INDvsAUS; ರಾಜಕೋಟ್ ಏಕದಿನ ಪಂದ್ಯಕ್ಕಿಲ್ಲ ಶುಭಮನ್ ಗಿಲ್, ಶಾರ್ದೂಲ್ ಠಾಕೂರ್
Team Udayavani, Sep 25, 2023, 5:45 PM IST
ರಾಜಕೋಟ್: 2023 ರ ವಿಶ್ವಕಪ್ಗೆ ಮುಂಚಿತವಾಗಿ ತಮ್ಮ ಅಗ್ರ ಆಟಗಾರರಿಗೆ ವಿಶ್ರಾಂತಿ ನೀಡುವ ಸಲುವಾಗಿ, ರಾಜಕೋಟ್ ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಿಂದ ಸ್ಟಾರ್ ಆಟಗಾರರಾದ ಶುಭಮನ್ ಗಿಲ್ ಮತ್ತು ಶಾರ್ದೂಲ್ ಠಾಕೂರ್ ಅವರು ಹೊರಗುಳಿಯಲಿದ್ದಾರೆ ಎಂದು ಭಾರತೀಯ ತಂಡದ ಮ್ಯಾನೇಜ್ ಮೆಂಟ್ ಘೋಷಿಸಿದೆ.
ಈ ವರ್ಷ ಅದ್ವಿತೀಯ ಪ್ರದರ್ಶನ ನೀಡುತ್ತಿರುವ ಗಿಲ್ ಅದ್ಭುತ ಫಾರ್ಮ್ನಲ್ಲಿದ್ದಾರೆ. ಇಂದೋರ್ ಪಂದ್ಯದಲ್ಲಿ ಶತಕ ಬಾರಿಸಿದ ಅವರು ವಿಶ್ವಕಪ್ ಗೆ ಸಜ್ಜಾಗಿದ್ದಾರೆ.
20 ಇನ್ನಿಂಗ್ಸ್ಗಳಿಂದ 72.35 ಸರಾಸರಿಯಲ್ಲಿ ಮತ್ತು 105.03 ಸ್ಟ್ರೈಕ್ ರೇಟ್ನಲ್ಲಿ 1230 ರನ್ ಗಳೊಂದಿಗೆ, ಗಿಲ್ ಈ ವರ್ಷ ಏಕದಿನಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಕೂಡ ಉತ್ತಮ ಫಾರ್ಮ್ ನಲ್ಲಿದ್ದಾರೆ. ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಇಬ್ಬರೂ ಆಟಗಾರರು ಗುವಾಹಟಿಯಲ್ಲಿ ಮತ್ತೆ ತಂಡವನ್ನು ಸೇರಿಕೊಳ್ಳುತ್ತಾರೆ. ಅಲ್ಲಿ ಭಾರತವು ತಮ್ಮ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ.
ಆಸೀಸ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ಕುಲದೀಪ್ ಯಾದವ್ ಅವರು ಮೂರನೇ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ.
ಮೊಹಾಲಿ ಮತ್ತು ಇಂದೋರ್ ನಲ್ಲಿ ನಡೆದ ಮೊದಲೆರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಸುಲಭ ಜಯ ಸಾಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್ ಪ್ರವೇಶಿಸಿದ ಭಾರತ ಹಾಕಿ ತಂಡ
International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು
ENGvsAUS: ಏಕದಿನ ಸರಣಿಗೂ ಬಟ್ಲರ್ ಅಲಭ್ಯ; ಎಸ್ಆರ್ಎಚ್ ಆಟಗಾರನಿಗೆ ನಾಯಕತ್ವ
B–G Trophy: ಈತನೇ ಭಾರತದ ಮುಂದಿನ ಸೂಪರ್ ಸ್ಟಾರ್ ಎಂದ ಸ್ಟೀವ್ ಸ್ಮಿತ್, ಸ್ಟಾರ್ಕ್
Asian Champions Trophy ಸೆಮಿಫೈನಲ್ : ಕೊರಿಯಾ ವಿರುದ್ಧ ಭಾರತ ಫೇವರಿಟ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.