ಯೋಧನನ್ನು ಥಳಿಸಿ PFI ಎಂದು ಬರೆದ ಪ್ರಕರಣಕ್ಕೆ ಟ್ವಿಸ್ಟ್!ತನಿಖೆಯಲ್ಲಿ ನಿಜಾಂಶ ಬಯಲು
ಹಸಿರು ಪೈಂಟ್, ಬ್ರಷ್ ಹಾಗೂ ಟೇಪ್ ಅನ್ನು ವಶಕ್ಕೆ ಪಡೆಯಲಾಗಿದೆ
Team Udayavani, Sep 26, 2023, 3:54 PM IST
ಕೊಲ್ಲಂ(ತಿರುವನಂತಪುರ): ಆರು ಮಂದಿ ಕಿಡಿಗೇಡಿಗಳು ತನ್ನನ್ನು ಅಪಹರಿಸಿ, ನಿರ್ಧಯವಾಗಿ ಥಳಿಸಿ ಬೆನ್ನಿನ ಮೇಲೆ ಪಿಎಫ್ ಐ ಎಂದು ಬರೆದಿರುವುದಾಗಿ ದೂರು ನೀಡಿದ್ದ ಯೋಧ ಹಲ್ವೀಲ್ ಶೈನ್ ಕುಮಾರ್ ಹಾಗೂ ಗೆಳೆಯನನ್ನು ವಶಪಡೆದುಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಇಬ್ಬರನ್ನೂ ವಿಚಾರಣೆಗೊಳಪಡಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:Actress Rajini; ಸೀರಿಯಲ್ ಜರ್ನಿ ಖುಷಿ ಕೊಟ್ಟಿದೆ.. ನಟಿ ರಜಿನಿ ಮಾತು
ಫೇಮಸ್ ಆಗಲು ಕಥೆ ಕಟ್ಟಿದ ಯೋಧ!
ಯೋಧ ಶೈನ್ ಕುಮಾರ್ ಮತ್ತು ಆತನ ಗೆಳೆಯ ನೀಡಿರುವ ಹೇಳಿಕೆ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ. ತಾನು ಭಾರೀ ಹೆಸರುಗಳಿಸಬೇಕು ಎಂಬ ಉದ್ದೇಶದಿಂದ ಯೋಧ ಶೈನ್ ಕುಮಾರ್ ಈ ಕಥೆಯನ್ನು ಹೆಣೆದಿರುವುದಾಗಿ ಗೆಳೆಯ ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿರುವುದಾಗಿ ವರದಿ ತಿಳಿಸಿದೆ.
ಇಡೀ ನಾಟಕದ ಸೂತ್ರಧಾರಿ ಶೈನ್ ಕುಮಾರ್ ಎಂಬುದಾಗಿ ಗೆಳೆಯ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾನೆ. ಗೆಳೆಯನ ಮನೆಯಲ್ಲಿ ಹಸಿರು ಪೈಂಟ್, ಬ್ರಷ್ ಹಾಗೂ ಟೇಪ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕುಮಾರ್ ಮನೆಯ ಸಮೀಪದ ರಬ್ಬರ್ ತೋಟದೊಳಗೆ ಹೋಗಿ ಬೆನ್ನಿನ ಮೇಲೆ ಪಿಎಫ್ ಐ ಎಂದು ಬರೆದು, ಥಳಿಸುವಂತೆ ಗೆಳೆಯನಿಗೆ ಸೂಚನೆ ನೀಡಿದ್ದ. ಈ ಸಂದರ್ಭದಲ್ಲಿ ಗೆಳೆಯ ಮದ್ಯದ ಅಮಲಿನಲ್ಲಿದ್ದು, ಆರಂಭದಲ್ಲಿ ಡಿಎಫ್ ಐ ಅಂತ ಬರೆದಿದ್ದ, ಆದರೆ ಕುಮಾರ್ ಪಿಎಫ್ ಐ ಎಂದು ಬರೆಯುವಂತೆ ಸೂಚಿಸಿದ್ದ. ನಂತರ ತನಗೆ ಹೊಡೆಯುವಂತೆ ಹೇಳಿದ್ದ. ಮದ್ಯ ಸೇವಿಸಿದ್ದರಿಂದ ತನಗೆ ಹೊಡೆಯಲು ಆಗಲಿಲ್ಲ. ಆಗ ಕುಮಾರ್ ನೆಲದ ಮೇಲೆ ಹಾಕಿ ಎಳೆದೊಯ್ಯುವಂತೆ ಹೇಳಿದ. ಅದೂ ಕೂಡಾ ತನ್ನಿಂದ ಸಾಧ್ಯವಾಗಲಿಲ್ಲ. ಕೊನೆಗೆ ಕೈಯನ್ನು ಹಿಂದಕ್ಕೆ ಕಟ್ಟಿ, ಬಾಯಿಗೆ ಟೇಪ್ ಹಾಕಿ ತೆರಳುವಂತೆ ಹೇಳಿದ್ದ ಎಂಬುದಾಗಿ ಗೆಳೆಯ ಪೊಲೀಸರಿಗೆ ವಿವರಣೆ ನೀಡಿರುವುದಾಗಿ ವರದಿ ತಿಳಿಸಿದೆ.
ಆರು ಮಂದಿ ದುಷ್ಕರ್ಮಿಗಳು ತನ್ನನ್ನು ಅಪಹರಿಸಿ ಮನೆ ಸಮೀಪದ ರಬ್ಬರ್ ತೋಟಕ್ಕೆ ಎಳೆದೊಯ್ದು, ಹಿಗ್ಗಾಮುಗ್ಗಾ ಥಳಿಸಿ ಬೆನ್ನಿನ ಮೇಲೆ ಪಿಎಫ್ ಐ ಎಂದು ಪೈಂಟ್ ನಿಂದ ಬರೆದಿರುವುದಾಗಿ ಯೋಧ ಶೈನ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡುತ್ತಿದ್ದರಾ ಮುನಿರತ್ನ?
High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.