World Tourism Day:ಪ್ರಕೃತಿ ಸೃಷ್ಟಿಸಿದ ಸ್ವರ್ಗ, ಚಾರಣ ಪ್ರಿಯರ ನೆಚ್ಚಿನ ತಾಣ “ಕೊಡಚಾದ್ರಿ”

ಚಾರಣವಾದರೆ ಬೆಳಗ್ಗೆ ಆರರಿಂದ ಸಂಜೆ ನಾಲ್ಕರವರೆಗೆ ಅವಕಾಶವಿರುತ್ತದೆ

Team Udayavani, Sep 27, 2023, 1:05 PM IST

World Tourism Day:ಪ್ರಕೃತಿ ಸೃಷ್ಟಿಸಿದ ಸ್ವರ್ಗ, ಚಾರಣ ಪ್ರಿಯರ ನೆಚ್ಚಿನ ತಾಣ “ಕೊಡಚಾದ್ರಿ”

ಆಹಾ! ಕೊಡಚಾದ್ರಿ , ಇದು ಪ್ರಕೃತಿಯು ಸೃಷ್ಟಿಸಿದ ಸ್ವರ್ಗ. ಇದೊಂದು ಪಶ್ಚಿಮ ಘಟ್ಟದ ಚಾರಣ ಸ್ನೇಹಿ ಬೆಟ್ಟವಾಗಿದ್ದು, ಮಲೆನಾಡಿನ ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿದೆ. ಇದೊಂದು ಸುಂದರವಾದ ಪ್ರವಾಸಿ ತಾಣವಾಗಿದ್ದು ಇದನ್ನು ಕಣ್ತುಂಬಿಸಿಕೊಳ್ಳಲು ದೇಶ- ವಿದೇಶದಿಂದ ಹಲವಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇದು ಪ್ರಕೃತಿ ಪ್ರಿಯರಿಗೆ ಮತ್ತು ಚಾರಣಕ್ಕೆ (ಟ್ರಕ್ಕಿಂಗ್) ಹೇಳಿ ಮಾಡಿಸಿದ ಜಾಗ.

ಕೊಡಚಾದ್ರಿಗೆ ಹಿಂದಿನ ಕಾಲದಿಂದಲೂ ಜನರು ಪ್ರವಾಸಕ್ಕೆ ಹೋಗುತ್ತಿದ್ದರು. ಕ್ರಿಸ್ತಶಕ 8ನೇ ಶತಮಾನದಲ್ಲಿ ಶಂಕರಾಚಾರ್ಯರು ಭೇಟಿ ನೀಡಿದ್ದರು ಎಂಬ ಪ್ರತೀತಿಯಿದೆ. ಇಲ್ಲಿ ಇದ್ದ ಮೂಲ ಮೂಕಾಂಬಿಕೆಯನ್ನು ಕೊಲ್ಲೂರಿನಲ್ಲಿ ಪ್ರತಿಷ್ಠೆ ಮಾಡಿದ್ದಾರೆ ಎಂದು ಕೊಲ್ಲೂರಿನ ಸ್ಥಳಪುರಾಣ ಹೇಳುತ್ತದೆ. ಈ ದೇವಾಲಯದ ಬಳಿ ಇರುವ ಸುಮಾರು 40 ಅಡಿ ಎತ್ತರದ ಕಬ್ಬಿಣದ ಕಂಬವು ಮೂಕಾಸುರನನ್ನು ಸಂಹಾರ ಮಾಡಲು ದೇವಿ ಉಪಯೋಗಿಸಿದ ತ್ರಿಶೂಲ ಎಂಬುದು ಸ್ಥಳೀಯರ ಅಭಿಪ್ರಾಯ. ಈ ಬೆಟ್ಟದ ಮೇಲೆ ಸರ್ವಜ್ಞ ಪೀಠ ಎಂಬ ಒಂದು ಸಣ್ಣ ದೇವಾಲಯವಿದೆ. ಸರ್ವಜ್ಞ ಪೀಠದಿಂದ ಮುಂದಕ್ಕೆ ಕಡಿದಾದ ದಾರಿಯನ್ನು ಇಳಿದರೆ ಚಿತ್ರಮೂಲವೆಂಬ ಸ್ಥಳವಿದೆ. ಈ ಜಾಗವು ನಾನಾ ಜಾತಿಯ ಸಸ್ಯಗಳಿಗೆ ಹೆಸರುವಾಸಿಯಾಗಿದೆ.

ಈ ಬೆಟ್ಟವನ್ನು ತಲುಪಲು ತೀರಾ ಕಡಿದಾದ ರಸ್ತೆ ಇದ್ದು ಕೊಲ್ಲೂರು, ನಿಟ್ಟೂರು, ಸಂಪ್ಪೆಕಟ್ಟೆ, ಕಟ್ಟಿನ ಹೊಳೆಯ, ತನಕ ಟಾರ್ ರಸ್ತೆಗಳಿದ್ದು ನಂತರ ಕಡಿದಾದ ರಸ್ತೆ ಇದ್ದು ಜೀಪ್ ಗಳ ವ್ಯವಸ್ಥೆ ಇದೆ. ಇಲ್ಲಿ ಚಾರಣ ಎಂದು ನಡೆದು ಸಾಗುವ ಅನುಭವ ಒಂದಾದರೆ, ಜೀಪಿ ನಲ್ಲಿ ಸಾಗುವ ಅನುಭವ ಮತ್ತೊಂದು ಬಗೆ. ಆ ರಸ್ತೆಯಲ್ಲಿ ವಾಲಾಡುತ್ತ ಈಗ ಬಿದ್ದೆ, ಇನ್ನೊಂದು ಕ್ಷಣಕ್ಕೆ ಬಿದ್ದೆ ಎನ್ನುವಂತಹ ಜೀಪ್ ಪ್ರಯಾಣ ಕನಸಲ್ಲೂ ಬಿಟ್ಟುಬಿಡದಂತೆ ಕಾಡುತ್ತದೆ. ಆದರೆ ಜೀಪ್ ಚಾಲಕರಿಗೆ ಇದು ಬಲು ಸಲೀಸಾದ ಕೆಲಸ. ದಿನಕ್ಕೆ ಜೀಪ್ ಚಾಲಕರು ಎರಡರಿಂದ ಮೂರು ಟ್ರಿಪ್ ಹೋಗುತ್ತಾರೆ. ಹಲವರು ಜೀಪ್ ಚಾಲಕರ ಜೀವನಕ್ಕೆ ಇದು ಆಧಾರವಾಗಿದೆ. ಕಾಲುದಾರಿಯ ಮೂಲಕ ಚಾರಣದ ಅನುಭವ ಪಡೆಯಬಹುದು.

ಸ್ಥಳೀಯ ಗೈಡುಗಳು ಮಾರ್ಗದರ್ಶನ ಕೂಡ ನೀಡುತ್ತಾರೆ. ಚಾರಣ ಮಾಡುವುದಾದರೆ ಆದಷ್ಟು ಗುಂಪಿನಲ್ಲಿ ಹೋಗುವುದು ಉತ್ತಮ. ಜೀಪಿನಲ್ಲಿ ಪ್ರಯಾಣ ಮಾಡಿದರೆ ಕೊಡಚಾದ್ರಿಯ ಸೊಬಗನ್ನು ವೀಕ್ಷಿಸಲು ಎರಡು ಗಂಟೆ ಅವಕಾಶವಿರುತ್ತದೆ. ಚಾರಣವಾದರೆ ಬೆಳಗ್ಗೆ ಆರರಿಂದ ಸಂಜೆ ನಾಲ್ಕರವರೆಗೆ ಅವಕಾಶವಿರುತ್ತದೆ. ಕೊಡಚಾದ್ರಿಯ ಸೂರ್ಯಾಸ್ತ ಅಪರೂಪವಾದ ದೃಶ್ಯವಾಗಿದ್ದು, ಪ್ರವಾಸಿಗರ ಕಣ್ಮನವನ್ನು ಸೆಳೆಯುತ್ತದೆ. ವಿಶಾಲವಾದ ಆಗಸದಲ್ಲಿ ಸೂರ್ಯನು ಸಮುದ್ರದೊಳಗೆ  ಜಾರಿ ಕಣ್ಮರೆಯಾದಂತೆ ಭಾಸವಾಗುತ್ತದೆ. ಸರ್ವಜ್ಞ ಪೀಠವು ಸೂರ್ಯಾಸ್ತವನ್ನು ವೀಕ್ಷಿಸುವ ವಿಹಂಗಮ ಸ್ಥಳವಾಗಿದೆ. ಕೊಡಚಾದ್ರಿಯಾ ಸುತ್ತಮುತ್ತ ಇರುವ ಹಳ್ಳಿಗಳಲ್ಲಿ ಪ್ರವಾಸಿಗರಿಗೆ ಉಳಿಯಲು ಪ್ರವಾಸಿ ಮಂದಿರಗಳು ಲಭ್ಯವಿದೆ.

ಕೊಡಚಾದ್ರಿಗೆ ಸಾಗುವ ದಾರಿಯು  ನರಕ ಎನಿಸಿದರು, ಅಲ್ಲಿನ ಸೌಂದರ್ಯ ಭೂಮಿಯ ಮೇಲಿನ ಸ್ವರ್ಗದಂತೆ ಮನಸ್ಸಿಗೆ ಮುದ ನೀಡುತ್ತದೆ. ಇಲ್ಲಿನ ತಂಪಾದ ಗಾಳಿ, ಪ್ರಕೃತಿ ಸೌಂದರ್ಯ, ನಮ್ಮ ಮನಸ್ಸಿನಲ್ಲಿರುವ ಚಿಂತೆಗಳನ್ನು ಹೊರಹಾಕಿ ಮನಸ್ಸಿಗೆ ಹಿತವನ್ನು ನೀಡುತ್ತದೆ. ಇಲ್ಲಿಗೆ ಒಂದು ಸಲ ಭೇಟಿ ನೀಡಿದರೆ ಅಲ್ಲಿನ ಪ್ರಕೃತಿ ಸೌಂದರ್ಯಕ್ಕೆ ನಮ್ಮ ತನು-ಮನ ಅಲ್ಲಿಯೇ ಮನೆಮಾಡುತ್ತದೆ.

ಮೇದಿನಿ.ಎಸ್.ಭಟ್, ಎಂ.ಜಿ.ಎಂ ಕಾಲೇಜು ಉಡುಪಿ

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupati: ಲಡ್ಡು ಪ್ರಸಾದ ಪ್ರಮಾದ!

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.