N.M. Suresh: ಎಲ್ಲ ವಲಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವೆ


Team Udayavani, Sep 25, 2023, 11:57 AM IST

TDY-3

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎನ್‌.ಎಂ. ಸುರೇಶ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಾಕಷ್ಟು ಕನಸುಕಟ್ಟಿಕೊಂಡಿರುವ ಸುರೇಶ್‌ ತಮ್ಮ ಯೋಜನೆ, ಯೋಚನೆಗಳ ಬಗ್ಗೆ ಇಲ್ಲಿ ಮಾತನಾಡಿದ್ದಾರೆ.

ಅಧ್ಯಕ್ಷರಾಗಿ ಆಯ್ಕೆಯಾಗಿದ್ದೀರಿ. ಈ ಸಂದರ್ಭದಲ್ಲಿ ಏನು ಹೇಳುತ್ತೀರಿ?

ಮೊದಲನೇಯದಾಗಿ ನನ್ನ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ ಸದಸ್ಯರಿಗೆ ಧನ್ಯವಾದ ಹೇಳುತ್ತೇನೆ. ಜತೆಗೆ ಅವರು ನನ್ನಿಂದ ಬಯಸಿ ದಂತಹ ಅಭಿವೃದ್ಧಿ ಕಾರ್ಯ ಮಾಡಲು ಬದ್ಧನಾಗಿದ್ದೇನೆ. ನನ್ನ ಗುರುಗಳಾದ ಸಾ.ರಾ.ಗೋವಿಂದು ಪ್ರೋತ್ಸಾಹವನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುತ್ತೇನೆ.

ಮೊದಲು ಬಗೆಹರಿಸಬೇಕು ಎಂದುಕೊಂಡ ಸಮಸ್ಯೆ ಯಾವುದು?

ರಾಜ್ಯ ಚಲನಚಿತ್ರ ಪ್ರಶಸ್ತಿ ವಿಚಾರ. ಹಲವು ವರ್ಷಗಳಿಂದ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿಲ್ಲ. ಇದರ ಜತೆಗೆ ಯುಎಫ್ಒ, ಕ್ಯೂಬ್‌, ಸಬ್ಸಿಡಿ ಸೇರಿದಂತೆ ಹಲವು ಸಮಸ್ಯೆಗಳಿವೆ. ಅವೆಲ್ಲವನ್ನು ಮೊದಲ ಆದ್ಯತೆಯಲ್ಲಿ ಬಗೆಹರಿಸಬೇಕಿದೆ.

ನೀವು ಅಂದುಕೊಂಡ ಯೋಜನೆಗಳ ಬಗ್ಗೆ ಹೇಳಿ?

ಸಾಕಷ್ಟು ಯೋಜನೆಗಳಿವೆ. ಈಗಷ್ಟೇ ಆಯ್ಕೆಯಾಗಿದ್ದೇನೆ. ಈಗಲೇ ಹೇಳುವ ಬದಲು ಒಂದೊಂದೇ ಮಾಡಿ ತೋರಿಸುವುದು ಒಳ್ಳೆಯದು. ಸಿನಿಮಾ ರಂಗದ ಎಲ್ಲಾ ವಲಯಗಳ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಈ ಕುರಿತು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಬೇಕಿದೆ. ಜತೆಗೆ ಅಗತ್ಯವಿರುವವರಿಗೆ ಮನೆ ಕೊಡಿಸುವ ಯೋಜನೆಯೂ ಇದೆ.

ಚಿತ್ರರಂಗದ ಸಮಸ್ಯೆ ಬಗೆಹರಿಸಲು ಈ ಒಂದು ವರ್ಷ ಸಾಕಾಗುತ್ತಾ?

ಖಂಡಿತಾ ಸಾಕಾಗಲ್ಲ. ಆದರೆ, ಬೈಲಾ ಪ್ರಕಾರ ಇರೋದೇ ಒಂದು ವರ್ಷ. ಅದರಲ್ಲಿ ಎಷ್ಟು ಉತ್ತಮ ಕೆಲಸ ಮಾಡಲಾಗುತ್ತೋ ಮಾಡುತ್ತೇನೆ. ಹೊಸದಾಗಿ ಚಿತ್ರರಂಗಕ್ಕೆ ಬರುವ ನಿರ್ಮಾಪಕರಿಗೆ ನಿಮ್ಮ ಕಿವಿಮಾತು? ಇವತ್ತು ದಿನದಿಂದ ದಿನಕ್ಕೆ ಚಿತ್ರರಂಗಕ್ಕೆ ಹೊಸ ಹೊಸ ನಿರ್ಮಾಪಕರು ಬರುತ್ತಿದ್ದಾರೆ. ಅವರಿಗೆ ಸಿನಿಮಾ ಕುರಿತಾಗಿ ಹೆಚ್ಚಿನ ಅರಿವಿಲ್ಲ. ಅಂತಹವರಿಗೆ ಶಿಬಿರ ನಡೆಸುವ ಪ್ಲ್ರಾನ್‌ ಕೂಡಾ ಇದೆ.

ಕಾವೇರಿ ಹೋರಾಟದಲ್ಲಿ ಚಿತ್ರರಂಗ ಹೇಗೆ ಭಾಗಿಯಾಗುತ್ತದೆ?

ಆ ಕುರಿತು ಚರ್ಚಿಸಲು ಸೋಮವಾರ ಸಭೆ ಕರೆದಿದ್ದೇನೆ. ಆ ಬಳಿಕ ಮಾತನಾಡುತ್ತೇನೆ. ಒಂದಂತೂ ಸತ್ಯ ರೈತರ ಪರ, ನಾಡಿನ ಪರ ಚಿತ್ರರಂಗ ಯಾವತ್ತಿಗೂ ಇರುತ್ತದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾನುವಾರ ಅಧಿಕಾರ ಸ್ವೀಕರಿಸಿದರು. ಅಧ್ಯಕ್ಷರಾಗಿ ಎನ್‌.ಎಂ.ಸುರೇಶ್‌, ಉಪಾಧ್ಯಕ್ಷರುಗಳಾಗಿ ಪ್ರಮೀಳಾ ಜೋಷಾಯ್‌, ಜಿ.ವೆಂಕಟೇಶ್‌, ನರಸಿಂಹಲು, ಗೌರವ ಕಾರ್ಯದರ್ಶಿಗಳಾಗಿ ಭಾ.ಮ.ಹರೀಶ್‌, ಕರಿಸುಬ್ಬು, ಸುಂದರ್‌ರಾಜು ಹಾಗೂ ಖಜಾಂಚಿಯಾಗಿ ಜಯಸಿಂಹ ಮುಸರಿ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.