BJP- JDS ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಸಚಿವ ಮಹದೇವಪ್ಪ


Team Udayavani, Sep 24, 2023, 4:58 PM IST

h c mahadevappa

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜಾ.ದಳ ಮೈತ್ರಿ ಮಾಡಿಕೊಳ್ಳುವುದರಿಂದ ಕಾಂಗ್ರೆಸ್‌ಗೆ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ಮತ್ತಷ್ಟು ಗಟ್ಟಿಯಾಗಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 2018ರ ಚುನಾವಣೆಯಲ್ಲಿ ಬಿಜೆಪಿ-ಜಾ.ದಳ ಆಂತರಿಕವಾಗಿ ಒಪ್ಪಂದ ಮಾಡಿಕೊಂಡಿದ್ದರಿಂದಾಗಿ ಮತಗಳು ಒಂದಾಗಿ ಕಾಂಗ್ರೆಸ್ ಸೋಲಿಗೆ ಕಾರಣವಾಯಿತು. ಈಗ ಇವರೆರಡೂ ಪಕ್ಷಗಳು ಅಧಿಕೃತವಾಗಿ ಒಂದಾಗುತ್ತಿದ್ದಾರೆ. ಇದರಿಂದಾಗಿ ಯಾವ ತೊಂದರೆ, ಪರಿಣಾಮ ಉಂಟಾಗುವುದಲ್ಲ ಎಂದು ಹೇಳಿದರು.

ಕಾಂಗ್ರೆಸ್ ಕರ್ನಾಟಕದಲ್ಲಿ ಬಲವಾಗಿದೆ. ನಿರೀಕ್ಷೆಯಂತೆ ಮತ್ತಷ್ಟು ಗಟ್ಟಿಯಾಗಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅನಗತ್ಯ ಖರ್ಚು ತಡೆದು ದಸರಾ ಆಚರಣೆ: ಅನಗತ್ಯವಾದ ಖರ್ಚು ಕಡಿಮೆ ಮಾಡಿ ಹಾಗೂ ಹಣಕಾಸು ಸ್ಥಿತಿಯನ್ನು ನೋಡಿ ಕಾರ್ಯಕ್ರಮಗಳನ್ನು ರೂಪಿಸಿ ಸಾಂಪ್ರದಾಯಿಕ ದಸರಾ ಮಹೋತ್ಸವ ಆಚರಿಸಲಾಗುವುದು ಎಂದು ಅವರು ಹೇಳಿದರು.

ಅದ್ಧೂರಿ ಹಾಗೂ ಸರಳವೂ ಅಲ್ಲದ ರೀತಿಯಲ್ಲಿ ಸಾಂಪ್ರದಾಯಿಕವಾಗಿ ಆಚರಣೆ ಮಾಡುತ್ತೇವೆ. ದಸರಾ ಮಹೋತ್ಸವಕ್ಕೆ ತನ್ನದೇ ಚಾರಿತ್ರಿಕ ಹಿನ್ನೆಲೆ, ಚರಿತ್ರೆ ಇದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಿಂದ ಈತನಕ ಆಗಿರುವ ಅಭಿವೃದ್ಧಿ, ಸಾಧನೆ ಇರುತ್ತದೆ ಎಂದರು.

ಹಣಕಾಸು ನಿಗದಿ ಮತ್ತು ಕೆಲವು ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ ಕಾರ್ಯಕ್ರಮ ರೂಪಿಸುತ್ತೇವೆ. ಅನಗತ್ಯ ಕಡಿವಾಣ ಹಾಕಿಕಾರ್ಯಕ್ರಮಗಳನ್ನು ಮಾಡುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದ್ದೂರಿ ದಸರಾ ಮಾಡೋಣವೆಂದು ಹೇಳಿದ್ದರು. ಆದರೆ, ಈಗ 120 ವರ್ಷಗಳ ನಂತರದಲ್ಲಿ ಬರಗಾಲ ಕಾಣಿಸಿಕೊಂಡು ರೈತರು ಕಷ್ಟದಲ್ಲಿರುವ ಕಾರಣ ಸಾಂಪ್ರದಾಯಿಕವಾಗಿ ಆಚರಿಸಲು ಹೇಳಿದ್ದಾರೆ. ಪ್ರಾಯೋಜಕರು ಮುಂದೆ ಬಂದರೆ ಸಂಪೂರ್ಣ ಬೆಂಬಲ ಕೊಡುತ್ತೇವೆ. ಇಲ್ಲಿಯವರೆಗೆ ಯಾರೂ ಮುಂದೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸತ್ಯಾಂಶ ಮರೆಮಾಚಿ ರಾಜಕೀಯ ಮಾಡಬಾರದು: ಕಾವೇರಿ ನೀರಿನ ವಿಚಾರದಲ್ಲಿ ಸತ್ಯಾಂತ ಮರೆಮಾಚಿ ರಾಜಕೀಯ ಮಾಡಬಾರದು. ಬೆಂಗಳೂರು ಬಂದ್ ಶಾಂತಿಯುತವಾಗಿ ಆಚರಿಸಲು ನಮ್ಮದೇನೂ ತಕರಾರು ಇಲ್ಲ. ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ತೊಂದರೆಯಾಗದಂತೆ ಮಾಡಬೇಕು ಎಂದರು. ಕಾವೇರಿ ನದಿ ನೀರಿನ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ, ಕಾವೇರಿ ನೀರು ಸಲಹಾ ಸಮಿತಿ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ನಲ್ಲಿ ಪ್ರಶ್ನೆಮಾಡಿದ್ದೆವು. ನಾವೇನೂ ತಾಂತ್ರಿಕ ತಜ್ಞರಲ್ಲವೆಂದು ಹೇಳಿ ನೀರು ಬಿಡಲು ಹೇಳಿದೆ. ಮೇಕೆದಾಟು ಯೋಜನೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಮುಕ್ತ ಮನಸ್ಸಿನಿಂದ ಇರುವ ಕಾರಣ ನಮಗೆ ಅನುಕೂಲ ಆಗಬಹುದು ಎಂದರು.

ಮೇಕೆದಾಟು ಯೋಜನೆಯಿಂದ 67 ಟಿಎಂಸಿ ನೀರು ಸಿಗಲಿದೆ. ಇದರಿಂದ ಕುಡಿಯುವ ನೀರು, ವಿದ್ಯುತ್ ಉತ್ಪಾದನೆಗೆ ನೆರವಾಗಲಿದೆ. ಕೋರ್ಟ್ ಯೋಜನೆ ಬಗ್ಗೆ ಒಲವು ತೋರಿದಂತೆ ಕಂಡಿರುವುದರಿಂದ ಕರ್ನಾಟಕಕ್ಕೆ ಅನುಕೂಲವಾಗಲಿದೆ ಎಂದರು.

ರಾಜ್ಯದಲ್ಲಿ ಸರ್ವಪಕ್ಷಗಳ ಸಭೆ ಮಾಡಲಾಗಿದೆ. ಹೊಸದಿಲ್ಲಿಯಲ್ಲಿ ಸಂಸದರು, ಸಚಿವರ ಸಭೆ ಮಾಡಿ ಚರ್ಚಿಸಲಾಗಿದೆ. ಕರ್ನಾಟಕ ಸಂದಿಗ್ದ ಪರಿಸ್ಥಿತಿಯಲ್ಲಿ ಇರುವಾಗ ಅಧಿಕಾರ ಮಾಡಿದವರು ಅರಿಯಬೇಕು. ಸತ್ಯಾಂತ ಮರೆಮಾಚಿ ರಾಜಕೀಯ ಮಾಡಬಾರದು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ಆಡಳಿತ ಮಾಡಿದವರು. ಕಾನೂನಾತ್ಮಕ ವಿಚಾರಗಳು ಅವರಿಗೂ ಗೊತ್ತಿದೆ. ಹೀಗಿದ್ದರೂ ರಾಜಕೀಯದ ಮಾತುಗಳನ್ನಾಡುತ್ತಾರೆ ಎಂದು ಕಿಡಿಕಾರಿದರು.

ಸುಪ್ರೀಂ ಕೋರ್ಟ್‌ನಲ್ಲಿ ಸೆ.27ರಂದು ಕಾವೇರಿ ವಿಚಾರ ಮತ್ತೆ ವಿಚಾರಣೆಗೆ ಬರುವುದರಿಂದ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಕಾವೇರಿ ಹೋರಾಟದಿಂದ ಪ್ರವಾಸೋದ್ಯಮದ ಮೇಲೆ ಯಾವ ಕರಿನೆರಳು ಬೀಳುವುದಿಲ್ಲ. ಇನ್ನು ಸಮಯ ಇರುವುದರಿಂದ ನೋಡೋಣ ಎಂದರು.

ಟಾಪ್ ನ್ಯೂಸ್

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

7-yellapura

Yellapura: ನಿಯಂತ್ರಣ ತಪ್ಪಿದ ಕಂಟೈನರ್‌ ಲಾರಿ; ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.