
Udupi: 3-4 ದಿನದೊಳಗೆ ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ… : ಕೋಟ ಎಚ್ಚರಿಕೆ
Team Udayavani, Sep 27, 2023, 2:05 PM IST

ಉಡುಪಿ: ಮೂರು ಅಥವಾ ನಾಲ್ಕು ದಿನದಲ್ಲಿ ಜಿಲ್ಲೆಯ ಮರಳು ಸಮಸ್ಯೆ ಹಾಗೂ ಲಾರಿ, ಟೆಂಪೋ ಮಾಲಕರ ಪರವಾನಿಗೆ ಸಮಸ್ಯೆ/ಗೊಂದಲ ಬಗೆಹರಿಸಬೇಕು. ಇಲ್ಲವಾದರೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದಿರು ಎಲ್ಲ ಶಾಸಕರು ಸೇರಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಮಾಜಿ ಸಚಿವರಾದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಶಾಸಕರಾದ ಗುರುರಾಜ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಿರಣ್ ಕೊಡ್ಗಿಯವರೊಂದಿಗೆ ಬುಧವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿದ ಅವರು, ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಹೆಚ್ಚಾಗಿದೆ. ಲಾರಿ, ಟೆಂಪೋ ಮಾಲಕರು ಮುಷ್ಕರ ಆರಂಭಿಸಿದ್ದಾರೆ. ನಿರ್ಮಾಣ ವಲಯ ಸೇರಿದಂತೆ ರೈತರಿಗೂ ಮಣ್ಣು, ಕಲ್ಲು ಸಾಗಿಸುವುದು ಸಮಸ್ಯೆಯಾಗುತ್ತಿದೆ. ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಸಮಸ್ಯೆಯ ಗಂಭೀರತೆಯನ್ನು ಅರಿತು ಮಧ್ಯ ತತ್ ಕ್ಷಣ ಪರಿಹಾರ ಸೂಚಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಧರಣಿ ಆರಂಭಿಸಲಿದ್ದೇವೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: Karnataka Politics: ಜೆಡಿಎಸ್ ಕೊನೆಯ ಹಂತ ತಲುಪಿದೆ: ದಿನೇಶ್ ಗುಂಡೂರಾವ್
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.