Vijayapura: ಸ್ಮಾರಕ ವಿಕೃತಿಗೊಳಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಕೆ


Team Udayavani, Sep 27, 2023, 1:45 PM IST

Vijayapura: ಸ್ಮಾರಕ ವಿಕೃತಿಗೊಳಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಕೆ

ವಿಜಯಪುರ: ಪಾರಂಪರಿಕ ಸ್ಮಾರಕಗಳನ್ನು ವಿಕೃತಿಗೊಳಿಸಿದರೆ ಗೂಂಡಾಗಳ ವಿರುದ್ಧ ಕೈಗೊಳ್ಳುವಂತೆ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಸಿದರು.

ಬುಧವಾರ ನಗರದ ಐತಿಹಾಸಿಕ ಬೇಗಂ ತಲಾಬ್ ಸ್ಮಾರಕದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಖಂಡ ವಿಜಯಪುರ ಜಿಲ್ಲೆ ಪ್ರವಾಸಿಗರನ್ನು ಆಕರ್ಷಿಸುವ ದೊಡ್ಡ ಶಕ್ತಿ ಹೊಂದಿದೆ. ಆದರೆ ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ಜನರು ಮಾಲಿನ್ಯ ಸೃಷ್ಟಿಸುವ ವರ್ತನೆ ಪ್ರವಾಸಿಗರನ್ನು ಆಕರ್ಷಿಸುವಲ್ಲಿ ಹಿನ್ನಡೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಪಾರಂಪರಿಕ ಸ್ಮಾರಕಗಳ ಸಂರಕ್ಷಣೆಗಾಗಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಈಗಾಗಲೇ ಆನಂದಮಹಲ್ ಐದು ಕೋಟಿ ರೂ. ವೆಚ್ಚದಲ್ಲಿ ನವೀಕರಿಸುವ ಯೋಜನೆ ಅಂತಿಮ ಹಂತದಲ್ಲಿದ್ದು, ಸ್ಮಾರಕ ಸಂರಕ್ಷಣೆ, ಫೋಟೋ ಗ್ಯಾಲರಿ ಸ್ಥಾಪನೆಗೆ ಆದ್ಯತೆ ನೀಡುವಂತೆಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಪಾರಂಪರಿಕ ಸ್ನಾರಕಗಳ ಸಂರಕ್ಷಣೆ ಹಾಗೂ ಸ್ವಚ್ಚತಾ ಪರಿಸರ ನಿರ್ಮಿಸುವುದು ಜಿಲ್ಲೆಯ ಜನರ ಜವಾಬ್ದಾರಿ. ಸ್ವಚ್ಚತೆ ವಿಷಯದಲ್ಲಿ ಜಿಲ್ಲೆಯ ಜನರು ವಿಶೇಷ ಜಾಗೃತಿ ಅಗತ್ಯವಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಸಂರಕ್ಷಣೆ, ಸೌಂದರ್ಯೀಕರ ಕಾಯ್ದುಕೊಳ್ಳುವಲ್ಲಿ ಜಿಲ್ಲೆಯ ಜನರು ಜಿಲ್ಲಾಡಳಿತದ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲೆ ಪಾರಂಪರಿಕ, ಧಾರ್ಮಿಕ, ಆಧುನಿಕ ನಿರ್ಮಾಣಗಳ ಪ್ರವಾಸೋದ್ಯಮ ವಿಜಯಪುರ ತಾಲ್ಲೂಕಿನಲ್ಲಿ ಸಮೃದ್ಧವಾಗಿದೆ. ಪ್ರವಾಸೋದ್ಯಮ ಬಲವರ್ಧನೆಯಿಂದ ಜಿಲ್ಲೆಯ ಆರ್ಥಿಕ ಶಕ್ತಿ ವೃದ್ಧಿಸುವಲ್ಲಿ ಸಹಕಾರಿ ಆಗಲಿದೆ ಎಂದರು.

ಪ್ರವಾಸಿಗರನ್ನು ಆಕರ್ಷಿಸುವಲ್ಲಿ ಭವಿಷ್ಯದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ವಿಜಯಪುರ ಮಾರ್ಗವಾಗಿ ಹೆಚ್ಚಿನ ರೈಲು ಸೇವೆಗಳು, ರಾಜ್ಯದ ಹಾಗೂ ಹೊರ ರಾಜ್ಯದ ಪ್ರಮುಖ ನಗರಗಳಿಂದ ರಸ್ತೆ ಸಾರಿಗೆ ಸೇವೆಗಳು ಲಭ್ಯವಿದೆ. ಆದರೂ ಪ್ರವಾಸಿಗರನ್ನು ಆಕರ್ಷಿಸುವಲ್ಲಿ ವಿಜಯಪುರ ಜಿಲ್ಲೆ ಸೋಲುತ್ತಿರುವುದು ನೋವಿನ ಸಂಗತಿ ಎಂದರು.

ವಿಶೇಷ ಉಪನ್ಯಾಸ ನೀಡಿದ ವಿಕ್ರಮ ಬೆಳಂಕಿ, ದೇಶದ ಆದಾಯ ತರುವಲ್ಲಿ ಪ್ರವಾಸೋದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಪಾರಂಪರಿಕ, ಸಾಹಸ, ಪ್ರಕೃತಿ ಪ್ರವಾಸೋದ್ಯನದ ಜೊತೆಗೆ ಈಚೆಗೆ ಕೃಷಿ ಪ್ರವಾಸೋದ್ಯಮ, ಆಯುರ್ವೇದಿಕ್ ಚಿಕಿತ್ಸಾ ಪ್ರವಾಸೋದ್ಯಮ ಹೀಗೆ ಆಧುನಿಕ ಪರಿಕಲ್ಪನೆಯ ಪ್ರವಾಸೋದ್ಯಮ ಬಲವರ್ಧನೆ ವಿಷಯದಲ್ಲಿ ಯುವ ಸಮೂಹ ಚಿತ್ತ ನೆಡಬೇಕಿದೆ ಎಂದರು.

ಇಗ್ನೋ ಪ್ರಾದೇಶಿಕ ನಿರ್ದೇಶಕ ವರದರಾಜನ್, ಪೀಟರ್ ಅಲೆಗ್ಸಾಂಡರ್, ಸಣ್ಣ ನೀರಾವರಿ ಇಲಾಖೆಯ ವಿ.ಸಿ.ವಸ್ತ್ರದ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ವಿಕ್ರಮ ಬೆಳಂಕಿ, ಆರ್.ಕೆ.ಎಂ. ಕಾಲೇಜು ಮುಖ್ಯಸ್ಥ ಶಂಭುಲಿಂಗ ಕರ್ಪುರಮಠ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಎ.ಎಸ್.ಐ. ಪ್ರಸನ್ನ, ವಿಜಯ ಇತರರು ಉಪಸ್ಥಿತರಿದ್ದರು.

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಪ್ರಾಸ್ತಾವಿಕ ಮಾತನಾಡಿದರು. ಹುಮಾಯುನ್ ಮಮದಾಪುರ ನಿರೂಪಿಸಿದರು. ಪ್ರವಾಸೋದ್ಯಮ ಇಲಾಖೆ ತುಕಾರಾಮ ಪವಾರ ವಂದಿಸಿದರು.

ಇದನ್ನೂ ಓದಿ: Ramanagara: ಚುನಾವಣಾಧಿಕಾರಿಗಳ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.