Kolar: ಜನತಾ ದರ್ಶನದಲ್ಲಿ ಸಂಸದ, ಶಾಸಕರ ಜಟಾಪಟಿ
Team Udayavani, Sep 25, 2023, 10:57 PM IST
ಕೋಲಾರ: ನಗರದಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಸಂಸದ ಹಾಗೂ ಶಾಸಕರ ನಡುವಿನ ಜಟಾಪಟಿಗೆ ಸಾಕ್ಷಿಯಾಯಿತು.
ಮಾತಿನ ನಡುವೆ “ಭೂಗಳ್ಳರು’ ಎಂದು ಪ್ರಸ್ತಾವಿಸಿದ್ದಕ್ಕೆ ಸಂಸದ ಎಸ್.ಮುನಿಸ್ವಾಮಿ ವಿರುದ್ಧ ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ತಿರುಗಿ ಬಿದ್ದರು. ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದು ಕಾರ್ಯಕ್ರಮ ಗೊಂದಲದ ಗೂಡಾಯಿತು.
ಸೋಮವಾರ ಬೆಳಗ್ಗೆ ಇಲ್ಲಿನ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜನತಾದರ್ಶನ ಏರ್ಪಡಿಸಲಾಗಿತ್ತು. ಉದ್ಘಾಟನೆಯ ಬಳಿಕ ಸಚಿವ ಬೈರತಿ ಸುರೇಶ್ ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುತ್ತಿದ್ದರು. ಶ್ರೀನಿವಾಸಪುರದ ರೈತರ ಜತೆ ಸಂಸದ ಎಸ್.ಮುನಿಸ್ವಾಮಿ ಮನವಿ ಸಲ್ಲಿಸಲು ಆಗಮಿಸಿದ್ದರು.
ರೈತರ ಭೂಮಿಯನ್ನು ಉಳಿಸಿಕೊಡಿ ಎಂದು ಮನವಿ ಸಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿಯುತ್ತಿದ್ದಾಗ ಸಂಸದ ಮುನಿಸ್ವಾಮಿ ಅವರು, “ಭೂಗಳ್ಳರನ್ನು ವೇದಿಕೆಯಲ್ಲಿ ಕೂರಿಸಿಕೊಂಡು ಜನತಾದರ್ಶನ ನಡೆಸಿದರೆ ಯಶಸ್ವಿಯಾಗಲು ಹೇಗೆ ಸಾಧ್ಯ’ ಎಂದು ಲೇವಡಿ ಮಾಡಿದರು. ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಣ ಸ್ವಾಮಿ, “ನಿಮ್ಮ ಅಪ್ಪ ಹಾಗೂ ನೀನು ಭೂಗಳ್ಳ’ ಎಂದು ಆಕ್ರೋಶದಿಂದ ಹೇಳಿದರು. ಇದು ಇಬ್ಬರ ನಡುವೆ ವಾಗ್ವಾದ ಉಂಟು ಮಾಡಿತು. ಪರಿಸ್ಥಿತಿಯು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಸಂಸದರನ್ನು ಎಸ್ಪಿ ನಾರಾಯಣ್ ಅವರು ವೇದಿಕೆಯಿಂದ ಕೆಳಕ್ಕಿಳಿಸಿದರಲ್ಲದೆ, ರಂಗ ಮಂದಿರದಿಂದ ಹೊರಕ್ಕೆ ನೂಕಿದರು.
ಪೊಲೀಸರ ವರ್ತನೆಯಿಂದ ಮತ್ತಷ್ಟು ಕೆರಳಿದ ಮುನಿಸ್ವಾಮಿ, ನಾನು ಯಾರ ಹೆಸರನ್ನೂ ಉಲ್ಲೇಖೀಸಿ ಭೂಗಳ್ಳ ಎಂದು ಹೇಳಿಲ್ಲ. ಪೊಲೀಸರು ತಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಬೇಕು ಹಾಗೂ ಜನಪ್ರತಿನಿಧಿಗಳಿಗೆ ಗೌರವ ನೀಡಬೇಕು ಆಕ್ರೋಶಭರಿತರಾಗಿ ಹೇಳಿದರು.
ಒತ್ತುವರಿ ತೆರವು ಹೆಸರಲ್ಲಿ ಶ್ರೀನಿವಾಸಪುರದ ರೈತರ ಮೇಲೆ ದಬ್ಟಾಳಿಕೆ ಮಾಡಿ ರುವ ಸರಕಾರ ಮತ್ತು ಅಧಿಕಾರಿಗಳಿಗೆ, ಶಾಸಕ ಎಸ್.ಎನ್. ನಾರಾಯಣ ಸ್ವಾಮಿ ಮಾಡಿಕೊಂಡಿರುವ ಒತ್ತುವರಿ ಕಾಣಿಸುತ್ತಿಲ್ಲವೇ? ಶಾಸಕರು ಗುಂಡುತೋಪು, ಸರಕಾರಿ ಜಮೀನು ಹಾಗೂ ಕೆರೆಯನ್ನು ಕಬಳಿಸಿಲ್ಲವೇ? –ಎಸ್. ಮುನಿಸ್ವಾಮಿ, ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.