Patna: 1,500 ರೂ.ಗಾಗಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೂತ್ರ ಕುಡಿಸಿ ವಿಕೃತಿ
ಬಡ್ಡಿ ಸಮೇತ ಸಾಲ ವಾಪಾಸ್ ಕೊಟ್ಟರೂ ಮುಂದುವರಿದ ಕಿರುಕುಳ
Team Udayavani, Sep 25, 2023, 10:39 AM IST
ಪಾಟ್ನಾ: ಸಾಲ ಮರುಪಾವತಿಸುವ ವಿಚಾರಕ್ಕೆ ದಲಿತ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ಕುಡಿಸಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ಶನಿವಾರ (ಸೆ.23 ರಂದು) ನಡೆದಿದೆ.
ಘಟನೆ ಹಿನ್ನೆಲೆ: ದಲಿತ ಮಹಿಳೆ ಆರೋಪಿಗಳಿಂದ 1500 ರೂ. ಸಾಲವನ್ನು ತೆಗೆದುಕೊಂಡಿದ್ದರು. ಕೆಲ ತಿಂಗಳ ಬಳಿಕ ಬಡ್ಡಿಸಮೇತವಾಗಿ ಸಾಲವನ್ನು ಮರುಪಾವತಿಸಿದ್ದರು. ಆದರೆ ಸಾಲವನ್ನು ವಾಪಾಸ್ ನೀಡಿದ ಬಳಿಕವೂ ಆರೋಪಿಗಳಾದ ಪ್ರಮೋದ್ ಸಿಂಗ್ ಅವರ ಮಗ ಅಂಶು ಮಹಿಳಗೆ ಮತ್ತೆ ಕಿರುಕುಳ ನೀಡಿದ್ದರು. ಹೆಚ್ಚಿನ ಹಣ ನೀಡುವಂತೆ ಪೀಡಿಸುತ್ತಿದ್ದರು. ಹೆಚ್ಚಿನ ಹಣ ನೀಡಲು ಮಹಿಳೆ ನಿರಾಕರಿಸಿದ್ದರು. ಹಣ ನೀಡದಿದ್ದರೆ ವಿವಸ್ತ್ರಗೊಳಿಸಿ ಊರಿಡೀ ಮೆರವಣಿಗೆ ಮಾಡುತ್ತೇವೆ ಎಂದು ಮಹಿಳೆಗೆ ಬೆದರಿಕೆ ಹಾಕಿದ್ದರು.
ಆರೋಪಿಗಳಾದ ಪ್ರಮೋದ್ ಸಿಂಗ್ ಅವರ ಮಗ ಅಂಶು ಹಾಗೂ ಇತರೆ ನಾಲ್ವರು ಸಹಚರರು ಶನಿವಾರ ರಾತ್ರಿ ಮಹಿಳೆಯ ಮನೆಗೆ ಹೋಗಿ ಆಕೆಯನ್ನು ಬಲವಂತವಾಗಿ ತಮ್ಮ ಮನೆಗೆ ಕರೆದೊಯ್ದಿದ್ದಾರೆ.
ಆ ಬಳಿಕ ಮಹಿಳೆಯನ್ನು ವಿವಸ್ತ್ರಗೊಳಿಸಿ,ಆಕೆಯನ್ನು ಕೋಲುಗಳಿಂದ ಥಳಿಸಿದ್ದಾರೆ. ಈ ವೇಳೆ ಪ್ರಮೋದ್ ಸಿಂಗ್ ತನ್ನ ಮಗನಿಗೆ ಮಹಿಳೆಯ ಬಾಯಿಗೆ ಮೂತ್ರ ವಿಸರ್ಜನೆ ಮಾಡುವಂತೆ ಹೇಳಿದ್ದಾರೆ. ಆದರೆ ಅದ್ಯಾಗೋ ಮಹಿಳೆ ಅಲ್ಲಿಂದ ಪರಾರಿ ಆಗಿ ಮನೆಗೆ ವಾಪಾಸ್ ಆಗಿದ್ದಾರೆ. ಸದ್ಯ ಮಹಿಳೆಯ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಗ್ರಾಮದಲ್ಲಿ ಈ ಘಟನೆಗೆ ಆಕ್ರೋಶ ವ್ಯಕ್ತವಾಗಿದ್ದು,ಸಂತ್ರಸ್ತೆ ಕುಟುಂಬ ಹಾಗೂ ದಲಿತ ಸಮುದಾಯದವರು ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಘಟನೆ ಬಳಿಕ ಇಬ್ಬರೂ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಈ ಹಿಂದೆ ಕೂಡ ಮಹಿಳೆ ಆರೋಪಿಗಳ ಕಿರುಕುಳ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.