![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 24, 2023, 4:50 PM IST
ಚಿಕ್ಕಮಗಳೂರು : ಮೈತ್ರಿಯಿಂದ ಕಾಂಗ್ರೆಸ್ಸಿಗೆ ಯಾವುದೇ ನಷ್ಟವಿಲ್ಲ, ಬಿಜೆಪಿ-ಜೆಡಿಎಸ್ ಪಕ್ಷಗಳ ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭಾನುವಾರ ಹೇಳಿಕೆ ನೀಡಿದ್ದಾರೆ.
ಬಿಜೆಪಿ-ಜೆಡಿಎಸ್ ಹೊಟ್ಟೆಕಿಚ್ಚಿನಿಂದ ಕೈ-ಕೈ ಹಿಸುಕಿಕೊಳ್ಳುತ್ತಿದ್ದಾರೆ. ಅವರಿಗೆ ನಮ್ಮ ಅಸ್ತಿತ್ವವೇ ಹೋಗುತ್ತದೆ , ಕಾಂಗ್ರೆಸ್ ಮುಂದೆ ನಾವು ಏನೂ ಇರಲ್ಲ ಅನ್ನಿಸಿದೆ. ಯಾವುದೇ ಕೆಲಸ ಇಲ್ಲದ ಕಾರಣ ಹೊಟ್ಟೆಕಿಚ್ಚಿನಿಂದ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರ ಮಾತುಗಳಲ್ಲಿ ಹುರುಳಿಲ್ಲ, ಕಾಂಗ್ರೆಸ್ಸಿಗೆ ಅವರಿಂದ ನಷ್ಟವೂ ಇಲ್ಲ. ನಾವು ಲೋಕಸಭೆಯಲ್ಲಿ 25 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದರು.
ಗ್ಯಾರಂಟಿಯಿಂದಲೇ ಕಾಂಗ್ರೆಸ್ ಪೂರ್ಣ ಬಹುಮತದ ಸರ್ಕಾರ ಬಂದಿದೆ. ಕೊಟ್ಟ ಮಾತನ್ನ ಉಳಿಸಿಕೊಂಡು ಪಾರದರ್ಶಕ ಆಡಳಿತ ನೀಡುತ್ತಿದ್ದೇವೆ ಎಂದರು.
ಕಾವೇರಿ ನದಿ ನೀರು ವಿವಾದದ ಕುರಿತು ಪ್ರತಿಕ್ರಿಯಿಸಿ, ರಾಜ್ಯದ ನೆಲ-ಜಲ ಕಾಪಾಡುವುದು ನಮ್ಮಲ್ಲೆರ ಕರ್ತವ್ಯ. ಆ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಕಾವೇರಿ ನೀರು ಬಳಕೆ ಮಾಡುವುದು, ನಮ್ಮ ರೈತರ ಅನೂಕುಲಕ್ಕಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ.ಕಾನೂನು ತಜ್ಞರು, ಹಿರಿಯರ ಜೊತೆ ನಿರಂತರ ಚರ್ಚೆ ನಡೆಯುತ್ತಿದೆ. ಸರ್ವ ಪಕ್ಷ ಸಭೆ ಕರೆದು ಕೂಡ ಚರ್ಚೆ ಮಾಡಲಾಗಿದೆ. ಕೇಂದ್ರದ ಗಮನಕ್ಕೆ ತಂದು ಸರ್ವೋಚ್ಚ ನ್ಯಾಯಲಯದಲ್ಲಿ ವಾದ ಮಂಡಿಸಲಿದ್ದೇವೆ. ನಮ್ಮ ರಾಜ್ಯಕ್ಕೆ ಆ ಭಾಗದ ರೈತರು, ಜನರಿಗೆ ಆನ್ಯಾಯವಾಗದಂತ ಕ್ರಮ ಕೈಗೊಳ್ಳುತ್ತೇವೆ ಎಂದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.