Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ


Team Udayavani, Sep 25, 2023, 11:02 PM IST

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

ಮಣಿಪಾಲ: ಕೇಂದ್ರ ಸರಕಾರದ ಸಾಲಸೌಲಭ್ಯ ಯೋಜನೆ ಗಳ ಮಾಹಿತಿಯನ್ನು ಎಲ್ಲ ಗ್ರಾ.ಪಂ.ಗಳಲ್ಲಿ ಸಿಗುವಂತೆ ಮಾಡ ಬೇಕು ಮತ್ತು ಬ್ಯಾಂಕ್‌ಗಳಲ್ಲಿಯೂ ಯೋಜನೆಗಳ ಮಾಹಿತಿ ಕರಪತ್ರ ಇಡುವ ವ್ಯವಸ್ಥೆ ಆರಂಭಿಸ ಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೂಚಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಬ್ಯಾಂಕರ್‌ಗಳ ಸಭೆ ನಡೆಸಿ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು.

ಮುದ್ರಾ, ಪಿಎಂ ಸ್ವನಿಧಿ ಸಹಿತ ವಾಗಿ ಹಲವು ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇರುವುದಿಲ್ಲ. ಇಂತಹ ಯೋಜನೆ ಯಡಿ ಬ್ಯಾಂಕ್‌ಗಳಿಂದ ನೀಡುವ ಸಾಲಸೌಲಭ್ಯದ ಬಗ್ಗೆ ಕರಪತ್ರ ಸಿದ್ಧಪಡಿಸಿ ಗ್ರಾ.ಪಂ.ಗಳಲ್ಲಿ ಇರಿಸಿ ನಿತ್ಯ ಅಲ್ಲಿಗೆ ಬರುವ ಜನರಿಗೆ ಅದು ಸಿಗು ವಂತೆ ಮಾಡಬೇಕು. ಹಾಗೆಯೇ ಬ್ಯಾಂಕ್‌ಗಳಲ್ಲೂ ಸರಕಾರದ ಯೋಜನೆ ಗಳ ಬಗ್ಗೆ ಸರಳೀಕೃತ ಮಾಹಿತಿಯನ್ನು ಒದಗಿಸಬೇಕು ಎಂದರು.

ಕನ್ನಡಿಗ ಸಿಬಂದಿ: ಸೂಚನೆ
ಬ್ಯಾಂಕ್‌ಗಳಲ್ಲಿ ಪ್ರಾದೇಶಿಕ ಭಾಷೆ ಮಾತನಾಡುವವರ ಕೊರತೆ ಇರುವು ದರಿಂದ ಬ್ಯಾಂಕಿಂಗ್‌ ಪರೀಕ್ಷೆಗೆ ನಮ್ಮ ಲ್ಲಿಂದಲೂ ಹೆಚ್ಚೆಚ್ಚು ಮಂದಿ ಆಯ್ಕೆ ಯಾಗುವ ನಿಟ್ಟಿನಲ್ಲಿ ಅಗತ್ಯ ತರಬೇತಿ ನೀಡಲು ತರಬೇತಿ ಸಂಸ್ಥೆಗಳನ್ನು ಸಜ್ಜುಗೊಳಿಸುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಬೇಕು. ಬ್ಯಾಂಕ್‌ಗಳಲ್ಲಿ ಕನ್ನಡ ಮಾತನಾಡುವವರು ಇಲ್ಲದೇ ಇದ್ದಲ್ಲಿ ಸ್ಥಳೀಯರ ಅನುಕೂಲಕ್ಕಾಗಿ ಭಾಷಾಂತರ ಮಾಡುವವರೊಬ್ಬರನ್ನು ನೇಮಿಸಿಕೊಳ್ಳಬೇಕು ಎಂದರು.

ವರದಿ ಸಲ್ಲಿಸಿ
ಪಿಎಂಇಜಿಪಿ, ಕೃಷಿ ಮೂಲ ಸೌಕರ್ಯ ಯೋಜನೆ, ಮೀನುಗಾರಿಕೆ ಚಟುವಟಿಕೆ ಗಳಿಗೆ ಕೆಸಿಸಿ, ಮುದ್ರಾ, ಪಿಎಂಸ್ವನಿಧಿ, ಪಿಎಂಜೆಜೆಬಿವೈ, ಪಿಎಂಎಸ್‌ಬಿವೈ ಹಾಗೂ ಅಟಲ್‌ ಪಿಂಚಣಿ ಯೋಜನೆಯಡಿಯಲ್ಲಿ ಯಾವುದೇ ಅರ್ಜಿಯನ್ನು ಸಕಾರಣ ಇಲ್ಲದೇ ಬಾಕಿ ಇರಿಸಿಕೊಳ್ಳುವುದು, ತಿರಸ್ಕರಿಸು ವುದು ಆಗಬಾರದು. ಬ್ಯಾಂಕ್‌ ಹಂತದಲ್ಲಿ ಯಾವುದೇ ಅರ್ಜಿಯನ್ನು ಸೂಕ್ತ ಕಾರಣ ಇಲ್ಲದೆ ತಿರಸ್ಕರಿಸಬಾರದು. ಮುದ್ರಾ ಯೋಜನೆ ಬಗ್ಗೆ ಜನಸಾಮಾನ್ಯರಿಗೆ ಸರಿಯಾದ ಮಾಹಿತಿ ಒದಗಿಸಬೇಕು ಎಂದರು.

ಆಹಾರ ಸಂಸ್ಕರಣೆಗೆ ಆದ್ಯತೆ ಇರಲಿ
ಕೃಷಿ ಮೂಲಸೌಕರ್ಯ ಯೋಜನೆ ಯಡಿ ಕೇವಲ ಗೋದಾಮುಗಳಿಗೆ ಸಾಲಸೌಲಭ್ಯ ನೀಡುವುದಲ್ಲ. ಆಹಾ ರೋತ್ಪನ್ನ ಸಂಸ್ಕರಣ ಘಟಕಗಳಿಗೆ ಸಾಲ ಸೌಲಭ್ಯ ನೀಡಬೇಕು. ಇದರಿಂದ ಉದ್ಯೋಗ ಸೃಷ್ಟಿಯೂ ಹೆಚ್ಚಾಗು ತ್ತದೆ. 125 ಅರ್ಜಿಯಲ್ಲಿ 104 ವಿಲೇವಾರಿ ಮಾಡಿ 108 ಕೋಟಿ ರೂ. ಸಾಲವನ್ನು ಕೇವಲ ಗೋದಾಮು ಸ್ಥಾಪನೆಗೆ ನೀಡಿರುವುದು ಸರಿಯಲ್ಲ. ಮುಂದೆ ಸೂಕ್ತ ರೀತಿಯಲ್ಲಿ ವಿಂಗಡನೆ ಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೆನರಾ ಬ್ಯಾಂಕ್‌ ಉಡುಪಿಯ ಪ್ರಾದೇಶಕ ವ್ಯವಸ್ಥಾಪಕ ಶ್ರೀಜಿತ್‌ ಕೆ. ಮಾತನಾಡಿ, ವರ್ಷದಿಂದ ವರ್ಷಕ್ಕೆ ಒಟ್ಟಾರೆ ಜಿಲ್ಲೆ ಬ್ಯಾಂಕ್‌ಗಳ ವ್ಯವಹಾರ ದಲ್ಲಿ ಶೇ. 9ರಷ್ಟು ಏರಿಕೆ ಕಂಡಿದೆ. ಬ್ಯಾಂಕ್‌ ಸಾಲಸೌಲಭ್ಯ ವಿತರಣೆ ವ್ಯವಸ್ಥೆಯಲ್ಲೂ ಶೇ.7.52ರಷ್ಟು ವೃದ್ಧಿ ಯಾಗಿದೆ. ಬ್ಯಾಂಕ್‌ ಠೇವಣಿಯಲ್ಲೂ ಶೇ.9.85ರಷ್ಟು ಹೆಚ್ಚಾಗಿದೆ ಎಂದರು.

ಶಾಸಕರಾದ ಕಿರಣ್‌ ಕುಮಾರ್‌ ಕೊಡ್ಗಿ, ಗುರುರಾಜ ಗಂಟಿಹೊಳೆ, ಆರ್‌ಬಿಐ ಎಕ್ಸಿಕ್ಯೂಟಿವ್‌ ತನು ನಂಜಪ್ಪ, ನಬಾರ್ಡ್‌ ಪ್ರತಿನಿಧಿ ಸಂಗೀತಾ ಕರ್ತಾ, ಯೂನಿಯನ್‌ ಬ್ಯಾಂಕ್‌ ಪ್ರಾದೇಶಿಕ ವ್ಯವಸ್ಥಾಪಕ ಮನೋಜ್‌ ಸಾಲ್ಯಾನ್‌, ಕರ್ಣಾಟಕ ಬ್ಯಾಂಕ್‌ ಪ್ರಾದೇಶಿಕ ವ್ಯವಸ್ಥಾಪಕ ರಾಜಗೋಪಾಲ, ಎಸ್‌ಸಿಡಿಸಿಸಿ ಬ್ಯಾಂಕ್‌ ಮಂಗಳೂರು ಕೇಂದ್ರ ಕಚೇರಿಯ ಡಿಜಿಎಂ ನಿತ್ಯಾನಂದ ಉಪಸ್ಥಿತರಿದ್ದರು. ಜಿಲ್ಲಾ ಲೀಡ್‌ ಬ್ಯಾಂಕ್‌ ಮುಖ್ಯ ವ್ಯವಸ್ಥಾಪಕ ಪಿ.ಎಂ. ಪಿಂಜಾರ ಸ್ವಾಗತಿಸಿ ನಿರೂಪಿಸಿದರು.

ಟಾಪ್ ನ್ಯೂಸ್

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

2

Theft Case: ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.