Janata Darshan: ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು: ಹೆಬ್ಬಾಳ್ಕರ್
ಜಿಲ್ಲಾಮಟ್ಟದ ಜನತಾದರ್ಶನಕ್ಕೆ ಚಾಲನೆ
Team Udayavani, Sep 25, 2023, 12:34 PM IST
ಮಣಿಪಾಲ: ಅಧಿಕಾರಿಗಳು ಹೃದವಂತಿಕೆಯಿಂದ ಜನರ ಸಮಸ್ಯೆ ಬಗೆಹರಿಸಬೇಕು. ಜನತಾದರ್ಶನದ ಎಲ್ಲ ಕಡತಗಳು ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದರು.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಜನತಾದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು. ಕಾನೂನಿನನ್ವಯ ಯಾವುದಕ್ಕೆಲ್ಲ ಪರಿಹಾರ ನೀಡಲು ಸಾಧ್ಯವೋ ಅದೆಲ್ಲಕ್ಕೂ ತತ್ ಕ್ಷಣವೇ ಪರಿಹಾರ ಸೂಚಿಸುವ ಕೆಲಸ ಆಗಬೇಕು ಎಂದರು.
ಕಂದಾಯ, ಅರಣ್ಯ, ಪೊಲೀಸ್, ಸಮಾಜ ಕಲ್ಯಾಣ ಮೊದಲಾದ ಇಲಾಖೆಗಳಲ್ಲಿ ಸಾಕಷ್ಟು ಕಡತ ಬಾಕಿ ಇರುತ್ತದೆ. ಕಡತವು ಒಂದು ಟೇಬಲ್ ನಿಂದ ಇನ್ನೊಂದು ಟೇಬಲ್ ಗೆ ಹೋಗುತ್ತಿರಬಾರದು. ಎಲ್ಲದಕ್ಕೂ ವಿಲೇವಾರಿ ಮೂಲಕ ಪರಿಹಾರ ನೀಡಬೇಕು ಎಂದು ನಿರ್ದೇಶಿಸಿದರು.
ಜಿ. ಪಂ ಸಿಇಒ ಪ್ರಸನ್ನ ಎಚ್., ಎಸ್ ಪಿ ಡಾ. ಅರುಣ್, ಅಪರ ಜಿಲ್ಲಾಧಿಕಾರಿ ಮಮತಾದೇವಿ, ಉಪವಿಭಾಗ ಆಯುಕ್ತೆ ರಶ್ಮಿ ಸಹಿತ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶಿಲ್ದಾರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಇದನ್ನೂ ಓದಿ: Goa: ಮೀಸಲಾತಿ ನೀಡಿ ಮಹಿಳೆಯರಿಗೆ ಗೌರವ ನೀಡುವ ಕೆಲಸ ಬಿಜೆಪಿ ಮಾಡಿದೆ: ಗೋವಾ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.