Fraud Case ಕಸ್ಟಮರ್ ಕೇರ್ ಸಿಬಂದಿ ಹೆಸರಿನಲ್ಲಿ ಲಕ್ಷಾಂತರ ರೂ.ವಂಚನೆ
Team Udayavani, Sep 24, 2023, 9:24 PM IST
ಉಡುಪಿ: ಕಸ್ಟಮರ್ ಕೇರ್ ಸಿಬಂದಿ ಹೆಸರಿನಲ್ಲಿ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ.ವಂಚಿಸಿದ ಘಟನೆ ನಡೆದಿದೆ.
ಉಡುಪಿಯ ಪ್ರಶಾಂತ ಅವರು ಎಟಿಎಂನಲ್ಲಿ ಹಣ ಬಾರದಿದ್ದಾಗ ಕಸ್ಟಮರ್ ಕೇರ್ ಸಂಖ್ಯೆಗೆ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ವ್ಯಕ್ತಿ ತಾನು ಎ.ಟಿ.ಎಂ. ಸಿಬಂದಿ ಎಂದು ಹೇಳಿ ಪ್ರಶಾಂತ ಅವರಿಂದ ಕಾರ್ಡ್ ವಿವರ ಪಡೆದು ಹಂತ ಹಂತವಾಗಿ ಒಟ್ಟು 3,95,000ರೂ.ಗಳನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಗೆ ಲಕ್ಷಾಂತರ ರೂ.ವಂಚನೆ
ಉಡುಪಿ: ಟೆಲಿಗ್ರಾಮ್ ಆ್ಯಪ್ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತಾನು ಜೆಲಿಟಾ ಇಂಡಿಯಾ ಪೈ.ಲಿ. ಕಂಪೆನಿಯವನೆಂದು ನಂಬಿಸಿ ಮಹಿಳೆಯೊಬ್ಬರಿಂದ ಲಕ್ಷಾಂತರ ರೂ.ಗಳನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡ ಘಟನೆ ನಡೆದಿದೆ.
ರೇಣುಕಾ ಅವರಿಗೆ ಟೆಲಿಗ್ರಾಮ್ ಮೂಲಕ ಸಂದೇಶ ಕಳುಹಿಸಿದ ವ್ಯಕ್ತಿ ಆ ಕಂಪೆನಿಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶದ ಹಣ ನೀಡುವುದಾಗಿ ನಂಬಿಸಿದ್ದನು. ಹಣ ಪಾವತಿಸಲು ವಿವಿಧ ಬ್ಯಾಂಕ್ ಖಾತೆಗಳನ್ನು ನೀಡಿದ್ದನು. ಅದರಂತೆ ರೇಣುಕಾ ಅವರು ಆತ ಸೂಚಿಸಿದ ಅಕೌಂಟ್ಗಳಿಗೆ ಹಂತಹಂತವಾಗಿ ಒಟ್ಟು 1,35,000 ರೂ.ಗಳನ್ನು ಜಮೆ ಮಾಡಿದ್ದರು. ಆದರೆ ಆರೋಪಿಗಳು ಲಾಭಾಂಶವನ್ನು ನೀಡದೇ ಜಮೆ ಮಾಡಿದ ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.