Health: ಮಾತೃಶ್ರೀ- ಗರ್ಭಿಣಿಯರಿಗೆ 6 ಸಾವಿರ- ಅರ್ಜಿ ಸಲ್ಲಿಕೆ ಹೇಗೆ?
Team Udayavani, Sep 25, 2023, 12:22 AM IST
ರಾಷ್ಟ್ರೀಯ ಆರೋಗ್ಯ ಮಿಷನ್ನ ಮಾತೃ ಪುಷ್ಠಿವರ್ಧಿನಿ ಯೋಜನೆಯಡಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. 2018ರ ನ.1ರಂದು ರಾಜ್ಯ ಸರಕಾರ ಜಾರಿಗೊಳಿಸಿದ್ದು ಗರ್ಭಿಣಿಯರು- ಹಾಲುಣಿಸುವ ಮಹಿಳೆಯರು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ. ಗರ್ಭಿಣಿಯರಿಗೆ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಮಹಿಳೆಯರಿಗೆ ಒಂದು ಹೊತ್ತಿನ ಪೌಷ್ಟಿಕ ಆಹಾರವನ್ನು ಒದಗಿಸುವುದಾಗಿದೇ ಈ ಯೋಜನೆಯ ಉದ್ದೇಶವಾಗಿದೆ. ಗರ್ಭಾವಸ್ಥೆಯಿಂದ ಆರಂಭವಾಗಿ ಮಗುವಿಗೆ 6 ತಿಂಗಳು ಆಗುವವರೆಗೂ 15 ತಿಂಗಳು ಯೋಜನೆಯನ್ನು ಪಡೆಯಬಹುದು.
ಅರ್ಜಿ ಸಲ್ಲಿಕೆ ಹೇಗೆ?
ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿಯನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗಿದೆ
ನಿಮ್ಮ ಗ್ರಾಮದ ಹಾಗೂ ಸುತ್ತಮುತ್ತಲಿನ ಅಂಗನವಾಡಿ ಕಾರ್ಯಕರ್ತೆಯರನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ಯೋಜನೆ ಸದ್ಬಳಕೆ ಪಡೆಯಬಹುದಾಗಿದೆ.
ಸೌಲಭ್ಯಗಳು ಏನೇನು?
ಗರ್ಭಾವಸ್ಥೆಯಿಂದ ಆರಂಭವಾಗಿ ಮಗುವಿಗೆ 6 ತಿಂಗಳು ಆಗುವವರೆಗೂ 15 ತಿಂಗಳೂ ಸೌಲಭ್ಯ ಪಡೆಯಬಹುದಾಗಿದೆ
6 ಕಂತುಗಳಲ್ಲಿ 6 ಸಾವಿರ ರೂ.ವನ್ನು ಬ್ಯಾಂಕ್ ಖಾತೆ ಸರಕಾರದಿಂದ ಜಮೆ ಮಾಡಲಾಗುತ್ತದೆ
ಬಿಪಿಎಲ್ ಕುಟುಂಬಗಳ ಎಲ್ಲಾ ಗರ್ಭಿಣಿಯರಿಗೆ ಈ ಯೋಡನೆಯಡಿ ನೆರವು ನೀಡಲಾಗುತ್ತದೆ.
ಅಕ್ಕಿ, ದಾಲ್, ಸಾಂಬರ್, ಹಸಿರು ತರಕಾರಿ, ದ್ವಿದಳ ಧಾನ್ಯ, ಮೊಟ್ಟೆ, ನೆಲಗಡಲೆ, ಬೆಲ್ಲದ ಚಿಕ್ಕಿಯನ್ನು ನೀಡಲಾಗುತ್ತದೆ
ಮೊಟ್ಟೆಯನ್ನು ತಿನ್ನದ ಮಹಿಳೆಯರಿಗೆ 2 ರೀತಿಯ ಮೊಳಕೆ ಕಾಳುಗಳನ್ನು ಈ ಯೋಜನೆಯಡಿ ಒದಗಿಸಲಾಗುತ್ತದೆ
ದಾಖಲೆ ಏನೇನು ಬೇಕು?
ತಾಯಿ ಕಾರ್ಡ್
ಆಧಾರ್ ಕಾರ್ಡ್
ಚುನಾವಣಾ ಚೀಟಿ
ಆಧಾರ್ ಲಿಂಕ್ ಆದ ಬ್ಯಾಂಕ್ ಖಾತೆ
ಪತಿಯ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ
ನಿಬಂಧನೆ ಏನೇನು?
ಮೊದಲ 2 ಶಿಶುಗಳಿಗೆ ಮಾತ್ರ ಈ ಯೋಜನೆ ಅನ್ವಯ
3ನೇ ಮಗುವನ್ನು ಹೊಂದಿದರೆ ಈ ಯೋಜನೆ ಅನ್ವಯವಾಗುವುದಿಲ್ಲ
ಹರೀಶ್ ಹಾಡೋನಹಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Red Meat: ಮಧುಮೇಹ ಉಂಟಾಗುವ ಅಪಾಯ ಮತ್ತು ಕೆಂಪು ಮಾಂಸ ಸೇವನೆಗಿರುವ ಸಂಬಂಧ
Body Weight: ಕ್ರೀಡಾಳುಗಳ ಸಾಧನೆಯ ಮೇಲೆ ಕ್ಷಿಪ್ರ ದೇಹತೂಕ ಏರಿಳಿತದ ಪರಿಣಾಮಗಳು
Females Health: ಲಘು ರಕ್ತಸ್ರಾವ ಮತ್ತು ಋತುಸ್ರಾವ್ರ ವ್ಯತ್ಯಾಸ ತಿಳಿಯಿರಿ
Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್ ಪ್ಯಾಕ್; ಇದರ ಲಾಭವೇನು ಗೊತ್ತಾ?
Health: ಬಿಸಿಲಿನ ತಾಪದಿಂದ ಆರೋಗ್ಯ ಅಪಾಯ ತಡೆಯಲು ಏನು ಮಾಡ ಬೇಕು?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.