Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

ನಲವತ್ತರ ಮೈಲಿಗಲ್ಲನ್ನು ತಲುಪಿದ ಕನ್ನಡ ಬಳಗ ಸಂಸ್ಥೆ

Team Udayavani, Sep 24, 2023, 6:40 PM IST

1-asdsad

ಇಂಗ್ಲೆಂಡ್ ನ ಕನ್ನಡ ಬಳಗ ಸಂಸ್ಥೆ ಪ್ರಪಂಚದ ಹಲವೆಡೆ ಇರುವ ಅನಿವಾಸಿ ಕನ್ನಡಿಗರ ಕೂಟಗಳಲ್ಲಿ ಒಂದು ಹಿರಿಯ ಸಂಸ್ಥೆಯಾಗಿದೆ. ಇದೇ ವಾರಾಂತ್ಯ ಈ ಸಂಸ್ಥೆ ನಲವತ್ತರ ಮೈಲಿಗಲ್ಲನ್ನು ತಲುಪಿದ ಸಂತೋಷವನ್ನು ಆಚರಿಸಲು ಒಂದು ಅದ್ದೂರಿ  ಉತ್ಸವವನ್ನು ಸೆ. 30 ಮತ್ತು ಅಕ್ಟೋಬರ್ 01 ರಂದು ಲಂಡನ್‌ನ ಕ್ರೈಸ್ಟ್ ಚರ್ಚ್‌ ಅವೆನ್ಯೂದಲ್ಲಿರುವ, ಬೈರನ್‌ ಹಾಲ್‌ ನಲ್ಲಿ ಹಮ್ಮಿಕೊಂಡಿದೆ.

ಕನ್ನಡ ಬಳಗದ ಅಧ್ಯಕ್ಷೆ ಸುಮನಾ ಗಿರೀಶ್‌ ಅವರು ಪತ್ರಿಕಾ ಹೇಳಿಕೆ ನೀಡಿದ್ದು, ಕನ್ನಡ ಬಳಗ, ಯು.ಕೆ ಎನ್ನುವ ಚಾರಿಟಬಲ್‌ ಸಂಸ್ಥೆ ಕಳೆದ ನಾಲ್ಕು ದಶಕಗಳಿಂದ ಯುನೈಟೆಡ್‌ ಕಿಂಗ್ಡಮ್‌ ನಲ್ಲಿ ನೆಲಸಿರುವ ಸಹಸ್ರಾರು ಕನ್ನಡಿಗರಿಗೆ ಎರಡನೆಯ ಮನೆಯಂತೆ ಕೆಲಸ ಮಾಡುತ್ತಿದೆ ಎನ್ನುವುದು ಇಲ್ಲಿನ ಹಲವು ಕನ್ನಡಿಗರ ಅಭಿಪ್ರಾಯವಾಗಿದೆ.1983 ನೇ ಇಸವಿಯಿಂದ ಕನ್ನಡ ಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ಸಂಘ ವಿದೇಶೀ ನೆಲದಲ್ಲಿ ಕನ್ನಡ ತೇರನ್ನು ಎಳೆಯುವ ಕೆಲಸದಲ್ಲಿ ಅವಿರತ ತೊಡಗಿಕೊಂಡಿದೆ. ದೂರ ದೇಶವೊಂದರಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ ಮತ್ತು ಕನ್ನಡ ನಾಡಿನ ಮೌಲ್ಯಗಳನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಬೆರಳೆಣಿಕೆಯ ಉತ್ಸಾಹಿ ಕನ್ನಡಿಗರಿಂದ ಶುರುವಾದ ಕನ್ನಡ ಬಳಗದಲ್ಲಿ ಇಂದು ಸುಮಾರು 2500 ಮಂದಿ (800 ಕುಟುಂಬಗಳು) ಸಂಸ್ಥೆಯ ಸದಸ್ಯತ್ವ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ನಲವತ್ತನೇ ವಾರ್ಷಿಕೋತ್ಸವದಲ್ಲಿ ಮೈಸೂರಿನ ರಾಜಮನೆತನದ ಯದುವೀರ ಒಡೆಯರ್ , ಶೈಕ್ಷಣಿಕ ತಜ್ಞ ಗುರುರಾಜ ಕರ್ಜಗಿ, ಖ್ಯಾತ ಪತ್ರಕರ್ತರಾದ ವಿಶ್ವೇಶ್ವರ ಭಟ್ ,ರವಿ ಹೆಗಡೆ,  ಪಾವಗಡದ ರಾಮಕೃಷ್ಣ ಸೇವಾಶ್ರಮದ ಸಂಸ್ಥಾಪಕ ಅಧ್ಯಕ್ಷ ಸ್ವಾಮಿ ಜಪಾನಂದ ಮಹಾರಾಜ್‌, ಖ್ಯಾತ ಗಾಯಕ ರಾಜೇಶ್‌ ಕೃಷ್ಣನ್,  ಲಂಡನ್‌ ಮಹಾನಗರದ ಮೇಯರ್, ಇಂಡಿಯನ್‌ ಹೈ ಕಮಿಷನ್ನಿನ ರಾಯಭಾರಿಗಳು ಮತ್ತು ಲಂಡನ್ ನ ಭಾರತೀಯ ವಿದ್ಯಾಭವನದ ಮುಖ್ಯಸ್ಥರಾದ ನಂದ ಕುರ್ಮಾ ಮತ್ತು ಕೂಡ ಭಾಗವಹಿಸಲಿದ್ದಾರೆ.

450 ಕಾರುಗಳನ್ನು ನಿಲ್ಲಿಸಬಹುದಾದ ಈ ಸಭಾಂಗಣ ಇಂಗ್ಲೆಂಡ್, ಸ್ಕಾಟ್ಲಾಂಡ್‌ ಮತ್ತು ವೇಲ್ಸ್ ಸಂಯುಕ್ತ ಸಂಸ್ಥಾನ ಮತ್ತು ದೇಶ ವಿದೇಶಗಳಿಂದ ಸಹಸ್ರಾರು ಅನಿವಾಸಿ ಕನ್ನಡಿಗರನ್ನು ಒಂದೆಡೆ ಸೇರಲು ಅನುಕೂಲಗಳಿರುವ ಜಾಗವಾಗಿದೆ.

ಈ ಸುಂದರ ಸಂದರ್ಭದ ಸಮಯದಲ್ಲಿ ನಾಡಿನ ಹಲವು ಗಣ್ಯರು ಮತ್ತು ಹಲವು ಪ್ರತಿಭಾನ್ವಿತ ಅನಿವಾಸಿ ಕನ್ನಡಿಗರ ಬರಹಗಳಿರುವ ಸಂಭ್ರಮ ಎನ್ನುವ ಸ್ಮರಣ ಸಂಚಿಕೆಯೊಂದನ್ನು ಬಿಡುಗಡೆಗಡೆಯಾಗಲಿದೆ. ಈ ಸಂಸ್ಥೆಯನ್ನು ಕಟ್ಟಿ ಅದನ್ನು ನಡೆಸಲು ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಹಲವು ಹಿರಿಯರನ್ನು ಮತ್ತು ಸಾಧಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಗುತ್ತಿದೆ.ಅನಿವಾಸಿ ಕನ್ನಡಿಗರ ಅಸ್ಮಿತೆಯನ್ನು ಜಗತ್ತಿಗೆ ಸಾರುವಲ್ಲಿ ಮೈಲಿಗಲ್ಲಿನ ಇಂತಹ ಆಚರಣೆಗಳು ಅತ್ಯಂತ ಮುಖ್ಯ ಎಂದು ಸುಮನಾ ಗಿರೀಶ್ ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.

ಇದುವರೆಗೆ ನಡಸಿರುವ ಚಟುವಟಿಕೆಗಳು

ಕರ್ನಾಟಕದ ಹೊರಗೆ ನಡೆದ ಪ್ರಥಮ ವಿಶ್ವ ಕನ್ನಡ ಸಮ್ಮೇಳನ (1988, ಆ27 – 29)

ಕನ್ನಡ ಬಳಗ , ಯು.ಕೆ ಸಂಸ್ಥೆಯು ಮ್ಯಾಂಚೆಸ್ಟೆರ್ ನಲ್ಲಿ ಪ್ರಥಮ ವಿಶ್ವ ಕನ್ನಡ ಸಮ್ಮೇಳನವನ್ನು ನಡೆಸಿದ ಹೆಗ್ಗಳಿಕೆಯನ್ನು ಹೊಂದಿದೆ. ಅಮೆರಿಕ, ಯೂರೋಪ್ , ಇಸ್ರೇಲ್, ಆಸ್ಟ್ರೇಲಿಯ,ನ್ಯೂಜಿಲ್ಯಾಂಡ್,ಭಾರತ ಮತ್ತು ಬ್ರಿಟನ್ ನ ಅನಿವಾಸಿ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಬಹು ಉತ್ಸಾಹದಿಂದ ಭಾಗವಹಿಸಿದ್ದರು.

ಕರ್ನಾಟಕದ ಆಗಿನ ಜನಪ್ರಿಯ ಮುಖ್ಯ ಮಂತ್ರಿಗಳಾದ ಎಸ್ .ಆರ್. ಬೊಮ್ಮಾಯಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು.ಶ್ರೀ ಎಂ. ಪಿ. ಪ್ರಕಾಶ್ , ಶ್ರೀ ಜೆ. ಎಚ್.ಪಟೇಲ್, ಪ್ರಸಿದ್ದ ಸಾಹಿತಿಗಳಾದ ಡಾ.ಶಿವರಾಮ ಕಾರಂತರು, ಪ್ರಸಿದ್ಧ ಆಟಗಾರ ಜಿ. ಆರ್. ವಿಶ್ವನಾಥ್, ನಟ ಶಂಕರ್ ನಾಗ್‌ , ಗೀತಾ, ಶ್ರೀನಾಥ್ , ಶ್ರೀನಿವಾಸ ಪ್ರಭು ಮತ್ತವರ ನಾಟಕ ತಂಡ, ಹಾಡುಗಾರರಾದ ಸಿ. ಅಶ್ವತ್ಥ್ ಇನ್ನಿತರ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಸ್ರಾರು ಅನಿವಾಸಿ ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಿದ್ದರು.

ಕನ್ನಡ ಬಳಗದ ರಜತ ಮಹೋತ್ಸವ(2008, ಆ.22-25)

ಕನ್ನಡ ಬಳಗ ಸಂಸ್ಥೆಯು ತನ್ನ ರಜತ ಮಹೋತ್ಸವ ಸಮಾರಂಭವನ್ನು ಇಂಗ್ಲೆಂಡಿನ ಚೆರ್ಶೈ ನಗರದ ಆಲ್ವಸ್ಟನ್‌ ಹಾಲ್‌ ನಲ್ಲಿ ಸಂಭ್ರಮದಿಂದ ಆಚರಿಸಲಾಗಿತ್ತು.ಕರ್ನಾಟಕದ ಅಂದಿನ ಸಚಿವರಾಗಿದ್ದ ಜನಾರ್ದನ ರೆಡ್ಡಿ,ಮುರುಗೇಶ್ ನಿರಾಣಿ, ಪ್ರಸಿದ್ಧ ಕವಿಗಳಾದ ನಿಸಾರ್‌ ಅಹಮ್ಮದ್‌, ಸಾಹಿತಿ ಜಯಂತ ಕಾಯ್ಕಿಣಿ, ನಿರ್ದೇಶಕ ಕೆ. ಎಸ್‌. ಎಲ್. ಸ್ವಾಮಿ, ವಾಗ್ಮಿ ಕೃಷ್ಣೇಗೌಡ, ಸಂಗೀತಕಾರರಾದ ಶಂಕರ್‌ ಶ್ಯಾನುಭೋಗ್‌, ಸಂಗೀತಾ ಕಟ್ಟಿ ಇತ್ಯಾದಿ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಮೂರನೇ ದಶಮಾನೋತ್ಸವ ಸಮಾರಂಭ (2013, ಮೇ 25-26)

ಇಂಗ್ಲೆಂಡಿನ ಸ್ಟೋಕ್‌ ಆನ್‌ ಟ್ರೆಂಟ್‌ ನಗರದ ಕಿಂಗ್ಸ್ ಹಾಲ್‌ ನಲ್ಲಿ ಕನ್ನಡ ಬಳಗದ ಮೂರನೇ ದಶಮಾನೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗಿತ್ತು. ಕನ್ನಡ ನಾಡಿನ ಹಲವು ಪ್ರಸಿದ್ಧ ಸಾಹಿತಿಗಳು, ಹಾಡುಗಾರರು ಮತ್ತು ವಾಗ್ಮಿಗಳನ್ನು ಕರೆಸಲಾಗಿತ್ತು.

ಪ್ರತಿ ವರ್ಷದ ಯುಗಾದಿ ಮತ್ತು ದೀಪಾವಳಿ ಸಮಾರಂಭಗಳು

ಬಹಳ ವರ್ಷಗಳಿಂದ ಕನ್ನಡ ಬಳಗದ ವರ್ಷಕ್ಕೆರಡು ಸಮಾರಂಭಗಳನ್ನು ನಡೆಸಿಕೊಂಡು ಬಂದಿದೆ. ಪ್ರತಿ ಯುಗಾದಿ ಮತ್ತು ದೀಪಾವಳಿ ಸಮಾರಂಭಗಳಲ್ಲಿ ಕರ್ನಾಟಕದ ಅನೇಕ ಪ್ರತಿಭಾವಂತ ಗಣ್ಯರು ಭಾಗವಹಿಸುತ್ತ ಬಂದಿದ್ದಾರೆ.

ಈ ಸಮಾರಂಭಗಳಲ್ಲಿ ಪ್ರಸಿದ್ದ ಸಾಹಿತಿಗಳಾದ ಶ್ರೀಯುತ ಎಸ್. ಎಲ್.ಭೈರಪ್ಪ, ಎಚ್. ಎಸ್. ವೆಂಕಟೇಶ ಮೂರ್ತಿ, ಶ್ರೀಯುತ ಬಿ. ಆರ್. ಲಕ್ಷಣರಾವ್, ಡುಂಡಿರಾಜ್, ಹಾಸ್ಯ ವಾಗ್ಮಿ ಪ್ರಾಣೇಶ್, ಸುಧಾ ಬರಗೂರು, ನಟರಾದ ರಮೇಶ್‌ ಅರವಿಂದ್ , ಸುದೀಪ್, ಯಶ್, ಗಣೇಶ್, ಸೃಜನ್‌ ಲೋಕೇಶ್, ಖ್ಯಾತ ರಂಗ ಮತ್ತು ಸಿನಿಮಾ ನಿರ್ದೇಶಕ ಗಿರೀಶ್‌ ಕಾಸರವಳ್ಳಿ, ನಾಗಾಭರಣ, ಶಿಕ್ಷಣತಜ್ಞ ಗುರುರಾಜ ಕರ್ಜಗಿ, ಅಮೆರಿಕ ಅನಿವಾಸಿ ಸಾಹಿತಿ ಮೈ.ಶ್ರೀ ನಟರಾಜ, ಪ್ರಸಿದ್ಧ ಗಾಯಕಿ ಮಂಜುಳ ಗುರುರಾಜ್ , ಅಜಯ್‌ ವಾರಿಯರ್, ಬಿ. ಆರ್. ಛಾಯಾ, ಎಂ. ಡಿ. ಪಲ್ಲವಿ ನೃತ್ಯಗಾರರಾದ ವಸುಂಧರಾ ದೊರೆಸ್ವಾಮಿ, ಬಾನ್ಸುರಿ ದಿಗ್ಗಜ ಪ್ರವೀಣ್ ಗೋಡ್ಕಿಂಡಿ ಸೇರಿ ಹಲವಾರುದಿಗ್ಗಜರು ಕರ್ನಾಟಕದಿಂದ ತೆರಳಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ.

ಕೋವಿಡ್‌ ವರ್ಷಗಳಲ್ಲಿ ಕೂಡ ಬಹಳಷ್ಟು ಆನ್ಲೈನ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೋ. ಎಂ.ಜಿ. ಈಶ್ವರಪ್ಪ ನವರು ಮಹಾ ಚೇತನ ಅಕ್ಕಮಹಾದೇವಿಯವರ ಬಗ್ಗೆ ಮಾತಾಡಿದರೆ, ಬೀಚಿ ಹಾಸ್ಯರಸಾಯನ ನಾಟಕವನ್ನು ಡ್ರಾಮಾಟ್ರಿಕ್ಸ್ ತಂಡ ನಡೆಸಿಕೊತ್ತಿತ್ತು. ಯೋಗ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕನ್ನಡಬಳಗ ತನ್ನ ಸದಸ್ಯರನ್ನು ಹೀಗೆ ನಲವತ್ತು ವರ್ಷಗಳಿಂದಲೂ ಕನ್ನಡ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಬಂದಿದೆ.

ಟಾಪ್ ನ್ಯೂಸ್

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.