಲ್ಲಿ ಮುಗಿಯಲಿದೆ. ಭಾರತ- ಮಧ್ಯಪ್ರಾಚ್ಯ- ಯುರೋಪ್‌ ಕಾರಿಡಾರ್‌ ಪೂರ್ಣಗೊಳ್ಳಲೂ ಹಲವು ದಶಕಗಳು ಬೇಕಾಗಿವೆ ಎಂದು ವಿಶ್ಲೇಷಕರು ಹೇಳಿದ್ದಾರೆ.

ಕತಾರ್‌, ಯುಎಇಯಿಂದ ಬೆಂಬಲ ನಿರೀಕ್ಷೆ
ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಲು ಟರ್ಕಿಯು ಆರ್ಥಿಕ ಸಮಸ್ಯೆ ಎದುರಿ ಸುತ್ತಿದೆ. ಈ ಹಿನ್ನೆಲೆಯಲ್ಲಿ ಯುಎಇ ಮತ್ತು ಕತಾರ್‌ನ ಬೆಂಬಲದ ನಿರೀಕ್ಷೆ ಯಲ್ಲಿದೆ. ಈ ಯೋಜನೆಯಲ್ಲಿ ಗಲ್ಫ್ ರಾಷ್ಟ್ರಗಳು ಹೂಡಿಕೆ ಮಾಡುವಂತೆ ಮನ ವೊಲಿಸಬೇಕಾಗಿದೆ ಎಂದು ಯುರೇಷ್ಯಾ ಥಿಂಕ್‌ -ಟ್ಯಾಂಕ್‌ನ ಯುರೋಪ್‌ ನಿರ್ದೇಶಕ ಎಮ್ರೆ ಪೆಕರ್‌ ಹೇಳಿದ್ದಾರೆ.

ರಂಜಿನಿ, ಮಿತ್ತಡ್ಕ

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupati: ಲಡ್ಡು ಪ್ರಸಾದ ಪ್ರಮಾದ!

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.